ಕರದಾತರ ಅಭಿಪ್ರಾಯಕ್ಕೆ ಪಾಲಿಕೆ ಮಣೆ


Team Udayavani, Jul 18, 2017, 12:50 PM IST

hub2.jpg

ಹುಬ್ಬಳ್ಳಿ: ಘನತ್ಯಾಜ್ಯ ನಿರ್ವಹಣೆ ಹೆಸರಲ್ಲಿ ಜನರ ಮೇಲೆ ಹೆಚ್ಚುವರಿ ಸೆಸ್‌ ಹಾಕುವುದಕ್ಕೆ ಪಾಲಿಕೆ ಸಾಮಾನ್ಯ ಸಭೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಹಾಪೌರ ಡಿ.ಕೆ. ಚವ್ಹಾಣ ಸೆಸ್‌ ಆಕರಣೆ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸಿ ಮತ್ತೂಮ್ಮೆ ಸಭೆಯಲ್ಲಿ ಮಂಡಿಸುವಂತೆ ಆಯುಕ್ತರಿಗೆ ಆದೇಶಿಸಿದರು. 

ಸೋಮವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಘನತ್ಯಾಜ್ಯ ನಿರ್ವಹಣೆ ಸೆಸ್‌ ಆಕರಣೆ ವಿಷಯ ಮಂಡನೆ ಮಾಡಿದಾಗ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯ ಡಾ| ಪಾಂಡುರಂಗ ಪಾಟೀಲ, ಒಂದೇ ಆಸ್ತಿ ಮೇಲೆ ಎಷ್ಟು ವಿಧವಾದ ಕರ ಹಾಕಬಹುದಾಗಿದೆ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. 

ಪೌರಾಡಳಿತ ನಿರ್ದೇಶನಾಲಯದ ಸುತ್ತೋಲೆ ಆಧಾರದಲ್ಲಿ ಘನತ್ಯಾಜ್ಯ ನಿರ್ವಹಣೆ ಹೆಚ್ಚುವರಿ ಸೆಸ್‌ ಹಾಕುವುದು ಎಷ್ಟರ ಮಟ್ಟಿಗೆ ಸರಿ, ಕರ ಇಲ್ಲವೆ ಸೆಸ್‌ ಆಕರಣೆಗೆ ಕರದಾತರ ಒಪ್ಪಿಗೆ ಅವಶ್ಯವಾಗಿದೆ. ಈಗಾಗಲೇ ಆಸ್ತಿಕರದಲ್ಲಿಯೇ ಮೂಲ ಸೌಲಭ್ಯಗಳ  ನೀಡಿಕೆಗಾಗಿಯೇ ಕರ-ಸೆಸ್‌ ಹಾಕಲಾಗುತ್ತಿದೆ. ಇದೀಗಮತ್ತೂಂದು ಸೆಸ್‌ ಎಂಬುದು ಬಹುವಿಧವಾದ ಕರ ಹಾಕಿದಂತಾಗಲಿದೆ ಎಂದರು. 

ಕಾಂಗ್ರೆಸ್‌ನ ಗಣೇಶ ಟಗರಗುಂಟಿ, ಬಿಜೆಪಿಯ ಸುಧೀರ ಸರಾಫ್ ಸೇರಿದಂತೆ ಅನೇಕ ಸದಸ್ಯರು ಇದಕ್ಕೆ ಬೆಂಬಲ ವ್ಯಕ್ತಪಡಿಸಿದರು. ಮಹಾಪೌರರು ಈ ಬಗ್ಗೆ ವಲಯವಾರು ನಾಗರಿಕರು ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಅನಂತರ ಸೆಸ್‌ ನಿರ್ಧಾರ ಕೈಗೊಳ್ಳಬೇಕು.

ಅಲ್ಲಿವರೆಗೆ ಈ ಪ್ರಸ್ತಾವನೆ ಜಾರಿ ಮಾಡುವುದು ಬೇಡ ಎಂದು ಆದೇಶಿಸಿದರು. ಘನತ್ಯಾಜ್ಯ ನಿರ್ವಹಣೆಗಾಗಿ ಮನೆ, ವಾಣಿಜ್ಯ, ಕೈಗಾರಿಕೆ ಇನ್ನಿತರ ಕಟ್ಟಡಗಳ ಮೇಲೆ 10ರಿಂದ 600 ರೂ.ವರೆಗೆ ಸೆಸ್‌ ಆಕರಣೆಗೆ ಯೋಜಿಸಿ ಪ್ರಸ್ತಾವನೆ ಮಂಡಿಸಲಾಗಿತ್ತು. 

ಹಣದ ಕೊರತೆಯಿಲ್ಲ: ಶೌಚಾಲಯ ನಿರ್ಮಾಣ ವಿಷಯವಾಗಿ ಸದಸ್ಯರಾದ ಶಿವಪ್ಪ ಬಡವಣ್ಣವರ, ಮೋಹನ ಹಿರೇಮನಿ, ಸತೀಶ ಹಾನಗಲ್ಲ, ಶಿವಾನಂದ ಮುತ್ತಣ್ಣವರ ಮಾತನಾಡಿ, ಶೌಚಾಲಯ ಕಟ್ಟಿಕೊಳ್ಳಲು ಮುಂದಾದವರಿಗೆ ಸಹಾಯಧನ ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿದರು. 

ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಮಾತನಾಡಿ, ಅವಳಿ ನಗರವನ್ನು ಬಹಿರ್ದೆಸೆ ಮುಕ್ತವಾಗಿಸುವ ನಿಟ್ಟಿನಲ್ಲಿ ವೈಯಕ್ತಿಕ ಹಾಗೂ ಸಾಮೂಹಿಕ ಶೌಚಾಲಯ ನಿರ್ಮಾಣಕ್ಕೆ ಯಾವುದೇ ಹಣದ ಕೊರತೆ ಇಲ್ಲ. ಶೌಚಾಲಯಗಳ ನಿರ್ಮಾಣದ ಕುರಿತಾಗಿ ಫೋಟೋ ತೆಗೆದು ಅಪ್‌ಲೋಡ್‌ ಮಾಡುವುದು ಬಿಲ್‌ ಕಲೆಕ್ಟರ್‌ಗಳ ಜವಾಬ್ದಾರಿ. 

ಕೆಲವರು ನಿರ್ಲಕ್ಷ್ಯ ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಸಮಸ್ಯೆ ಇರುವ ವಾರ್ಡ್‌ಗಳ ಸದಸ್ಯರು ಲಿಖೀತ ದೂರು ನೀಡಿದಲ್ಲಿ ಅಂತಹ ಬಿಲ್‌ ಕಲೆಕ್ಟರ್‌ ಗಳನ್ನು ಅಮಾನತು ಮಾಡುವುದಾಗಿ ಹೇಳಿದರು. ಅವಳಿ ನಗರದಲ್ಲಿ ಅನೇಕರು ಶುಲ್ಕ ಪಾವತಿಸಿ ಖಾತಾ ಬದಲಾವಣೆಗೆ ಅರ್ಜಿ ಸಲ್ಲಿಸಿದರೂ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸದಸ್ಯರಾದ ಮಂಜುನಾಥ ಚಿತಗಿಂಜಲ, ಗಣೇಶ ಟಗರಗುಂಟಿ ಇನ್ನಿತರ ಸದಸ್ಯರು ಆರೋಪಿಸಿದರು.

ಡಾ| ಪಾಂಡುರಂಗ ಪಾಟೀಲ ಮಾತನಾಡಿ, ಸರಕಾರದ ಪತ್ರವನ್ನೇ ಕಾಯ್ದೆ ಎಂದುಕೊಂಡು ಪಾಲಿಗೆ ಬರಬೇಕಾದ ಆದಾಯ ಪಡೆಯದಿರುವುದು ಸರಿಯಲ್ಲ ಎಂದರು. ಖಾತೆಗಳ ವರ್ಗಾವಣೆ ಕುರಿತಾಗಿ ಹಳೇ ಪದ್ಧತಿಯನ್ನು ಜಾರಿಗೊಳಿಸುವಂತೆ ಮಹಾಪೌರರು ಆದೇಶಿಸಿದರು.   

ಟಾಪ್ ನ್ಯೂಸ್

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.