ಗೋರಕ್ಷಣೆಯ ಹಿಂಸಾಚಾರಗಳ ಬಿಸಿ ಮೋದಿಗೂ ತಟ್ಟಿದೆ: ಶಿವಸೇನೆ


Team Udayavani, Jul 20, 2017, 10:35 AM IST

uddhav-thackeray.jpg

ಮುಂಬಯಿ: ದೇಶದಲ್ಲಿ ಗೋರಕ್ಷಣೆಯ ಹೆಸರಿನಲ್ಲಿ ಬೆಳೆಯತ್ತಿರುವ ಹಿಂಸಾಚಾರದ ಘಟನೆಗಳಿಗೆ ಶಿವಸೇನೆಯು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇತ್ತೀಚೆಗೆ ಕಾಶ್ಮೀರದಲ್ಲಿ ಅಮರನಾಥ ಯಾತ್ರಿಕರ ಮೇಲೆ ಭಯೋತ್ಪಾದಕ ದಾಳಿ ನಡೆದಾಗ‌, ಈ ಸ್ವಯಂಘೋಷಿತ ಗೋರಕ್ಷಕರು ಎಲ್ಲಿಗೆ ಹೋಗಿದ್ದರು ? ಎಂದು ಕೇಳಿದೆ.

ಗೋರಕ್ಷಣೆಯ ಹೆಸರಿನಲ್ಲಿ ಆರಂಭವಾದ ಈ ಹಿಂಸಾಚಾರಗಳ ಬಿಸಿಯು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ತಟ್ಟಿದೆ ಎಂದು ಆಡಳಿತಾರೂಢ ಎನ್‌ಡಿಎ ಮಿತ್ರಪಕ್ಷ ಶಿವಸೇನೆಯು ಬುಧವಾರ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಿದೆ.

ಪಾಕಿಸ್ಥಾನ ಕೂಡ ರಾಷ್ಟ್ರವನ್ನು ಗೆೋರಕ್ಷಣೆಯ ಹೆಸರಿನಲ್ಲಿ ವಿಭಜಿಸಲು ಬಯಸುತ್ತಿದೆ ಎಂದು ಪಕ್ಷ ನುಡಿದಿದೆ.

ಗೋರಕ್ಷಣೆಯ ಹೆಸರಿನಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆದಿರುವ ಇತ್ತೀಚಿನ ಹಿಂಸಾಚಾರದ ಘಟನೆಗಳ ಹಿನ್ನೆಲೆಯಲ್ಲಿ  ಶಿವಸೇನೆಯಿಂದ ಈ ಹೇಳಿಕೆ ಹೊರಬಂದಿರುವುದಾಗಿದೆ.

ರಾಷ್ಟ್ರದಾದ್ಯಂತ ಗೋರಕ್ಷಕರು ಸೃಷ್ಟಿಸಿರುವ  ದಾಂಧಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಟೀಕೆ ಎದುರಿಸಬೇಕಾಯಿತು. ಪ್ರಧಾನಿ ಅವರ ಕಟು ಎಚ್ಚರಿಕೆಯ ಹೊರತಾಗಿಯೂ ಹಿಂಸೆಯ ಘಟನೆಗಳು ನಿಲ್ಲುತ್ತಿಲ್ಲ ಎಂದು ಶಿವಸೇನೆ ಸಂಪಾದಕೀಯದಲ್ಲಿ ನುಡಿದಿದೆ.

ದೇಶದಾದ್ಯಂತ ನಿರಂತರವಾಗಿ ಮುಸಲ್ಮಾನರ ಮೇಲೆ ಗೋಮಾಂಸ ಸಾಗಣೆಯ ಸಂಶಯದ ಮೇರೆಗೆ ದಾಳಿ ನಡೆಸಿ, ಅವರ ಪ್ರಾಣ ತೆಗೆದುಕೊಳ್ಳಲಾಗುತ್ತಿದೆ. ಜನರು ಇದನ್ನು ವ್ಯಾಪಾರವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಅದು ತಿಳಿಸಿದೆ.
ಭಾರತದಲ್ಲಿ ಜನರು ಗೋರಕ್ಷಣೆಯ ಹೆಸರಿನಲ್ಲಿ ವಿಭಜನೆಯಾಗಬೇಕೆಂದು ಪಾಕಿಸ್ಥಾನ ಬಯಸುತ್ತಿದೆ. ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿರುವ ಸಮಯದಲ್ಲಿ ದೇಶದ ಆಂತರಿಕ ಜಗಳವು ರಾಷ್ಟ್ರದ ಏಕತೆಯ ಮೇಲೆ ಪರಿಣಾಮ ಬೀರಬಹುದು ಎಂಬುದು ಶಿವಸೇನೆ ಅಭಿಪ್ರಾಯವಾಗಿದೆ.

ಪ್ರಧಾನಮಂತ್ರಿ ಮೋದಿ ಅವರ  ಗೃಹ ರಾಜ್ಯ ಗುಜರಾತ್‌ನಲ್ಲೂ ಗೋರಕ್ಷಕರು ಹಸುವಿನ ರಕ್ಷಣೆಯ ಹೆಸರಿನಲ್ಲಿ ಜನರನ್ನು ನಿಷ್ಕರುಣೆಯಿಂದ ಕೊಂದಿದ್ದಾರೆ. ಆದರೆ, ಆ ರಾಜ್ಯದ ಜನರು ಅಮರನಾಥ ಯಾತ್ರೆಯ ವೇಳೆ ಭಯೋತ್ಪಾದಕರಿಂದ  ಕೊಲ್ಲಲ್ಪಟ್ಟಾಗ, ಅವರು (ಗೋರಕ್ಷಕರು) ಎಲ್ಲಿಗೆ ಹೋಗಿದ್ದರು ?  ಎಂದು ಶಿವಸೇನೆ ತನ್ನ ಮುಖವಾಣಿಯ ಸಂಪಾದಕೀಯದಲ್ಲಿ ಕೇಳಿದೆ.

ಗೋರಕ್ಷಕರು ಪ್ರತಿಯೊಂದು ಮಟ್ಟದಲ್ಲೂ ಸಾಹಸವನ್ನು ಪ್ರದರ್ಶಿಸಬೇಕು. ಧರ್ಮದ ಹೆಸರಿನಲ್ಲಿ ಗೋರಕ್ಷಣೆ ಆವಶ್ಯಕ ಎಂದಾದರೆ, ಧರ್ಮದ ಹೆಸರಿನಲ್ಲಿ ರಾಷ್ಟ್ರದ ರಕ್ಷಣೆಯೂ ಅವಶ್ಯಕವಾಗುತ್ತದೆ ಎಂದು ಪಕ್ಷ ಪ್ರತಿಪಾದಿಸಿದೆ.

ಗೋರಕ್ಷಕರು ಪ್ರಧಾನಿಯವರ ದಾರಿಗೆ ಮುಳುವಾಗು ತ್ತಿದ್ದಾರೆ. ಅವರ ಎಚ್ಚರಿಕೆಯ ಹೊರತಾಗಿಯೂ ಇವರು ತಮ್ಮ ಕೈಗೆಲಸವನ್ನು ಬಿಡುತ್ತಿಲ್ಲ ಎಂದು ಶಿವಸೇನೆ ನುಡಿದಿದೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.