ಮರ್ಮಾಂಗಕ್ಕೆ ಒದ್ದರೇ ಪೊಲೀಸರು; ಶಿಫ್ಟ್ ಆಗಿದ್ದ ಕೈದಿ ಗಂಭೀರ?
Team Udayavani, Jul 19, 2017, 11:48 AM IST
ಬೆಂಗಳೂರು: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಡಿಐಜಿ ಆಗಿದ್ದ ರೂಪಾ ಬಹಿರಂಗಪಡಿಸಿ ವರದಿ ನೀಡಿದ್ದ ಬೆನ್ನಲ್ಲೇ ಕೆಲ ಕೈದಿಗಳನ್ನು ಜೈಲಿನಿಂದ ಸ್ಥಳಾಂತರಗೊಳಿಸಲಾಗಿತ್ತು. ಈ ವೇಳೆ ಮಾರಣಾಂತಿಕವಾಗಿ ಹಲ್ಲೆಗೊಳಾಗಿದ್ದ ಕೈದಿಯೊಬ್ಬನ ಸ್ಥಿತಿ ಚಿಂತಾಜನಕವಾಗಿರುವ ಬಗ್ಗೆ ವರದಿಯಾಗಿದೆ.
ಭಾನುವಾರ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಗೊಂಡಿದ್ದ ಅನಂತಮೂರ್ತಿ ಎಂಬ ಕೈದಿ ಯ ಸ್ಥಿತಿ ಗಂಭೀರವಾಗಿದ್ದು ಮಂಗಳವಾರ ರಾತ್ರೋ ರಾತ್ರಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಜೈಲಿಗೆ ವಾಪಾಸ್ ಕರೆದುಕೊಂಡು ಹೋಗಿರುವುದು ಕಂಡು ಬಂದಿದೆ.
ಅನಂತಮೂರ್ತಿಗೆ ಜೈಲಿನಿಂದ ಸ್ಥಳಾಂತರಿಸುವ ವೇಳೆ ಮರ್ಮಾಂಗಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದ್ದು ಇದೀಗ ರಕ್ತ ಹೆಪ್ಪುಗಟ್ಟಿ ಮೂತ್ರ ವಿಸರ್ಜನೆ ಸಾಧ್ಯವಾಗುತ್ತಿಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ಸಾಕ್ಷಿಯಾಗಿ ಜೈಲಿಗೆ ಸ್ಥಳಾಂತರಿಸುವ ವೇಳೆ ಮರ್ಮಾಂಗವಿರುವ ಭಾಗಕ್ಕೆ ಕೈಯಿಟ್ಟು ತೀವ್ರ ಯಾತನೆ ಪಡುತ್ತಿರುವ ದೃಶ್ಯಗಳು ಸೆರೆಯಾಗಿವೆ.
ಅವ್ಯವಹಾರಗಳ ಕುರಿತಾಗಿನ ತನಿಖಾಧಿಕಾರಿ ವಿನಯ್ ಕುಮಾರ್ ಅವರು ಜೈಲಿಗೆ ಬಂದಸಂದರ್ಭದಲ್ಲಿ ಕೈದಿಗಳು ವ್ಯವಹಾರದ ಬಗ್ಗೆ ಮಾಹಿತಿ ನೀಡಬಾರದು ಎನ್ನುವ ದ್ದೇಶದಿಂದ ಸಂದೇಹಾಸ್ಪದ ಕೈದಿಗಳನ್ನ ಮೈಸೂರು,ಬೆಳಗಾವಿ ಮತ್ತು ಬಳ್ಳಾರಿ ಬಂದೀಖಾನೆಗಳಿಗೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ.
ಕೈದಿಯ ಸ್ಥಿತಿಯ ಕುರಿತಾಗಿ ಪೊಲೀಸರು ಯಾವುದೇ ಮಾಹಿತಿ ಹೊರ ಬಿಟ್ಟಿಲ್ಲ. ಕುಟುಂಬ ಸದಸ್ಯರಿಗೂ ಈ ಬಗ್ಗೆ ತಿಳಿಸಿಲ್ಲ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು