ಜಮೀನು ವಿವಾದ: ಒಂದೇ ಕುಟುಂಬದ ಮೂವರ ಹತ್ಯೆ
Team Udayavani, Jul 17, 2017, 4:00 AM IST
ಸೇಡಂ: ಜಮೀನು ಮಾರಾಟ ವಿವಾದ ಸಂಬಂಧ ಒಂದೇ ಕುಟುಂಬದ ಮೂವರನ್ನು ಕೊಲೆ ಮಾಡಿರುವ ದಾರುಣ
ಘಟನೆ ತಾಲೂಕಿನ ಮುಗನೂರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ಗುತ್ತೇದಾರ ಮತ್ತು ಕೊಳ್ಳಿ ಕುಟುಂಬಗಳ ನಡುವೆ ಜಮೀನು ವಿಚಾರವಾಗಿ
ನಡೆದ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಕೊಲೆಯಲ್ಲಿ ಅಂತ್ಯ ಕಂಡಿದೆ. ಭಾನುವಾರ ಬೆಳಗ್ಗೆ ಮುಗನೂರ ಗ್ರಾಮದಿಂದ 1 ಕಿ.ಮೀ. ದೂರದಲ್ಲಿರುವ ವಿವಾದಿತ ಜಮೀನಿನಲ್ಲೇ ದೇವರಾಯ ಅಡಿವೆಪ್ಪ ಕೊಳ್ಳಿ (58), ಕಾಶಮ್ಮ ದೇವರಾಯ (45), ರಾಜಶೇಖರ ಬಸವರಾಜ ಕೊಳ್ಳಿ (23), ಅಡಿವೆಪ್ಪ ದೇವರಾಯ (42), ಜಗದೇವಿ ಬಸವರಾಜ (35), ಭೀಮರಾಯ ಬಸವರಾಜ (25) ಎನ್ನುವ ಆರು ಜನರ ಮೇಲೆ ಗ್ರಾಮದ ಕೆಲವರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಆರೋಪಿಗಳು ಗ್ರಾಮಕ್ಕೆ ಬಂದು ಹಲ್ಲೆ ಮಾಡಿರುವುದಾಗಿ ಕೆಲವರ ಮುಂದೆ ಹೇಳಿಕೊಂಡಿದ್ದಾರೆ. ಸುದ್ದಿ ತಿಳಿದ ಗ್ರಾಮಸ್ಥರು ಗಾಯಾಳುಗಳನ್ನು ಸೇಡಂ ಸರಕಾರಿ ಆಸ್ಪತ್ರೆಗೆ ಟ್ರಾಕ್ಟರ್ನಲ್ಲಿ ಸಾಗಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ತೆರಳುವ ದಾರಿ ಮಧ್ಯೆ ದೇವರಾಯ, ಕಾಶಮ್ಮ ಮತ್ತು ರಾಜಶೇಖರ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಈ ಕುರಿತು ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್