ಕೆನರಾ ಬ್ಯಾಂಕ್ ಸಿದ್ದಾಪುರ ಶಾಖೆ: ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ
Team Udayavani, Jul 16, 2017, 3:50 AM IST
ಸಿದ್ದಾಪುರ: ಕೆನರಾ ಬ್ಯಾಂಕು ಸಿದ್ದಾಪುರ ಶಾಖೆ ವ್ಯವಹಾರದಲ್ಲಿ ಅಖೀಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದೆ.
ಉಳಿತಾಯ ಖಾತೆ, ಚಾಲ್ತಿ ಖಾತೆ, ನಿರಖು ಠೇವಣಿ, ಗೃಹ ಸಾಲ, ವಾಹನ ಸಾಲದ ವ್ಯವಹಾರದಲ್ಲಿ ಪ್ರಥಮ ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ಸಿದ್ದಾಪುರ ಶಾಖೆಯ ಶಾಖಾ ವ್ಯವಸ್ಥಾಪಕ ರತ್ನಾಕರ ಗಾಣಿಗ ಅವರನ್ನು ಬೆಂಗಳೂರಿನ ಕೆನರಾ ಬ್ಯಾಂಕ್ನ ಕೇಂದ್ರ ಕಚೇರಿಯಲ್ಲಿ ಅಖೀಲ ಭಾರತ ಮಟ್ಟದ ಗುರುತಿಸುವಿಕೆ ಕಾರ್ಯಕ್ರಮದಲ್ಲಿ ಸಮ್ಮಾನಿಸಿ ಗೌರವಿಸಲಾಯಿತು.
ಕೆನರಾ ಬ್ಯಾಂಕ್ ಸಿದ್ದಾಪುರ ಶಾಖೆ ಪ್ರಾರಂಭಗೊಂಡು ಕೇವಲ 18 ತಿಂಗಳುಗಳಲ್ಲಿ ಅಖೀಲ ಭಾರತ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಸಾಧನೆ ಮಾಡಿದ ಶಾಖಾ ವ್ಯವಸ್ಥಾಪಕ ರತ್ನಾಕರ ಗಾಣಿಗ ಅವರ ಸಾಧನೆಯನ್ನು ಅತಿಥಿಗಳು ಶ್ಲಾಘಿಸಿದರು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಕೇಶ್ ಶರ್ಮ, ಇಡಿ ಭಾರತಿ, ಜನರಲ್ ಮ್ಯಾನೇಜರ್ ಎಸ್.ಎಸ್. ಶರ್ಮ, ಸಹಾಯಕ ಜನರಲ್ ಮ್ಯಾನೇಜರ್ ಎಸ್.ಟಿ. ರಾಮಚಂದ್ರ, ವೃತ್ತ ಕಾರ್ಯಾಲಯ, ಕ್ಷೇತ್ರ ಕಾರ್ಯಾಲಯ ಹಾಗೂ ಶಾಖೆಗಳ ಮುಖ್ಯಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ