ಆಸ್ಪತ್ರೆಗಳಲ್ಲಿ ಹಾಸಿಗೆಗಳದ್ದೇ ಕೊರತೆ; ರಕ್ತಕ್ಕೆ ಭಾರೀ ಬೇಡಿಕೆ  


Team Udayavani, Jul 20, 2017, 5:30 AM IST

1907mlr20.gif

ಮಹಾನಗರ: ಎಚ್‌1ಎನ್‌1, ಡೆಂಗ್ಯೂ ಸಹಿತ ವಿವಿಧ ಸಾಂಕ್ರಾಮಿಕ ರೋಗ ಬಾಧಿತರ ಸಂಖ್ಯೆ ಹೆಚ್ಚುತ್ತಿದ್ದು, ನಗರದ ಕೆಲವು ಆಸ್ಪತ್ರೆಗಳಲ್ಲಿ ರೋಗಿಗಳನ್ನು ದಾಖಲಿಸಿಕೊಳ್ಳಲು ಹಾಸಿಗೆಗಳ ಕೊರತೆ ಎದುರಾಗಿದೆ. ಇನ್ನೊಂದೆಡೆ ಡೆಂಗ್ಯೂನಂತಹ ಕಾಯಿಲೆಗಳಿಗೆ ಸಕಾಲದಲ್ಲಿ ರಕ್ತ ನೀಡುವುದಕ್ಕೆ ಬ್ಲಡ್‌ ಬ್ಯಾಂಕ್‌ಗಳಲ್ಲಿ ಬೇಡಿಕೆಯ ಜತೆಗೆ ಒತ್ತಡವೂ ಜಾಸ್ತಿಯಾಗಿದೆ. ಹದಿನೈದು ದಿನಗಳ ಹಿಂದಷ್ಟೇ ಒಟ್ಟು 105 ಮಂದಿಗೆ ಎಚ್‌1ಎನ್‌1 ಇರುವುದು ದೃಢಪಟ್ಟಿದ್ದರೆ, ಜು. 18ರ ವೇಳೆಗೆ ಈ ಪಟ್ಟಿಗೆ 51 ಮಂದಿ ಹೊಸ ಸೇರ್ಪಡೆಯಾಗಿದ್ದಾರೆ. ಆ ಮೂಲಕ ಇಲ್ಲಿವರೆಗೆ 156 ಮಂದಿಗೆ ಜಿಲ್ಲೆಯಲ್ಲಿ ಎಚ್‌1ಎನ್‌1 ದೃಢಪಟ್ಟಿದೆ. ಇದರೊಂದಿಗೆ ಮಲೇರಿಯಾ, ಡೆಂಗ್ಯೂ ಹಿನ್ನೆಲೆಯಲ್ಲೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಮಳೆ- ಬಿಸಿಲಿನ ಕಣ್ಣಾಮುಚ್ಚಾಲೆಯಿಂದಾಗಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುತ್ತಿವೆ. ಜತೆಗೆ ಸೊಳ್ಳೆ ಉತ್ಪತ್ತಿಗೆ ಪೂರಕ ವಾತಾವರಣವೂ ನಿರ್ಮಾಣವಾಗುತ್ತಿರುವುದು ಸಮಸ್ಯೆಯ ತೀವ್ರತೆಯನ್ನು ಹೆಚ್ಚಿಸಿದೆ.

ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ
ನಗರದ ಕೆಲವು ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ವೃದ್ಧಿಯಾಗುತ್ತಿದೆ. ಗ್ರಾಮೀಣ ಆಸ್ಪತ್ರೆಗಳಲ್ಲಿ ದಾಖಲಾದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆತರುವುದೂ ಇದಕ್ಕೆ ಕಾರಣ. ಸಾಂಕ್ರಾಮಿಕ ರೋಗ ದಿಂದ ಬಳಲುತ್ತಿರುವವರು ಮಾತ್ರವಲ್ಲದೇ, ಇತರ ಒಳರೋಗಿಗಳೂ ದಾಖಲಾಗಿರುವ ಹಿನ್ನೆಲೆಯಲ್ಲಿ ಖಾಸಗಿ, ಅರೆ ಖಾಸಗಿ ವಾರ್ಡ್‌ಗಳೂ ಭರ್ತಿಯಾಗಿವೆ.
 
ಕೆಲವು ಆಸ್ಪತ್ರೆಗಳಲ್ಲಿ ಹಾಸಿಗೆಗಳು ಇಲ್ಲದಿರುವುದರಿಂದ ರೋಗಿಗಳು ಸ್ವಇಚ್ಛೆಯಿಂದ ಬೇರೆಡೆಗೆ ತೆರಳುತ್ತಿದ್ದಾರೆ ಎಂದು ನಗರದ ಆಸ್ಪತ್ರೆಯೊಂದರಲ್ಲಿ ರೋಗಿಯೋರ್ವರ ಸಂಬಂಧಿ ಶಿಲ್ಪಾ ಹೇಳುತ್ತಾರೆ. ಆದರೆ ಆಸ್ಪತ್ರೆಗಳ ಸಿಬಂದಿ ಪ್ರಕಾರ, ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವುದು ನಿಜ. ಆದರೆ, ಯಾರನ್ನೂ ಚಿಕಿತ್ಸೆ ನೀಡದೆ ವಾಪಸು ಕಳುಹಿಸುತ್ತಿಲ್ಲ ಎನ್ನುತ್ತಾರೆ.

ರಕ್ತಕ್ಕೆ ಬೇಡಿಕೆ
ಸಾಂಕ್ರಾಮಿಕ ರೋಗಗಳ ಹಿನ್ನೆಲೆಯಲ್ಲಿ ರೋಗಿಗಳಿಗೆ ರಕ್ತ ಅಗತ್ಯವಾಗಿ ಬೇಕು. ಇದಕ್ಕಾಗಿ ರೆಡ್‌ಕ್ರಾಸ್‌ ಘಟಕ, ಬ್ಲಡ್‌ಬ್ಯಾಂಕ್‌ಗಳಲ್ಲಿ ವಿವಿಧ ಗುಂಪುಗಳ ರಕ್ತಕ್ಕಾಗಿ ಅನೇಕ ಕರೆಗಳು ಬರುತ್ತಿವೆ. ರಕ್ತದ ತುರ್ತು ಅಗತ್ಯಕ್ಕಾಗಿ ಸಾಮಾಜಿಕ ತಾಣಗಳಾದ ವಾಟ್ಸಪ್‌, ಫೇಸ್‌ಬುಕ್‌ಗಳಲ್ಲೂ ರೋಗಿಯ ಹೆಸರು, ರಕ್ತದ ಗುಂಪು, ಆಸ್ಪತ್ರೆ, ಮೊಬೈಲ್‌ ಸಂಖ್ಯೆ ಸಮೇತ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತಿದೆ.

“ಮೊದಲೆಲ್ಲ ಪ್ರತಿ ತಿಂಗಳು 500 ಯುನಿಟ್‌ ರಕ್ತ ರೆಡ್‌ಕ್ರಾಸ್‌ ಮುಖಾಂತರ ರೋಗಿಗಳಿಗೆ ಪೂರೈಕೆಯಾಗುತ್ತಿತ್ತು. ಆದರೆ ಈಗ ಮಾಮೂಲಿಗಿಂತ ಶೇ. 10ರಷ್ಟು ಅಧಿಕ ಬೇಡಿಕೆ ಹೆಚ್ಚಿದೆ. ಅದರಲ್ಲೂ ಎಬಿ+ ಮತ್ತು ಒ ಗುಂಪಿನ ರಕ್ತಕ್ಕೆ ಜಾಸ್ತಿ ಬೇಡಿಕೆ ಇದೆ ಎನ್ನುತ್ತಾರೆ ರೆಡ್‌ಕ್ರಾಸ್‌ ಅಧ್ಯಕ್ಷ ಶಾಂತಾರಾಮ ಶೆಟ್ಟಿ. ಡೆಂಗ್ಯೂ, ಮಲೇರಿಯಾ ಪೀಡಿತರಲ್ಲಿ ಪ್ಲೇಟ್‌ಲೆಟ್‌ ಕೊರತೆ ಕಾಣುತ್ತಿರುವುದರಿಂದ ವಿವಿಧ ರಕ್ತನಿಧಿ ಘಟಕಗಳಿಗೆ ಪ್ಲೇಟ್‌ಲೆಟ್‌ಗಳನ್ನೂ ಕೋರಿ ಕರೆಗಳು ಬರುತ್ತಿವೆ. ಅಪರೂಪದ ರಕ್ತಗುಂಪುಗಳಾದ ಬಿ  ಮತ್ತು ಒ ಗೂ ಬೇಡಿಕೆ ಇದೆ. ಅಗತ್ಯವಿದ್ದವರಿಗೆ ದಾನಿಗಳ ಮುಖಾಂತರ ಕೊಡಿಸುವ ಪ್ರಯತ್ನವೂ ನಡೆದಿದೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಯಲ್ಲಿ 1 ಲಕ್ಷದಿಂದ 3 ಲಕ್ಷದವರೆಗೆ ಪ್ಲೇಟ್‌ಲೆಟ್‌ ಇರುತ್ತದೆ. ಸಾಂಕ್ರಾಮಿಕ ರೋಗ ಅಥವಾ ಇತರ ರೋಗಗಳ ಕಾರಣಗಳಿಂದ ಕಡಿಮೆಯಾಗುತ್ತದೆ. 40,000ದಿಂದ 20,000ಗಳ ತನಕ ಇಳಿದರೆ ಅಗತ್ಯವಾಗಿ ಹೊಂದಿಕೆಯಾಗುವ ಪ್ಲೇಟ್‌ಲೆಟ್‌ಗಳನ್ನು ರೋಗಿಗೆ ನೀಡಬೇಕಾಗುತ್ತದೆ ಎಂದು ರೆಡ್‌ಕ್ರಾಸ್‌ ಪದಾಧಿಕಾರಿ ತಿಳಿಸಿದ್ದಾರೆ.

156 ಮಂದಿಗೆ ಎಚ್‌1ಎನ್‌1
ಜಿಲ್ಲೆಯಲ್ಲಿ ಈ ಬಾರಿ ಜನವರಿಯಿಂದ ಜು. 17ರವರೆಗೆ ಒಟ್ಟು 50 ಡೆಂಗ್ಯೂ ಪ್ರಕರಣ ಕಂಡು ಬಂದಿದೆ. ಈ ಪೈಕಿ ಪಾಲಿಕೆ ವ್ಯಾಪ್ತಿಯಲ್ಲಿ 13, ಮಂಗಳೂರು ತಾಲೂಕು- 3, ಬಂಟ್ವಾಳ-9, ಪುತ್ತೂರು-10, ಬೆಳ್ತಂಗಡಿ-3, ಸುಳ್ಯದಲ್ಲಿ- 12 ಮಂದಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಕಳೆದ ವರ್ಷ ಒಟ್ಟು  485 ಮಂದಿಗೆ ಡೆಂಗ್ಯೂ ಬಾಧಿಸಿದ್ದು, 6 ಮಂದಿ ಮೃತಪಟ್ಟಿದ್ದರು. 2016ರಲ್ಲಿ ಜಿಲ್ಲೆಯಲ್ಲಿ ಒಟ್ಟು  6,409 ಮಲೇರಿಯಾ ಪ್ರಕರಣ ಕಂಡು ಬಂದಿದ್ದರೆ, ಈ ಬಾರಿ ಜೂನ್‌ವರೆಗೆ 370 ಪ್ರಕರಣ ದೃಢಪಟ್ಟಿದೆ. ಎಚ್‌1ಎನ್‌1 ಜ್ವರಕ್ಕೆ ಒಳಗಾಗಿರುವವರ ಸಂಖ್ಯೆ ಕಳೆದ ವರ್ಷಕ್ಕಿಂತ ಅಧಿಕವಾಗಿದ್ದು, ಇಲ್ಲಿವರೆಗೆ ಒಟ್ಟು 156 ಪ್ರಕರಣ ದೃಢಪಟ್ಟಿದೆ. ಜು. 5ಕ್ಕೆ 105 ಪ್ರಕರಣ ಇದ್ದರೆ, ಸುಮಾರು 15 ದಿನಗಳ ಅಂತರದಲ್ಲಿ 51 ಪ್ರಕರಣ ಹೆಚ್ಚಳವಾಗಿರುವುದು ಗಮನಾರ್ಹ.

ಸರಕಾರಿ ಆಸ್ಪತ್ರೆಗಳಲ್ಲಿ ಜಾಗದ ಕೊರತೆ ಇಲ್ಲ
ಸರಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕಾಯಿಲೆಯ ಚಿಕಿತ್ಸೆಗಾಗಿ ರೋಗಿಗಳು ಬಂದಲ್ಲಿ ಅವರನ್ನು ದಾಖಲು ಮಾಡಿಕೊಳ್ಳಲಾಗುತ್ತಿದೆ. ಅದು ನಮ್ಮ ಜವಾಬ್ದಾರಿ. ಜಾಗದ ಕೊರತೆ ಸರಕಾರಿ ಆಸ್ಪತ್ರೆಗಳಲ್ಲಿ ಉಂಟಾಗಿಲ್ಲ. ಆದರೆ ಖಾಸಗಿ ಆಸ್ಪತ್ರೆಗಳ ಬಗ್ಗೆ ನನಗೇನೂ ಮಾಹಿತಿ ಬಂದಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ಲೇಟ್‌ಲೆಟ್‌ ಕೌಂಟಿಂಗ್‌ ಮಾತ್ರ ಮಾಡಲಾಗುತ್ತದೆಯೇ ಹೊರತು ಪ್ಲೇಟ್‌ಲೆಟ್‌ ಸಿಗುವುದಿಲ್ಲ. ಸಾಂಕ್ರಾಮಿಕ ರೋಗಗಳ ಹಿನ್ನೆಲೆಯಲ್ಲಿ ಪ್ಲೇಟ್‌ಲೆಟ್‌ಗಾಗಿ ಜನಸಾಮಾನ್ಯರು ರಕ್ತನಿಧಿ ಘಟಕಗಳನ್ನು ಸಂಪರ್ಕಿಸಬೇಕಾಗುತ್ತದೆ

– ಡಾ| ರಾಮಕೃಷ್ಣ  ರಾವ್‌, ಜಿಲ್ಲಾ  ಆರೋಗ್ಯಾಧಿಕಾರಿ

– ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.