ಕೆ.ಜಿ.ರಸ್ತೆಯಲ್ಲಿ ಸಿನ್ಮಾ ಟ್ರಾಫಿಕ್‌


Team Udayavani, Jul 17, 2017, 10:56 AM IST

kg-road-cinma.jpg

ಸಿನಿಮಾಗಳ ಬಿಡುಗಡೆ ವಾರದಿಂದ ವಾರಕ್ಕೆ ಹೆಚ್ಚಾಗುತ್ತಲೇ ಇದೆ. ಕಳೆದ ವಾರ ಐದು ಸಿನಿಮಾಗಳು ಬಿಡುಗಡೆಯಾಗಿದ್ದವು. ಅದಕ್ಕಿಂತ ಹಿಂದಿನ ವಾರ ನಾಲ್ಕು ಸಿನಿಮಾಗಳು ತೆರೆಗೆ ಬಂದಿದ್ದವು. ಹೀಗೆ ಸತತವಾಗಿ ವಾರಕ್ಕೆ ನಾಲ್ಕೈದು ಸಿನಿಮಾಗಳು ಬಿಡುಗಡೆಯಾಗುತ್ತಾ ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಲೇ ಇವೆ. ಆದರೆ, ಈ ವಾರ ಮಾತ್ರ ಬರೋಬ್ಬರಿ ಏಳು ಸಿನಿಮಾಗಳು ತೆರೆಕಾಣುತ್ತಿರೋದು ವಿಶೇಷ.

ಇತ್ತೀಚಿನ ದಿನಗಳಲ್ಲಿ ಒಂದೇ ವಾರದಲ್ಲಿ ಏಳು ಸಿನಿಮಾಗಳು ತೆರೆಕಂಡ ಉದಾಹರಣೆ ಇರಲಿಲ್ಲ. ಈ ಹಿಂದೆ ಏಳು ಸಿನಿಮಾಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿದ್ದರೂ ಕೊನೆಕ್ಷಣದಲ್ಲಿ ಬಿಡುಗಡೆಯನ್ನು ಮುಂದಕ್ಕೆ ಹಾಕಿದ್ದವು. ಈ ವಾರ ಕೆ.ಜಿ.ರಸ್ತೆ ಏಳು ಸಿನಿಮಾಗಳ ಬಿಡುಗಡೆಗೆ ಸಾಕ್ಷಿಯಾಗುತ್ತಿದೆ. 

ಈ ಶುಕ್ರವಾರ ಅಂದರೆ ಜುಲೈ 21 ರಂದು “ಧೈರ್ಯಂ’, “ದಾದಾ ಇಸ್‌ ಬ್ಯಾಕ್‌’, “ಆಪರೇಷನ್‌ ಅಲಮೇಲಮ್ಮ’, “ಮೀನಾಕ್ಷಿ’, “ಟಾಸ್‌’, “ಶ್ವೇತ’ ಹಾಗೂ “ಟ್ರಿಗರ್‌’ ಚಿತ್ರಗಳು ಈ ವಾರ ತೆರೆಕಾಣುತ್ತಿವೆ. ಹೊಸಬರ ಹಾಗೂ ಈಗಾಗಲೇ ಚಿತ್ರಪ್ರೇಮಿಗಳಿಗೆ ಪರಿಚಿತರಾಗಿರುವವರ ಚಿತ್ರಗಳು ಈ ಪಟ್ಟಿಯಲ್ಲಿವೆ ಎಂಬುದು ವಿಶೇಷ. ಆ್ಯಕ್ಷನ್‌, ಲವ್‌ಸ್ಟೋರಿ, ಕಾಮಿಡಿ, ಹಾರರ್‌ ಜಾನರ್‌ಗೆ ಸೇರಿದ ಚಿತ್ರಗಳು ಒಂದೇ ವಾರ ಒಟ್ಟಿಗೆ ತೆರೆಕಾಣುವ ಮೂಲಕ ಪ್ರೇಕ್ಷಕರಿಗೆ ಆಯ್ಕೆಯ ಅವಕಾಶ ಮಾಡಿಕೊಟ್ಟಿವೆ. 

ಅಜೇಯ್‌ ರಾವ್‌ ಮೊದಲ ಬಾರಿಗೆ ಆ್ಯಕ್ಷನ್‌ ಇಮೇಜ್‌ನಲ್ಲಿ ಕಾಣಿಸಿಕೊಂಡಿರುವ “ಧೈರ್ಯಂ’ ಚಿತ್ರವನ್ನು ಶಿವತೇಜಸ್‌ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ “ಮಳೆ’ ಚಿತ್ರ ನಿರ್ಮಿಸಿದ್ದ ಶಿವ ತೇಜಸ್‌ ಅವರ ಎರಡನೇ ಚಿತ್ರವಿದು. ಚಿತ್ರದಲ್ಲಿ ಆದಿತಿ ನಾಯಕಿಯಾಗಿ ನಟಿಸಿದ್ದು, ರವಿಶಂಕರ್‌ ಪೊಲೀಸ್‌ ಆಫೀಸರ್‌ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಡಾ.ರಾಜು ನಿರ್ಮಾಣ ಮಾಡಿದ್ದಾರೆ.

ಮಧ್ಯಮ ವರ್ಗದ ಹುಡುಗನೊಬ್ಬ ತನಗೆ ಬರುವ ಸಮಸ್ಯೆಗಳನ್ನು ಧೈರ್ಯದಿಂದ ಹೇಗೆ ಎದುರಿಸುತ್ತಾನೆಂಬ ಅಂಶಗಳೊಂದಿಗೆ ಈ ಚಿತ್ರ ಸಾಗುತ್ತದೆ. ಈಗಾಗಲೇ ಚಿತ್ರದ ಟ್ರೇಲರ್‌ ಹಾಗೂ ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗಿರುವುದರಿಂದ ಸಿನಿಮಾವನ್ನು ಕೂಡಾ ಜನ ಇಷ್ಟಪಡುತ್ತಾರೆಂಬ ವಿಶ್ವಾಸದಲ್ಲಿ ಚಿತ್ರತಂಡ ಶುಕ್ರವಾರಕ್ಕಾಗಿ ಎದುರು ನೋಡುತ್ತಿದೆ. ಚಿತ್ರ ತ್ರಿವೇಣಿಯಲ್ಲಿ ಬಿಡುಗಡೆಯಾಗುತ್ತಿದೆ.

ಇನ್ನು “ದಾದಾ ಇಸ್‌ ಬ್ಯಾಕ್‌’ ಚಿತ್ರವನ್ನು ಈ ಹಿಂದೆ “ಗೊಂಬೆಗಳ ಲವ್‌’ ಮಾಡಿದ ಸಂತೋಷ್‌ ನಿರ್ದೇಶನ ಮಾಡಿದ್ದು, ಅರುಣ್‌ ನಾಯಕರಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಪಾರ್ಥಿಬನ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದು, ಶಾರದಾ ಚಿತ್ರಮಂದಿರಲ್ಲಿ ಚಿತ್ರ ತೆರೆಕಾಣುತ್ತಿದೆ. ಸುನಿ ನಿರ್ದೇಶನದ “ಆಪರೇಷನ್‌ ಅಲಮೇಲಮ್ಮ’ ಒಂದು ಹೊಸ ಪ್ರಯೋಗದ ಚಿತ್ರವಾಗಿದ್ದು, ಚಿತ್ರದಲ್ಲಿ ರಿಷಿ ಹಾಗೂ ಶ್ರದ್ಧಾ ಶ್ರೀನಾಥ್‌ ನಟಿಸಿದ್ದಾರೆ.

ಟ್ರೇಲರ್‌ ಹಿಟ್‌ ಆಗಿದ್ದು, ಚಿತ್ರದ ಮೇಲೂ ಚಿತ್ರತಂಡ ಸಾಕಷ್ಟು ನಿರೀಕ್ಷೆ ಇಟ್ಟಿದೆ. ಈ ಚಿತ್ರ ಕೆ.ಜಿ.ರಸ್ತೆಯ ಸಂತೋಷ್‌ ಚಿತ್ರಮಂದಿರದಲ್ಲಿ ತೆರೆಕಾಣುತ್ತಿದೆ. ಇದಲ್ಲದೇ, ವಿಜಯರಾಘವೇಂದ್ರ ಐದು ವರ್ಷಗಳ ಹಿಂದೆ ಒಪ್ಪಿಕೊಂಡು ನಟಿಸಿದ “ಟಾಸ್‌’ ಚಿತ್ರ ಕೂಡಾ ಈ ವಾರ ಬಿಡುಗಡೆಯಾಗುತ್ತಿದ್ದು, ಈ ಚಿತ್ರವನ್ನು ದಯಾಳ್‌ ಪದ್ಮನಾಭನ್‌ ನಿರ್ದೇಶಿಸಿದ್ದಾರೆ. ಈ ಹಿಂದೆ ಈ ಚಿತ್ರಕ್ಕೆ “ಒಂದು ರೂಪಾಯಿ ಎರಡು ಪ್ರೀತಿ’ ಎಂದು ಟೈಟಲ್‌ ಇಡಲಾಗಿತ್ತು.

ಈಗ ಅದು ಟ್ಯಾಗ್‌ಲೈನ್‌ ಆಗಿ “ಟಾಸ್‌’ ಎಂಬ ಟೈಟಲ್‌ನೊಂದಿಗೆ ಬಿಡುಗಡೆಯಾಗುತ್ತಿದೆ. ಇದಲ್ಲದೇ, “ಶ್ವೇತ’ ಎಂಬ ಹಾರರ್‌ ಸಿನಿಮಾ ಸ್ವಪ್ನ ಚಿತ್ರಮಂದಿರದಲ್ಲಿ, “ಟ್ರಿಗರ್‌’ ಎಂಬ ಚಿತ್ರ ಭೂಮಿಕಾದಲ್ಲಿ ಬಿಡುಗಡೆಯಾಗುತ್ತಿದೆ. ಜೊತೆಗೆ ಶುಭಾಪೂಂಜಾ ಅಭಿನಯದ “ಮೀನಾಕ್ಷಿ’ ಚಿತ್ರ ಕೂಡಾ ತನ್ನ ಬಿಡುಗಡೆಯನ್ನು ಘೋಷಿಸಿಕೊಂಡಿದ್ದು, ಕೆ.ಜಿ.ರಸ್ತೆಯ ಚಿತ್ರಮಂದಿರ ಘೋಷಿಸಿಲ್ಲ. ವಾರದಿಂದ ವಾರಕ್ಕೆ ಬಿಡುಗಡೆಯಾಗುತ್ತಿರುವ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿರುವ ಮೂಲಕ ಥಿಯೇಟರ್‌ ಸಮಸ್ಯೆ ಕೂಡಾ ಎದುರಾಗುತ್ತಿದೆ.

ಹಿಂದಿನ ವಾರ ತೆರೆಕಂಡ ಚಿತ್ರಗಳು ಒಂದೇ ವಾರಕ್ಕೆ ಥಿಯೇಟರ್‌ ಬಿಟ್ಟುಕೊಡುವಂತಾಗಿದೆ. ಹಾಗಾಗಿಯೇ “ಹೊಂಬಣ್ಣ’, “ಕಥಾವಿಚಿತ್ರ’ ಸೇರಿದಂತೆ ಅನೇಕ ಚಿತ್ರಗಳು ಈಗ ಪ್ರಮುಖ ಚಿತ್ರಮಂದಿರಗಳಲ್ಲಿಲ್ಲ. ಈ ನಡುವೆಯೇ ಎರಡು ವಾರಗಳ ಹಿಂದೆ ತೆರೆಕಂಡಿದ್ದ “ಒಂದು ಮೊಟ್ಟೆಯ ಕಥೆ’ ಚಿತ್ರಕ್ಕೆ ಈಗ ಕೆ.ಜಿ.ರಸ್ತೆಯಲ್ಲಿ ಚಿತ್ರಮಂದಿರ ಸಿಕ್ಕಿದ್ದು, ಅನುಪಮ ಚಿತ್ರಮಂದಿರದಲ್ಲಿ ಪ್ರದರ್ಶನ ಕಾಣುತ್ತಿದೆ. 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.