ಖೊಟ್ಟಿ ಲೆಕ್ಕ ಕೊಟ್ರೆ ಮೂರು ಪಟ್ಟು ದಂಡ!


Team Udayavani, Jul 17, 2017, 12:37 PM IST

hub1.jpg

ಹುಬ್ಬಳ್ಳಿ: ಅವಳಿ ನಗರದಲ್ಲಿ ಗುಜರಾತ್‌ನ ಸೂರತ್‌ ಮಾದರಿಯಲ್ಲಿ ಸ್ವತ್ಛತಾ ಕಾರ್ಯ ಹಾಗೂ ಹಲವು ಸುಧಾರಣೆಗೆ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ನಿರ್ಧರಿಸಿದ್ದು, ಪೌರ ಕಾರ್ಮಿಕರ ಬಗ್ಗೆ ಸುಳ್ಳು ಲೆಕ್ಕ ಕೊಡುವ ಗುತ್ತಿಗೆದಾರರಿಗೆ ಕನಿಷ್ಠ ಮೂರು ಪಟ್ಟು ದಂಡ, ತ್ಯಾಜ್ಯ ಸಾಗಣೆ ಟ್ರ್ಯಾಕ್ಟರ್‌ ದಿನಕ್ಕೆ ಕನಿಷ್ಠ ಮೂರು ಟ್ರಿಪ್‌ ಸಾಗಣೆ ಕಡ್ಡಾಯಕ್ಕೆ ಗಂಭೀರ ಚಿಂತನೆ ನಡೆಸಿದೆ. 

ಬಹುತೇಕ ವಾರ್ಡ್‌ಗಳಲ್ಲಿ ಸ್ವತ್ಛತೆಯ ಕೊರತೆ ಜತೆಗೆ, ಸಾರ್ವಜನಿಕರು ತ್ಯಾಜ್ಯ ಹಾಕುವ ಸ್ಥಳಗಳಲ್ಲಿ ತ್ಯಾಜ್ಯ ಸಾಗಣೆ ಸಮರ್ಪಕವಾಗಿ ಆಗುತ್ತಿಲ್ಲ. ಸಾರ್ವಜನಿಕರು ತ್ಯಾಜ್ಯ ಹಾಕುವ ಜಾಗ ಸೇರಿದಂತೆ ವಿವಿಧ ಕಡೆ ಬಿಳಿ ಪೌಡರ್‌ ಹಾಕಬೇಕಿದ್ದು, ಇದನ್ನು ಕೈಗೊಳ್ಳುತ್ತಿಲ್ಲ.

ಅನೇಕ ಗುತ್ತಿಗೆ ಪೌರಕಾರ್ಮಿಕರ ಬಗ್ಗೆ ಗುತ್ತಿಗೆದಾರರು ತೋರಿಸುವ ಲೆಕ್ಕ, ವಾಸ್ತವದ ಲೆಕ್ಕಕ್ಕೆ ಸಾಕಷ್ಟು ವ್ಯತ್ಯಾಸ ಇರುತ್ತಿದ್ದು ಇದೆಲ್ಲದಕ್ಕೂ ಕಡಿವಾಣ ಹಾಕಲು ಸ್ಥಾಯಿ ಸಮಿತಿ ಹಲವು ಕಟ್ಟುನಿಟ್ಟಿನ ಕ್ರಮಕ್ಕೆ ಯೋಜಿಸಿದೆ. ಸೂರತ್‌ನಲ್ಲಿ ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, ಎಲ್ಲಿಯೂ ತ್ಯಾಜ್ಯ ಕಾಣುವುದಿಲ್ಲ.

ವಿಶೇಷವಾಗಿ ಮಾರುಕಟ್ಟೆಗಳಲ್ಲಿ ಮಧ್ಯರಾತ್ರಿ ನಂತರ ತ್ಯಾಜ್ಯ ಸಂಗ್ರಹಿಸಿ ಸಾಗಿಸಲಾಗುತ್ತಿದ್ದು, ಬೆಳಿಗ್ಗೆ ಮಾರುಕಟ್ಟೆ ಸಂಪೂರ್ಣ ಸ್ವತ್ಛವಾಗಿರುತ್ತದೆ. ಅದೇ ರೀತಿ ಅಲ್ಲಿನ ಎಲ್ಲ ವಾರ್ಡ್‌ಗಳಲ್ಲೂ ತ್ಯಾಜ್ಯ ಸಾಗಣೆ ಹಾಗೂ ಪೌಡರ್‌ ಹಾಕುವುದನ್ನು ನಿತ್ಯವೂ ಶಿಸ್ತಿನಿಂದ ಕೈಗೊಳ್ಳಲಾಗುತ್ತಿದ್ದು, ಅದೇ ಮಾದರಿಯನ್ನು ಅವಳಿನಗರದ ವಿವಿಧ ವಾರ್ಡ್‌ಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ಚಿಂತಿಸಲಾಗಿದೆ. 

ಸೂರತ್‌ ಮಾದರಿಯಲ್ಲಿ ವಾರ್ಡ್‌ ಗಳಲ್ಲಿ ತ್ಯಾಜ್ಯ ಸಂಗ್ರಹ ಸ್ಥಳ ಇನ್ನಿತರ ಕಡೆಗಳಲ್ಲಿ ಬಿಳಿ ಪೌಡರ್‌ ಸಿಂಪರಣೆಯನ್ನು ಮೊದಲು ಪೌರ ಕಾರ್ಮಿಕ ವಾಡ್‌ ìಗಳಲ್ಲಿ ಕೈಗೊಳ್ಳಲು ಯೋಜಿಸಲಾಗುತ್ತಿದೆ. ಈಗಾಗಲೇ ಪೌರ ಕಾರ್ಮಿಕ ವಾರ್ಡ್‌ಗಳ ಬಳಕೆಗೆ ಪೌಡರ್‌ ಬರುತ್ತಿದ್ದರೂ ಅದರ ಬಳಕೆ ಆಗುತ್ತಿಲ್ಲವಾದ್ದರಿಂದ ಮೊದಲು ಅಲ್ಲಿ ಆರಂಭಿಸಿ ಅನಂತರ ಅದನ್ನು ಗುತ್ತಿಗೆ ಪೌರ ಕಾರ್ಮಿಕ ವಾರ್ಡ್‌ಗಳಿಗೂ ವಿಸ್ತರಿಸಲು ಚಿಂತಿಸಲಾಗಿದೆ. 

ಮೂರು ಟ್ರಿಪ್‌ ಕಡ್ಡಾಯ: ಮಹಾನಗರದ ಒಟ್ಟು 67 ವಾರ್ಡ್‌ಗಳಲ್ಲಿ ಸುಮಾರು 20 ವಾರ್ಡ್‌ ಪೌರ ಕಾರ್ಮಿಕರು ನಿರ್ವಹಿಸುತ್ತಿದ್ದರೆ, 47 ವಾರ್ಡ್‌ಗಳನ್ನು ಗುತ್ತಿಗೆದಾರರಿಂದ ನಿರ್ವಹಿಸಲಾಗುತ್ತದೆ. ಸಂಗ್ರಹಗೊಂಡ ತ್ಯಾಜ್ಯದ ವಿಲೇವಾರಿಗೆ ಬಹುತೇಕ ಎಲ್ಲ ವಾರ್ಡ್‌ಗಳನ್ನು ಗುತ್ತಿಗೆ ನೀಡಲಾಗಿದೆ.

ತ್ಯಾಜ್ಯ ಸಾಗಣೆ ಒಡಂಬಡಿಕೆಯಲ್ಲಿ ಪ್ರತಿ ಟ್ರ್ಯಾಕ್ಟರ್‌ ದಿನಕ್ಕೆ ಕನಿಷ್ಠ ಮೂರು ಟ್ರಿಪ್‌ ತ್ಯಾಜ್ಯ ಸಾಗಿಸಬೇಕೆಂಬ ನಿಯಮ ಇದ್ದರೂ, ಒಂದು ಎರಡು ಮಾತ್ರ ಸಾಗಣೆ ಆಗುತ್ತಿದೆ. ತ್ಯಾಜ್ಯ ಸಂಗ್ರಹ ಘಟಕದಲ್ಲಿ ಹಾಕಲಾಗಿದ್ದ ಸಿ.ಸಿ.ಕ್ಯಾಮೆರಾಗಳನ್ನು ಉದ್ದೇಶಪೂರ್ವಕವಾಗಿ ಹೊಡೆದು ಹಾಕಲಾಗಿದೆ ಎಂಬ ಆರೋಪವೂ ಕೇಳಿ ಬಂದಿದೆ.

ಇದೀಗ ಪ್ರತಿ ಟ್ರ್ಯಾಕ್ಟರ್‌ ಮೂರು ಟ್ರಿಪ್‌ ಸಾಗಣೆ ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳಲು ಆರೋಗ್ಯ ಸ್ಥಾಯಿ ಸಮಿತಿ ಮುಂದಾಗಿದೆ. ತ್ಯಾಜ್ಯ ಸಂಗ್ರಹ ಘಟಕದಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆ ಹಾಗೂ ಹೆಚ್ಚಳದ ಜತೆಗೆ ಪ್ರತಿ ಟ್ರಿಪ್‌ಗೆ ಟ್ರ್ಯಾಕ್ಟರ್‌ ನವರು ಫೋಟೋ ತೆಗೆದು ಅದನ್ನು ವಾಟ್ಸ್‌ಪ್‌ನಲ್ಲಿ ಕಳುಹಿಸುವಂತೆ ಸೂಚಿಸಲು ಯೋಜಿಸಲಾಗಿದೆ.

ಜತೆಗೆ ತ್ಯಾಜ್ಯ ಸಂಗ್ರಹ ಘಟಕದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳು ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಸಂಗ್ರಹ ಹಾಗೂ ವೀಕ್ಷಣೆಗೆ ಅವಕಾಶದ ವ್ಯವಸ್ಥೆ ಕೈಗೊಳ್ಳುವ ಯೋಜಿಸಲಾಗಿದೆ. ವಾರ್ಡ್‌ ಸ್ವತ್ಛತಾ ಗುತ್ತಿಗೆದಾರರು ಗುತ್ತಿಗೆ ಪೌರ ಕಾರ್ಮಿಕರ ವಿಚಾರವಾಗಿ ತೋರಿಸುವ ಹಾಗೂ ವಾಸ್ತವದ ಸಂಖ್ಯೆ ವ್ಯತ್ಯಾಸವಿದ್ದು, ಇಲ್ಲಿವರೆಗೆ ತಪಾಸಣೆ ವೇಳೆ ಪೌರ ಕಾರ್ಮಿಕರ ಸಂಖ್ಯೆ ಕಡಿಮೆ ಇದ್ದರೆ ಅವರಿಗೆ 1 ಸಾವಿರ ರೂ.ವರೆಗೆ ದಂಡ ಹಾಕಲಾಗುತ್ತಿತ್ತು.

ಹಲವು ಬಾರಿ ದಂಡ ಪಾವತಿಯಾಗಿದೆಯಾದರೂ, ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾತ್ರ ಆಗಿಲ್ಲ. ಆದರೆ ನಿಯಮದಲ್ಲಿ ನಿಗದಿಗಿಂತ ಕಡಿಮೆ ಪ್ರಮಾಣದ ಕಾರ್ಮಿಕರಿದ್ದರೆ ಗುತ್ತಿಗೆದಾರರಿಗೆ ಮೂರು ಪಟ್ಟು ದಂಡ ವಿಧಿಸುವ ಅವಕಾಶವಿದ್ದು, ಅದನ್ನೇ ಬಳಸಿಕೊಂಡು ಒಬ್ಬ ಕಾರ್ಮಿಕ ಕಡಿಮೆ ಇದ್ದರೆ ಮೂರು ಕಾರ್ಮಿಕರ ಗೈರು ಹಾಜರಾತಿ ದಂಡ ವಿಧಿಸಲು ಸಹ ಚಿಂತಿಸಲಾಗಿದ್ದು, ಒಂದು ವಾರದೊಳಗೆ ಈ ಕ್ರಮ ಜಾರಿಗೊಳ್ಳುವ ಸಾಧ್ಯತೆ ಇದೆ. 

ಅಲ್ಲದೆ ಸೂರತ್‌ ಮಾದರಿಯಲ್ಲಿ ಪ್ರತಿ ಅಂಗಡಿ, ವ್ಯಾಪಾರ ಮಳಿಗೆ ಮುಂದೆ ಒಂದು ಕಸದ ಬಕೆಟ್‌ ಇಲ್ಲವೆ ಸಣ್ಣ ತೊಟ್ಟಿ ಇರಿಸುವುದನ್ನು ಕಡ್ಡಾಯಗೊಳಿಸಲು ಚಿಂತಿಸಲಾಗಿದೆ. ಅದೇ ರೀತಿ ಮಾರುಕಟ್ಟೆಗಳನ್ನು ರಾತ್ರಿ ವೇಳೆ ಸ್ವತ್ಛಗೊಳಿಸುವ ಕಾರ್ಯಕ್ಕೂ ಚಾಲನೆ ನೀಡಲು ಆರೋಗ್ಯ ಸ್ಥಾಯಿ ಸಮಿತಿ ನಿರ್ಧರಿಸಿದೆ. 

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.