ಜು. 21: ಅರ್ಜುನ್ ವೆಡ್ಸ್ ಅಮೃತ ತೆರೆಗೆ
Team Udayavani, Jul 20, 2017, 3:45 AM IST
ಮಂಗಳೂರು: ಬೆದ್ರ 9 ಕ್ರಿಯೇಷನ್ಸ್ ಲಾಂಛನದಲ್ಲಿ ತಯಾರಾದ ಪತ್ರಕರ್ತ ರಘು ಶೆಟ್ಟಿ ನಿರ್ದೇಶನದ ಕೋಸ್ಟಲ್ವುಡ್ನ ಬಹುನಿರೀಕ್ಷಿತ “ಅರ್ಜುನ್ ವೆಡ್ಸ್ ಅಮೃತ’ ತುಳು ಸಿನೆಮಾ ಜು. 21ರಂದು ಕರಾವಳಿಯಾದ್ಯಂತ ತೆರೆಕಾಣಲಿದೆ.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರ ನಿರ್ದೇಶಕ ರಘು ಶೆಟ್ಟಿ ಅವರು, ಮಂಗಳೂರಿನ ಜ್ಯೋತಿ, ಸಿನೆಪೊಲೀಸ್, ಪಿವಿಆರ್, ಬಿಗ್ ಸಿನೆಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯಲ್ಲಿ ಭಾರತ್, ಮೂಡಬಿದಿರೆಯಲ್ಲಿ ಅಮರಶ್ರೀ, ಪುತ್ತೂರಿನಲ್ಲಿ ಅರುಣಾ, ಸುಳ್ಯದಲ್ಲಿ ಸಂತೋಷ್, ಸುರತ್ಕಲ್ನಲ್ಲಿ ನಟರಾಜ್ ಹಾಗೂ ಉಡುಪಿಯಲ್ಲಿ ತೆರೆಕಾಣಲಿದೆ ಎಂದರು.
ಚಿತ್ರದಲ್ಲಿ ಕುಸೇಲ್ದರಸೆ ನವೀನ್ ಡಿ. ಪಡೀಲ್ ಅವರು ವಿಭಿನ್ನ ಪಾತ್ರದ ಮೂಲಕ ಗಮನಸೆಳೆದಿದ್ದಾರೆ. ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು ಕೂಡ ವಿಶೇಷ ಪಾತ್ರದ ಮೂಲಕವೇ ಈ ಚಿತ್ರದಲ್ಲಿ ಕಾಣಿಸುತ್ತಿದ್ದಾರೆ. ನಾಯಕ ನಟನಾಗಿ ಅನೂಪ್ ಸಾಗರ್, ನಾಯಕಿಯಾಗಿ ಆರಾಧ್ಯ ಶೆಟ್ಟಿ ಚಿತ್ರದಲ್ಲಿದ್ದಾರೆ ಎಂದು ವಿವರಿಸಿದರು.
ಈ ಚಿತ್ರಕ್ಕೆ ಸುಮಾ ಎಲ್.ಎನ್. ಶಾಸ್ತ್ರಿ ಸಂಗೀತ ನೀಡಿದ್ದಾರೆ. ರಾಜೇಶ್ ಶೆಟ್ಟಿ, ದಾಮೋದರ ದೊಂಡೋಲೆ, ಲೋಕು ಕುಡ್ಲ ಅವರ ಸಾಹಿತ್ಯ ಈ ಚಿತ್ರಕ್ಕಿದ್ದು, ಕಿರಣ್ ತರುಣ್ರಾಜ್ ಕೊರಿಯೋಗ್ರಾಫರ್ ಆಗಿದ್ದಾರೆ. ರಾಜೇಶ್ ಕೃಷ್ಣನ್, ಹೇಮಂತ್, ಎಲ್.ಎನ್. ಶಾಸ್ತ್ರಿ ಸುಪ್ರಿಯಾ ಮತ್ತು ಸುಮಾ ಎಲ್.ಎನ್. ಶಾಸ್ತ್ರಿ ಸ್ವರ ನೀಡಿದ್ದಾರೆ. ಕಲಾ ನಿರ್ದೇಶಕರಾಗಿ ಚೇತನ್ ಮುಂಡಾಡಿ, ಛಾಯಾಚಿತ್ರಗ್ರಾಹಕರಾಗಿ ಆನಂದ ಸುಂದರೇಶ್, ಸಹನಿರ್ದೇಶಕರಾಗಿ ತ್ರಿಶೂಲ್ ಶೆಟ್ಟಿ, ರಾಮ್ದಾಸ್ ಸಸಿಹಿತ್ಲು ಕಾರ್ಯನಿರ್ವಹಿಸಿದ್ದಾರೆ ಎಂದರು.
ಉಳಿದಂತೆ ಉಮೇಶ್ ಮಿಜಾರ್, ಸಂದೀಪ್ ಶೆಟ್ಟಿ, ಪ್ರಸನ್ನ ಶೆಟ್ಟಿ, ರಮೇಶ್ ರೈ ಕುಕ್ಕುವಳ್ಳಿ, ಸುನೀಲ್ ನೆಲ್ಲಿಗುಡ್ಡೆ, ಸುಧೀರ್ ರಾಜ್ ಉರ್ವ, ಸತೀಶ್ ಬಂದಲೆ, ಪವಿತ್ರ ಶೆಟ್ಟಿ ಕಟಪಾಡಿ, ಹರಿಣಿ ಕಾರ್ಕಳ, ಆರ್.ಜೆ. ಅನುರಾಗ್, ಪ್ರಜ್ವಲ್ ಪಾಂಡೇಶ್ವರ ಮುಂತಾದವರು ತಾರಾಗಣದಲ್ಲಿದ್ದಾರೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ನವೀನ್ಡಿ ಪಡೀಲ್, ಅನೂಪ್ ಸಾಗರ್, ಆರಾಧ್ಯ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ
ಪಾಸಾಗುವುದಷ್ಟೇ ಮುಖ್ಯ ಎಂದು ಮೂಗು ಮುರಿಯಬೇಡಿ !
Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು
Mangaluru ಮೂಲದ ಫಾ| ವಿಲ್ಫ್ರೆಡ್ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್ ಆಗಿ ನೇಮಕ
ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು
MUST WATCH
ಹೊಸ ಸೇರ್ಪಡೆ
Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್ನ ಬಜೆಟ್ಟೇ 835 ಕೋಟಿ ರೂ.
Ramanagara: ಬಿರುಗಾಳಿ ಮಳೆಯ ಅವಾಂತರ… ನೂರಾರು ಮರಗಳು ಧರೆಗೆ, ಹಾರಿ ಹೋದ ಮನೆಯ ಮೇಲ್ಛಾವಣಿ
Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ
Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ
ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ