ಭಯ ಬಿಡಿ, ಪೊಲೀಸರೊಂದಿಗೆ ಕೈ ಜೋಡಿಸಿ


Team Udayavani, Jul 22, 2017, 1:52 PM IST

22-DV-5.jpg

ದಾವಣಗೆರೆ: ಪೊಲೀಸರೊಂದಿಗೆ ನಾಗರಿಕರು ಉತ್ತಮ ಸಂಬಂಧ ಇಟ್ಟುಕೊಂಡಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಸುಲಭ ಎಂದು ಪೂರ್ವ ವಲಯ ಪೊಲೀಸ್‌ ಮಹಾನಿರೀಕ್ಷಕ ಎಂ.ಎ. ಸಲೀಂ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ತ್ರಿಶೂಲ್‌ ಕಲಾಭವನದಲ್ಲಿ ಸುಧಾರಿತ ಗಸ್ತು ನಾಗರಿಕ ಸದಸ್ಯರ ಸಭೆ ಉದ್ಘಾಟಿಸಿ, ಮಾತನಾಡಿದ ಅವರು, ದಾವಣಗೆರೆಯನ್ನ ಮಾದರಿ ನಗರ ಮಾಡುವಲ್ಲಿ ನಾಗರಿಕರ ಪಾತ್ರ ಹಿರಿದಾಗಿದೆ. ಅಪರಾಧ ಚಟುವಟಿಕೆಗೆ ಕಡಿವಾಣ ಹಾಕಿ, ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಅತೀ ಅಗತ್ಯ ಎಂದರು. ಪೊಲೀಸರ ಕೆಲಸ ನಾಗರಿಕರಿಗೆ ಭದ್ರತೆ ಒದಗಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವುದೇ ಆಗಿದೆ. ಆದರೆ, ನಾಗರಿಕರು ಪೊಲೀಸರನ್ನು ಕಂಡರೆ ಈಗಲೂ ಭಯ ಪಡುವ ಸ್ಥಿತಿ ಇದೆ. ಅನೇಕ ಸಮಯದಲ್ಲಿ ನಾಗರಿಕರು ಸಣ್ಣ ಸಹಾಯಕ್ಕೂ ಸಹ ಮುಂದೆ ಬರುವುದಿಲ್ಲ. ಮಹಜರು ಮಾಡುವಾಗ, ಸಾಕ್ಷಿ ಹೇಳುವಾಗ, ಅಪರಾಧ ಚಟುವಟಿಕೆ ಕುರಿತು ಮಾಹಿತಿ ನೀಡುವಾಗ ನಾಗರಿಕರು ಹಿಂಜರಿಯುತ್ತಾರೆ. ಈ ಮನೋಭಾವ ದೂರಾಗಬೇಕಿದೆ ಎಂದು ಹೇಳಿದರು.

ಬ್ರಿಟೀಷರ ಕಾಲದಲ್ಲಿ ಜಾರಿಯಾದ ಪೊಲೀಸ್‌ ವ್ಯವಸ್ಥೆ ನಾಗರಿಕರಲ್ಲಿನ ಭಯಕ್ಕೆ ಕಾರಣವಾಗಿದೆ. ಬ್ರಿಟೀಷರು ತಮ್ಮ ಸಾಮ್ರಾಜ್ಯದ ವಿರುದ್ಧ ಯಾರೂ ದನಿ ಎತ್ತಬಾರದು. ಹೋರಾಟ ರೂಪಿಸಬಾರದು ಎಂಬ ಕಾರಣಕ್ಕೆ ಪೊಲೀಸರನ್ನು ಉಗ್ರವಾದಿಗಳಂತೆ ಬಿಂಬಿಸಿ, ಪೊಲೀಸರ ಬಗ್ಗೆ ಭಯ ಹುಟ್ಟುವಂತೆ ನೋಡಿಕೊಳ್ಳುತ್ತಿದ್ದರು. ಅದೇ ಇಂದೂ ಸಹ ಮುಂದುವರಿದಿದೆ. ಇದೀಗ ಈ ನಾಗರಿಕ ಸಮಿತಿ ಮೂಲಕ ಅದನ್ನು ದೂರಮಾಡುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದರು.

ಈ ಹಿಂದೆ ಸಹ ಈ ವ್ಯವಸ್ಥೆ ಇತ್ತು. ಆದರೆ, ದೊಡ್ಡ ಪ್ರಮಾಣದಲ್ಲಿ ಇರಲಿಲ್ಲ. ಇದೀಗ 2-3 ಹಳ್ಳಿಗೆ, ನಗರ ಪ್ರದೇಶಗಳಲ್ಲಿ 300 ಮನೆಗೆ ಒಬ್ಬರನ್ನು ಗಸ್ತಿಗೆ ನೇಮಿಸಲಾಗಿದೆ. ಇದರಿಂದ ನಾಗರಿಕರು ಪೊಲೀಸ್‌ ಜೊತೆಗೆ ಬೆರೆಯಲು, ಸಲಹೆ, ಸಹಕಾರ ನೀಡಲು
ಅನುಕೂಲವಾಗಲಿದೆ. ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಅತಿ ಬೇಗ 27 ಪೊಲೀಸ್‌ ಠಾಣೆಗಳಲ್ಲಿ ಸಮಿತಿ ರಚಿಸುವ ಮೂಲಕ ಉತ್ತಮ ಕಾರ್ಯ ನಿರ್ವಹಿಸಿದ್ದಾರೆಂದು ಅವರು ಶ್ಲಾಘಿಸಿದರು.

ಇತೀ¤ಚಿನ ದಿನಗಳಲ್ಲಿ ಅಪರಾಧಿಗಳು ಸಹ ತಮ್ಮ ಕಾರ್ಯವೈಖರಿ ಬದಲಾಯಿಸಿಕೊಂಡಿದ್ದಾರೆ. ಮೊದಲಿನಂತೆ ಮನೆಗಳ್ಳತನ ಮಾಡುವ ಗೋಜಿಗೆ ಅವರು ಹೋಗುತ್ತಿಲ್ಲ. ಇದೀಗ ಸರಗಳ್ಳತನ ಪ್ರಕರಣ ಹೆಚ್ಚುತ್ತಿವೆ. ಇವನ್ನು ತಡೆಯುವ ನಿಟ್ಟಿನಲ್ಲಿ ನಾಗರಿಕರು
ಸಹಕಾರ ನೀಡಬೇಕು. ಬೆಲೆ ಬಾಳುವ ಒಡವೆ ಧರಿಸುವಾಗ ಎಚ್ಚರಿಕೆ ವಹಿಸಿ. ಅನುಮಾನಾಸ್ಪದವಾಗಿ ಸಂಚರಿಸುವವರ ಕುರಿತು ಮಾಹಿತಿ ನೀಡಿ ಎಂದು ಅವರು ಮನವಿ ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಭೀಮಾಶಂಕರ್‌ ಎಸ್‌. ಗುಳೇದ್‌, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಯಶೋದ ಎಸ್‌. ವಂಟಗೋಡಿ, ನಗರ ಉಪಾಧೀಕ್ಷಕ ಬಾಬು, ಸಿಪಿಐ ಉಮೇಶ್‌ ಇದ್ದರು. ನಂತರ ನಡೆದ ಸಂವಾದದಲ್ಲಿ ನಾಗರಿಕರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.

ಒಂದೂವರೆ ತಾಸು ವಿಳಂಬ
ಪೊಲೀಸ್‌ ಇಲಾಖೆ ಕರೆದಿದ್ದ ನಾಗರಿಕ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಜನರು ಸಂವಾದಕ್ಕೆ ಒಂದೂವರೆ ತಾಸು ಕಾಯಬೇಕಾಯಿತು. ಸಭೆ ಬೆಳಗ್ಗೆ 10 ಗಂಟೆಗೆ ಸಭೆ ನಿಗದಿಯಾಗಿತ್ತು. ಆದರೆ, ಆರಂಭವಾಗಿದ್ದು 11.30ಕ್ಕೆ. ಪ್ರಾರ್ಥನೆ, ಸ್ವಾಗತ, ಉದ್ಘಾಟಕರ ಭಾಷಣ ಹೀಗೆ ವೇದಿಕೆಯ ಪ್ರಕ್ರಿಯೆ ಮುಗಿಯುವ ವೇಳೆಗೆ 12 ಗಂಟೆ ದಾಟಿತು. ನಂತರ ಸಂವಾದಕ್ಕೆ ಅವಕಾಶ ಮಾಡಿಕೊಡಲಾಯಿತು.

ಅಭಯ ಶೀಘ್ರಾರಂಭ
ಒಂಟಿಯಾಗಿ ವಾಸ ಮಾಡುವ ಹಿರಿಯ ನಾಗರಿಕರಿಗೆ ರಕ್ಷಣೆ ಕೊಡುವ ಉದ್ದೇಶದಿಂದ ಅಭಯ ಎಂಬ ಹೊಸ ಯೋಜನೆ ಜಾರಿ ಮಾಡಲಿದ್ದೇವೆ. ಇದರಡಿ ನಿಗದಿತ ಸಮಯಕ್ಕೆ ಪೊಲೀಸರು ಗುರುತಿಸಲ್ಪಟ್ಟ ಹಿರಿಯ ನಾಗರಿಕರನ್ನು ಭೇಟಿಮಾಡಿ, ಭದ್ರತೆ ಒದಗಿಸಲಿದ್ದಾರೆ.
ಎಂ.ಎ. ಸಲೀಂ, ಪೂರ್ವ ವಲಯ ಐಜಿಪಿ. 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.