ರಾಮನಾಥ್‌ ಕೋವಿಂದ್‌ ರಾಷ್ಟ್ರಪತಿ ಖಚಿತ: ಜು.20 ಫ‌ಲಿತಾಂಶ


Team Udayavani, Jul 18, 2017, 4:00 AM IST

EB.gif

ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆ ಸೋಮವಾರ ಮುಕ್ತಾಯಗೊಂಡಿದೆ. ಜು.20ರಂದು ಮತ ಎಣಿಕೆ ನಡೆಯಲಿದ್ದು, ನಿರೀಕ್ಷೆಯಂತೆ ಎನ್‌ಡಿಎ ಅಭ್ಯರ್ಥಿ ರಾಮನಾಥ್‌ ಕೋವಿಂದ್‌ ಜಯ ಗಳಿಸುವ ಸಾಧ್ಯತೆ ಇದೆ. ಎಲ್ಲ ರಾಜ್ಯಗಳಲ್ಲಿ ಶೇ.100ರಷ್ಟು ಮತದಾನ ನಡೆದಿತ್ತು. ಹೊಸದಿಲ್ಲಿಯಲ್ಲಿರುವ ಸಂಸತ್‌ ಭವನದಲ್ಲಿ ಶೇ.99ರಷ್ಟು ಮತದಾನ ವಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಲೋಕಸಭೆಯ ಸೆಕ್ರೆಟರಿ ಜನರಲ್‌ ಅನೂಪ್‌ ಮಿಶ್ರಾ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿಯ ಹಿರಿಯ ತಲೆಯಾಳು ಎಲ್‌.ಕೆ.ಅಡ್ವಾಣಿ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ತಮ್ಮ ಹಕ್ಕು ಚಲಾವಣೆ ಮಾಡಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಗೋವಾ ಮುಖ್ಯಮಂತ್ರಿ ಮನೋಹರ ಪಾರೀಕರ್‌ ಸೇರಿದಂತೆ ಒಟ್ಟು 44 ಮಂದಿ ಆಯಾ ರಾಜ್ಯಗಳ ರಾಜಧಾನಿಯಲ್ಲಿಯೇ ಮತ ಹಾಕಲು ಅನುಮತಿ ಪಡೆದಿದ್ದರು.

ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುತ್ತಿದ್ದಂತೆ ಮಾತನಾಡಿದ ಬಿಜೆಪಿ ವಕ್ತಾರ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯೇ ಜಯಗಳಿಸಲಿದ್ದಾರೆ ಎಂದು ಹೇಳಿಕೊಂಡರೆ ಸಂವಿಧಾನ ಎತ್ತಿ ಹಿಡಿಯುವಂತೆ ಹಕ್ಕು ಚಲಾವಣೆಯಾಗಿದೆ ಎಂಬ ವಿಶ್ವಾಸವಿದೆ ಎಂದು ಸಿಪಿಎಂ ಹೇಳಿಕೊಂಡಿದೆ.

ಯಾಕೂಬ್‌ ಮೆಮನ್‌ಗೆ ಬೆಂಬಲ ನೀಡಿದ್ದ ಗಾಂಧಿ: ಶಿವಸೇನೆ ಆಕ್ಷೇಪ
ಯುಪಿಎ ಉಪರಾಷ್ಟ್ರಪತಿ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಮುಂಬೈ ಸರಣಿ ಸ್ಫೋಟದ ಆರೋಪಿ ಯಾಕೂಬ್‌ ಮೆಮನ್‌ಗೆ ಬೆಂಬಲ ನೀಡಿದ್ದರು ಎಂದು ಶಿವಸೇನೆ ಆರೋಪಿಸಿದೆ. ಮೆಮನ್‌ಗೆ ಕ್ಷಮಾದಾನ ನೀಡಬೇಕೆಂದು ಒತ್ತಾಯಿ ಸಿದ್ದವರು ಗಾಂಧಿ ಎಂದು ದೂರಿದ್ದಾರೆ ಶಿವಸೇನೆ ವಕ್ತಾರ ಸಂಜಯ ರಾವುತ್‌. ಮೆಮನ್‌ ರಕ್ಷಣೆ ಎಲ್ಲ ರೀತಿಯ ಪ್ರಯತ್ನ ಮಾಡಿದ್ದರೆಂದು ಆಪಾದಿಸಿದ್ದಾರೆ. ಆ ಸಂದರ್ಭದಲ್ಲಿ ಯುಪಿಎ ಅಭ್ಯರ್ಥಿ ರಾಷ್ಟ್ರಪತಿಗೆ ಪತ್ರ ಬರೆದು ಕ್ಷಮಾದಾನ ನೀಡುವಂತೆ ಒತ್ತಾಯಿಸಿದ್ದರು ಎಂದಿದ್ದಾರೆ. ಗಾಂಧಿ ಬೆಂಬಲಕ್ಕೆ ಬಂದಿರುವ ಕಾಂಗ್ರೆಸ್‌ ವಕ್ತಾರ ಯಾವ ಆಧಾರದಲ್ಲಿ ಶಿವಸೇನೆ ವಿಪಕ್ಷಗಳ ಮೈತ್ರಿಕೂಟದ ಅಭ್ಯರ್ಥಿಯ ವಿರುದ್ಧ ಆರೋಪ ಮಾಡುತ್ತಿದೆ? ನಾಗರಿಕ ಸೇವಾ ಅಧಿಕಾರಿ, ರಾಜ್ಯಪಾಲರಾಗಿ ಹತ್ತು ಹಲವು ಹುದ್ದೆಗಳನ್ನು ನಿರ್ವಹಿಸಿ ಜನಪ್ರಿಯತೆ, ಖ್ಯಾತಿ ಗಳಿಸಿದ್ದಾರೆ. ಅವರಿಗೆ ಯಾರದ್ದೂ ಪ್ರಮಾಣ ಪತ್ರ ಅಗತ್ಯವಿಲ್ಲವೆಂದಿದ್ದಾರೆ ಅವರು.

ಅನಾರೋಗ್ಯ ಕಾರಣ ಹಕ್ಕು ಚಲಾಯಿಸದ ಕರುಣಾನಿಧಿ
ಅನಾರೋಗ್ಯದ ಕಾರಣದಿಂದ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಮತ ಹಾಕಲಿಲ್ಲ. ವೈದ್ಯರ ಸಲಹೆಯಿಂದಾಗಿ ತಮ್ಮ ತಂದೆ ಮತ್ತು ಪಕ್ಷದ ಹಿರಿಯ ನಾಯಕ ಎಂ.ಕರುಣಾನಿಧಿ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಲಿಲ್ಲ ಎಂದಿದ್ದಾರೆ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್‌. 2012ರಲ್ಲಿ ಹಾಲಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅಭ್ಯರ್ಥಿಯಾಗಿದ್ದಾಗ ಅವರು ಮತದಾನ ಮಾಡಿದ್ದರು. 

ರೈತನ ಮಗನಾಗಿದ್ದುಕೊಂಡು ಸಾರ್ವಜನಿಕ ಜೀವನದಲ್ಲಿ ನಾಯ್ಡು ಸಾಧನೆ ಅಪಾರ. ಉಪ ರಾಷ್ಟ್ರಪತಿ ಸ್ಥಾನಕ್ಕೆ ಅವರು ಸೂಕ್ತ ವ್ಯಕ್ತಿ. 
– ನರೇಂದ್ರ ಮೋದಿ, ಪ್ರಧಾನಮಂತ್ರಿ

ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ಅವರ ಆದೇಶದಂತೆ ನಾವು  ಎನ್‌ಡಿಎ ಅಭ್ಯರ್ಥಿ ಕೋವಿಂದ್‌ಗೇ ಮತ ಹಾಕಿದ್ದೇವೆ.
ಶಿವಪಾಲ್‌ ಯಾದವ್‌, 
ಉತ್ತರ ಪ್ರದೇಶ ಮಾಜಿ ಸಚಿವ

 

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.