ಲಾಭದಾಯಕ, ಪರಿಸರ ಸ್ನೇಹಿ ಕೃಷಿ ಗೇರು


Team Udayavani, Jul 21, 2017, 5:50 AM IST

geru.jpg

ಸುಳ್ಯ: ಗೇರು ಕೃಷಿ ಲಾಭದಾಯಕ ಮತ್ತು ಪರಿಸರ ಸ್ನೇಹಿ ಈ ಬೆಳೆಗೆ ಖರ್ಚು ಮತ್ತು ಶ್ರಮ ಕಡಿಮೆ. ಇಂದು ಈ ಬೆಳೆಯತ್ತ ಹೆಚ್ಚು ಹೆಚ್ಚು ಕೃಷಿಕರು ಮನ ಮಾಡುತ್ತಿದ್ದಾರೆ. ಗೇರು ಕೃಷಿ ಬಗ್ಗೆ ಪೂರ್ತಿ ಮಾಹಿತಿ ಪಡೆದು ರೈತರು ತಮ್ಮಲ್ಲಿರುವ ಖಾಲಿ ಜಾಗವನ್ನು ಬಳಸಿ ಕೃಷಿ ಮಾಡಿ ಎಂದು ಗೇರು ಸಂಶೋಧನಾ ನಿರ್ದೇಶನಾಲಯದ ನಿವೃತ್ತ ವಿಜ್ಞಾನಿ ಯದುಕುಮಾರ್‌ ಅವರು ತಿಳಿಸಿದರು.

ಅವರು ಇಲ್ಲಿನ ತೋಟಗಾರಿಕಾ ಇಲಾಖೆ ಆಶ್ರಯದಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಗೇರು ಕೃಷಿ ಬಗ್ಗೆ ರೈತರಿಗೆ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಗೇರು ಬೀಜಕ್ಕೆ ಉತ್ತಮ ಬೇಡಿಕೆ ಇದೆ. ದೇಶದಲ್ಲಿನ ಉತ್ಪತ್ತಿ ಸಾಕಾಗದೆ ವಿದೇಶದಿಂದಲೂ ಆಮದು ಮಾಡಿ ಕೊಳ್ಳಲಾಗುತ್ತದೆ. ಗೇರು ಬೀಜದ ದರ ಇಳಿಕೆಯಾಗುವ ಸಾಧ್ಯತೆ ಇಲ್ಲ.  ಇನ್ನು 10 ವರ್ಷಗಳವರೆಗೂ ಮಾರುಕಟ್ಟೆಯಲ್ಲಿ ಉತ್ತಮ ದರ ದೊರೆಯಲಿದೆ ಎಂದರು.

ಕರಾವಳಿ ಅಲ್ಲದೆ ರಾಜ್ಯದ ಒಳ ಪ್ರದೇಶಗಳಲ್ಲೂ ರೈತರು ಗೇರು ಕೃಷಿಯತ್ತ ಆಸಕ್ತರಾಗಿದ್ದಾರೆ. ಮಂಡ್ಯದಲ್ಲಿ ಕಬ್ಬು, ಭತ್ತ ಬೆಳೆಯುವ ಕೃಷಿಕರು ಆ ಕೃಷಿಗಳಲ್ಲಿ ಹೆಚ್ಚಿನ ಲಾಭ ಸಿಗುತ್ತಿಲ್ಲ ಎಂಬ ಕಾರಣಕ್ಕಾಗಿ ಆ ಪ್ರದೇಶದಲ್ಲಿ ಗೇರು ಕೃಷಿ ಮಾಡುತ್ತಿದ್ದಾರೆ ಎಂದರು.

ವೈಜ್ಞಾನಿಕ ರೀತಿಯಲ್ಲಿ ಗೇರು ಕೃಷಿ ಮಾಡಿದರೆ 1 ಹೆಕ್ಟೇರ್‌ನಲ್ಲಿ 1111 ಗಿಡಗಳಿಂದ 3 ಟನ್‌ ಗೇರು ಬೀಜ ಉತ್ಪನ್ನ ದೊರೆಯುತ್ತದೆ ಎಂದು ಯದುಕುಮಾರ್‌ ಮಾಹಿತಿ ನೀಡಿದರು.

ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ ಅವರು ಕಾರ್ಯಕ್ರಮ ಉದ್ಘಾಟಿಸಿ ಪರ್ಯಾಯ ಕೃಷಿಯತ್ತ ಮುಖ ಮಾಡಿದ ಈ ಪರಿಸರದ ಕೃಷಿಕರು ಗೇರು ಕೃಷಿಯತ್ತ ಮನಸ್ಸು ಮಾಡಬೇಕೆಂದರು.

ವೈಜ್ಞಾನಿಕ ಕ್ರಮ ಅನುಸರಿಸಿ
ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಅವರು ಅಧ್ಯಕ್ಷತೆ ವಹಿಸಿ ಯಾವುದೇ ಕೃಷಿ ಮಾಡುವಾಗ ವೈಜ್ಞಾನಿಕ ಕ್ರಮ ಅನುಸರಿಸಿ. ಇದರಿಂದ ಅಧಿಕ ಲಾಭಾಂಶ ಪಡೆಯಬಹುದೆಂದರು.

ಮುಖ್ಯ ಅತಿಥಿಗಳಾಗಿ ತಾ.ಪಂ. ಉಪಾಧ್ಯಕ್ಷೆ ಶುಭದಾ ಎಸ್‌.ರೈ ಭಾಗವಹಿಸಿದ್ದರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕಿ ಸುಹಾನ ಅವರು ಸ್ವಾಗತಿಸಿ, ಅರ್ಬನ್‌ ಪೂಜೇರ್‌ ವಂದಿಸಿದರು. ಕೈಗಾರಿಕಾ ವಿಸ್ತರಣಾಧಿಕಾರಿ ವೀರಪ್ಪ ಗೌಡ ಅವರು ನಿರೂಪಿಸಿದರು.

ಟಾಪ್ ನ್ಯೂಸ್

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Dakshina Kannada: 14 ಗ್ರಾ.ಪಂ.ಗಳಲ್ಲಿ ಶೇಕಡಾ 100 ತೆರಿಗೆ ಸಂಗ್ರಹ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

ಸುಬ್ರಹ್ಮಣ್ಯ: ಗಾಳಿ ಮಳೆಗೆ ಮರ ಬಿದ್ದು ಮಹಿಳೆ ಮೃತ್ಯು…

ಸುಬ್ರಹ್ಮಣ್ಯ: ಗಾಳಿ ಮಳೆಗೆ ಮರ ಬಿದ್ದು ಮಹಿಳೆ ಮೃತ್ಯು…

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.