ಇದು ಒಂದು ಕುರ್ಚಿಯ ಕಥೆ; ಫೋಸ್ ಕೊಡಲು ಹೋಗಿ ಅರೆಸ್ಟ್ ಆದ!
Team Udayavani, Jul 20, 2017, 5:11 PM IST
ಲಕ್ನೋ: ಕುರ್ಚಿ ಮೇಲೆ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ರಾಜಕಾರಣದಿಂದ ಹಿಡಿದು ಪ್ರತಿಯೊಂದು ಕ್ಷೇತ್ರದಲ್ಲೂ ಕುರ್ಚಿಗಾಗಿ ಕಸರತ್ತು ನಡೆಯುತ್ತಿರುತ್ತದೆ. ಹಾಗೆಯೇ ಉತ್ತರಪ್ರದೇಶ ಶಿಕ್ಷಣ ಸಚಿವರ ಕುರ್ಚಿಯ ಮೇಲೆ ಕುಳಿತುಕೊಂಡು ಫೋಟೋ ಕ್ಲಿಕ್ಕಿಸಿಕೊಂಡ ಯುವಕ ಉತ್ತರಪ್ರದೇಶ ಪೊಲೀಸರ ಅತಿಥಿಯಾಗಿದ್ದಾನೆ!
ಏನಿದು ಕುರ್ಚಿ ಪ್ರಕರಣ?
ಬಾರಾಬಂಕಿಯ ಅಜಯ್ ತಿವಾರಿ ಎಂಬ ಯುವಕ ತನ್ನ ಗೆಳೆಯರ ಜೊತೆ ಉತ್ತರಪ್ರದೇಶ ಶಿಕ್ಷಣ ಸಚಿವ ಸಂದೀಪ್ ಸಿಂಗ್ ಅವರನ್ನು ಭೇಟಿಯಾಗಲು ತೆರಳಿದ್ದ. ಈ ಸಂದರ್ಭದಲ್ಲಿ ಸಚಿವರ ಕೊಠಡಿಯಲ್ಲಿ ಇರಲಿಲ್ಲವಾಗಿತ್ತು, ಗೆಳೆಯರು ಹೊರಗಿದ್ದರು, ಆಗ ತಾನೊಬ್ಬನೇ ಇರುವುದನ್ನು ಕಂಡು ಆತನಿಗೊಂದು ಹುಚ್ಚು ಆಸೆ ಮೊಳಕೆಯೊಡೆದಿತ್ತು… ಕೂಡಲೇ ಆತ ಸಚಿವರ ಕುರ್ಚಿಯಲ್ಲಿ ಕುಳಿತು ಫೋಟೋ(ಸೆಲ್ಫಿ) ತೆಗೆದುಕೊಂಡಿದ್ದ.
ಫೋಟೋ ತೆಗೆದುಕೊಂಡ ಬಳಿಕ ತಿವಾರಿಗೆ ತಾನು ಎಷ್ಟು ಪವರ್ ಫುಲ್ ಅಂತ ಜಂಬಕೊಚ್ಚಿಕೊಳ್ಳುವ ಹಂಬಲದೊಂದಿಗೆ ಅದನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿಬಿಟ್ಟಿದ್ದ. ವಿಪರ್ಯಾಸ ಎಂಬಂತೆ ಇದರಿಂದ ತಿವಾರಿಗೆ ಕಂಟಕ ಎದುರಾಗಿತ್ತು!
ಸಚಿವರ ಕೊಠಡಿಗೆ ತೆರಳಿ ಅವರ ಕುರ್ಚಿ ಮೇಲೆ ಕುಳಿತು ಫೋಟೋ ತೆಗೆಸಿಕೊಂಡ ಬಗ್ಗೆ ಜನರು ದೂರನ್ನು ನೀಡಿ, ಕಟುವಾಗಿ ಟೀಕಿಸಿದ್ದರು. ದೂರನ್ನು ಸ್ವೀಕರಿಸಿದ ನಂತರ ಸಿಂಗ್ ತನ್ನ ಕಾರ್ಯದರ್ಶಿ ಮೂಲಕ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರು ತಿವಾರಿಯನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’