ಕೋಚ್‌ ರವಿಶಾಸ್ತ್ರಿ  ಸಂಭಾವನೆ ನಿಗದಿಗೊಳಿಸಲು ಸಮಿತಿ ರಚನೆ


Team Udayavani, Jul 16, 2017, 3:45 AM IST

RAVI-SHASTRI.jpg

ಹೊಸದಿಲ್ಲಿ: ಟೀಮ್‌ ಇಂಡಿಯಾದ ನೂತನ ಕೋಚ್‌ ಆಗಿ ಆಯ್ಕೆಯಾಗಿರುವ ರವಿಶಾಸ್ತ್ರಿ ಅವರ ಸಂಭಾವನೆ ಎಷ್ಟು? ಇದು ಎಲ್ಲರನ್ನೂ ಕಾಡುವ ಕುತೂಹಲ. 

ನಿಜಕ್ಕಾದರೆ ಬಿಸಿಸಿಐ ಇನ್ನೂ ಈ ವಿಚಾರವಾಗಿ ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಬದಲಾಗಿ ಸಂಭಾವನೆಯನ್ನು ನಿಗದಿಗೊಳಿಸಲೆಂದೇ ಸರ್ವೋಚ್ಚ ನ್ಯಾಯಾಲಯದಿಂದ ನೇಮಿಸಲ್ಪಟ್ಟ ಆಡಳಿತಾಧಿಕಾರಿಗಳ ಕಮಿಟಿ (ಸಿಒಎ) ಯು 4 ಸದಸ್ಯರ ಸಮಿತಿಯೊಂದನ್ನು ರಚಿಸಿದೆ. ಇದು ಕೋಚ್‌ ಹಾಗೂ ಅವರ ಸಹಾಯಕ ಸಿಬಂದಿಗಳ ವೇತನವನ್ನು ಜು. 19ರಂದು ನಡೆಯುವ ಸಭೆಯಲ್ಲಿ ನಿಗದಿಗೊಳಿಸಲಿದೆ. ಬಳಿಕ ಜು. 22ರಂದು ಸಂಭಾವನೆ ಕುರಿತ ತನ್ನ ವರದಿಯನ್ನು ಸಿಒಎಗೆ ನೀಡಲಿದೆ.

ಬಿಸಿಸಿಐನ ಉಸ್ತುವಾರಿ ಅಧ್ಯಕ್ಷ ಸಿ.ಕೆ. ಖನ್ನಾ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್‌ ಜೊಹ್ರಿ ಈ ಸಮಿತಿಯ ಇಬ್ಬರು ಪ್ರಮುಖರು. ಸಮಿತಿಯ ಉಳಿದಿಬ್ಬರೆಂದರೆ ಸಿಒಎ ಸದಸ್ಯೆ ಡಯಾನಾ ಎಡುಲ್ಜಿ ಮತ್ತು ಬಿಸಿಸಿಐಯ ಉಸ್ತುವಾರಿ ಕಾರ್ಯದರ್ಶಿ ಅಮಿತಾಭ್‌ ಚೌಧರಿ. ಶನಿವಾರದ ಸಿಒಎ ಸಭೆಯಲ್ಲಿ ಈ ಸಮಿತಿ ಯನ್ನು ರಚಿಸಲಾಯಿತು. 

ಸಚಿನ್‌ ತೆಂಡುಲ್ಕರ್‌, ಸೌರವ್‌ ಗಂಗೂಲಿ ಹಾಗೂ ವಿವಿಎಸ್‌ ಲಕ್ಷ್ಮಣ್‌ ಅವರನ್ನೊಳಗೊಂಡ ಕ್ರಿಕೆಟ್‌ ಸಲಹಾ ಸಮಿತಿ (ಸಿಎಸಿ) ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರನ್ನು ಭಾರತ ತಂಡದ ನೂತನ ಕೋಚ್‌ ಆಗಿ ನೇಮಿಸಿತ್ತು. ಜತೆಗೆ ಜಹೀರ್‌ ಖಾನ್‌ ಅವರನ್ನು ಬೌಲಿಂಗ್‌ ಕೋಚ್‌ ಆಗಿ, ರಾಹುಲ್‌ ದ್ರಾವಿಡ್‌ ಅವರನ್ನು ಕೆಲವು ನಿರ್ದಿಷ್ಟ ಪ್ರವಾಸಗಳ ವೇಳೆ ತಂಡದ ಬ್ಯಾಟಿಂಗ್‌ ಸಲಹಾಗಾರನನ್ನಾಗಿ ನೇಮಿಸಿತ್ತು. ಭಾರತ ತಂಡ ಜು. 19ರಂದು ಶ್ರೀಲಂಕಾ ಪ್ರವಾಸಕ್ಕೆ ತೆರಳಲಿದ್ದು, ಜಹೀರ್‌ ಮತ್ತು ದ್ರಾವಿಡ್‌ ತಂಡದ ಜತೆ ಇರುತ್ತಾರೋ ಇಲ್ಲವೋ ಎಂಬುದು ಇನ್ನೂ ಖಾತ್ರಿಯಾಗಿಲ್ಲ.

ಸೋಮವಾರ ಶಾಸ್ತ್ರಿ-ಸಿಒಎ ಭೇಟಿ
ತನ್ನ ಸಹಾಯಕ ಸಿಬಂದಿಗಳ ನೇಮಕಾತಿಯನ್ನು ಅಂತಿಮಗೊಳಿಸಲು ಕೋಚ್‌ ರವಿ ಶಾಸ್ತ್ರಿ ಸೋಮವಾರ ಆಡಳಿತಾಧಿಕಾರಿಗಳ ಸಮಿತಿ (ಸಿಒಎ) ಯನ್ನು  ಭೇಟಿಯಾಗಲು ನಿರ್ಧರಿಸಿದ್ದು ಶನಿವಾರದ ಇನ್ನೊಂದು ಪ್ರಮುಖ ಬೆಳವಣಿಗೆಯಾಗಿದೆ.

ಮ್ಯಾನೇಜರ್‌ ಹುದ್ದೆಗೂ ಅರ್ಜಿ ಕರೆದ ಬಿಸಿಸಿಐ
ಮುಂಬಯಿ: ಮಾಜಿ ಕ್ರಿಕೆಟಿಗ ರವಿ ಶಾಸ್ತ್ರಿ ಅವರನ್ನು ಟೀಮ್‌ ಇಂಡಿಯಾದ ನೂತನ ಕೋಚ್‌ ಆಗಿ ನೇಮಕ ಮಾಡಿದ ಬೆನ್ನಲ್ಲೇ ಭಾರತ ತಂಡದ ಮ್ಯಾನೇಜರ್‌ ಹುದ್ದೆಗೂ ಬಿಸಿಸಿಐ ಅರ್ಜಿ ಆಹ್ವಾನಿಸಿದೆ. 

ಆಸಕ್ತ ಅಭ್ಯರ್ಥಿಗಳು ಪ್ರಥಮ ದರ್ಜೆ ಕ್ರಿಕೆಟ್‌ ಅಥವಾ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೂಟಗಳಲ್ಲಿ ಕಡ್ಡಾಯವಾಗಿ ಭಾಗವಹಿಸಿರಬೇಕು. ಖಾಸಗಿ ಅಥವಾ ಸಾರ್ವಜನಿಕ ವಲಯದಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿರಬೇಕು. ಅಭ್ಯರ್ಥಿಗಳ ವಯಸ್ಸು 60 ವರ್ಷ ಮೀರಿರಬಾರದು ಎನ್ನುವುದು ಬಿಸಿಸಿಐಯ ಮುಖ್ಯ ನಿಯಮಗಳಾಗಿವೆ. ಭಾರತ ತಂಡದ ಮ್ಯಾನೇಜರ್‌ ಹುದ್ದೆಯ ಅವಧಿ ಒಂದು ವರ್ಷದ್ದಾಗಿದೆ. ಅರ್ಹ ಅಭ್ಯರ್ಥಿ ಗಳು ಜುಲೈ 21ರೊಳಗೆ ಅರ್ಜಿ ಸಲ್ಲಿಸಲು ಬಿಸಿಸಿಐ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿದೆ. 

ಇಂಗ್ಲೆಂಡ್‌ನ‌ಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ ವೇಳೆ ಕಪಿಲ್‌ ಮಲ್ಹೋತ್ರಾ ಭಾರತ ತಂಡದ ಮ್ಯಾನೇಜರ್‌ ಆಗಿದ್ದರು. ಈ ಪ್ರವಾಸದಲ್ಲೇ ಕೋಚ್‌ ಕುಂಬ್ಳೆ ಮತ್ತು ನಾಯಕ ಕೊಹ್ಲಿ ನಡುವಿನ ಭಿನ್ನಮತ ಸ್ಫೋಟಗೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ವರದಿ ಕೇಳಿದಾಗ, ಯಾವುದೇ ನಿರ್ದಿಷ್ಟ ಘಟನೆಯನ್ನು ಉಲ್ಲೇಖೀ ಸುವಲ್ಲಿ ಮಲ್ಹೋತ್ರಾ ವಿಫ‌ಲರಾಗಿದ್ದರು. ಹೀಗಾಗಿ ತಂಡಕ್ಕೆ ವೃತ್ತಿಪರ ಕೋಚ್‌ ಓರ್ವರನ್ನು ನೇಮಿಸು ವುದು ಮಂಡಳಿಯ ಮುಖ್ಯ ಉದ್ದೇಶವಾಗಿದೆ.

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.