ಮಂಗಳೂರು: ಕೇಂದ್ರ  ಬಸ್‌ ನಿಲ್ದಾಣ ಕೊನೆಗೂ ಪಂಪ್‌ವೆಲ್‌ನತ್ತ ?


Team Udayavani, Jul 23, 2017, 6:20 AM IST

pumpwell.jpg

ಮಂಗಳೂರು:  ಮಂಗಳೂರು ನಗರ ಸ್ಮಾರ್ಟ್‌ ಸಿಟಿಯಾಗಲು ಹೊರಟಿ ದ್ದರೂ 21 ವರ್ಷಗಳಿಂದ ತಾತ್ಕಾಲಿಕ ಬಸ್‌ ನಿಲ್ದಾಣದಲ್ಲೇ ನರಳುತ್ತಿದೆ. ಕೊನೆಗೂ ಪಂಪ್‌ವೆಲ್‌ನತ್ತ ಸ್ಥಳಾಂತರ ಗೊಳ್ಳುವ ಸೂಚನೆ ಕಂಡು ಬಂದಿದೆ. ಈ ಬಗ್ಗೆ 15 ದಿನದಲ್ಲಿ ನಿರ್ಧಾರವಾಗಲಿದೆ.

ಹಂಪನಕಟ್ಟೆಯಿಂದ ನೆಹರೂ ಮೈದಾನದ ಬಳಿ ಹಾಕಿ  ಮೈದಾನಕ್ಕೆ ತಾತ್ಕಾಲಿಕ ನೆಲೆಯಲ್ಲಿ  ಸರ್ವಿಸ್‌ ಬಸ್‌ನಿಲ್ದಾಣವನ್ನು 1996ರ ಅ. 6ರಂದು ಸ್ಥಳಾಂತರಿಸಲಾಯಿತು. ಸುಮಾರು 21 ವರ್ಷಗಳಷ್ಟು  ಸುದೀರ್ಘ‌ ಅವಧಿ ಯಿಂದ ತಾತ್ಕಾಲಿಕ ನೆಲೆಯಲ್ಲಿದ್ದು, ಅಭಿ ವೃದ್ಧಿ ಕಾಣದೇ ತ್ರಿಶಂಕು ಸ್ಥಿತಿಯಲ್ಲಿದೆ. ಹಾಗಾಗಿ ತೇಪೆ ಕಾಮಗಾರಿಯಲ್ಲೇ ತೃಪ್ತಿ ಪಡುವಂತಾಗಿದೆ.

ಮಂಗಳೂರು ನಗರ ಅತಿಯಾದ ವಾಹನ ದಟ್ಟಣೆ ಎದುರಿಸುತ್ತಿದೆ. 1993- 94ರಲ್ಲಿ  ಸುಮಾರು 1.2 ಲಕ್ಷ ವಾಹನಗಳಿದ್ದರೆ  ಪ್ರಸ್ತುತ  ಸುಮಾರು 4 ಲಕ್ಷ  ಮೀರಿದ್ದು 4 ಪಟ್ಟು ಹೆಚ್ಚಾಗಿದೆ.  ದಿನವೊಂದಕ್ಕೆ  ಸರಾಸರಿ ನೂರು ವಾಹನಗಳು ಹೊಸದಾಗಿ ನೋಂದಣಿ ಯಾಗುತ್ತಿವೆ. ಸಿಟಿಬಸ್‌, ಸರ್ವಿಸ್‌ಬಸ್‌, ಎಕ್ಸ್‌ಪ್ರೆಸ್‌ ಬಸ್‌ಗಳು, ಟೂರಿಸ್ಟ್‌ ಬಸ್‌ಗಳು, ಅಂತಾರಾಜ್ಯ ಪರವಾನಿಗೆಯ ಬಸ್‌ಗಳು,  ಶಾಲಾ ಕಾಲೇಜುಗಳ ಬಸ್‌ಗಳು ಸಹಿತ  ಸುಮಾರು 4 ಸಾವಿರಕ್ಕೂ ಹೆಚ್ಚು ಬಸ್‌ಗಳಿವೆ.  ಹೊಸದಾಗಿ ಇಲ್ಲಿಗೆ ಬಸ್‌ಗಳ ಆಗಮನಕ್ಕೆ ಪರವಾನಿಗೆ  ಸಿಗುವುದಿಲ್ಲ. 

ಯೋಜನೆಯಾಗಿಯೇ ಉಳಿದಿದೆ
ನಗರಕ್ಕೆ  ಸುಸಜ್ಜಿತ  ಬಸ್‌ ನಿಲ್ದಾಣ ಪ್ರಸ್ತಾವಕ್ಕೆ  ಮೂರು ದಶಕಗಳ ಇತಿಹಾಸ ವಿದೆ. ಬಸ್‌ ನಿಲ್ದಾಣವನ್ನು  ನೆಹರೂ ಮೈದಾನದ  ಹಾಕಿ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡುವಾಗಲೇ  ಸೂಕ್ತ ಪ್ರದೇಶದಲ್ಲಿ   ವಿಶಾಲ ಮತ್ತು ಸುಸಜ್ಜಿತ ಬಸ್‌ ನಿಲ್ದಾಣವನ್ನು  ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ಅದು ಇಂದಿನವರೆಗೆ ಕಾರ್ಯಗತಗೊಂಡಿಲ್ಲ.

ಜಾಗ ಇದೆ; ಜಾರಿಯಾಗುತ್ತಿಲ್ಲ 
ಹಲವು ಪ್ರದೇಶಗಳು  ಪ್ರಸ್ತಾಪಕ್ಕೆ ಬಂದು  ಕಡೆಗೆ ಪಂಪ್‌ವೆಲ್‌ನಲ್ಲಿ  ಒಟ್ಟು 17.5 ಎಕ್ರೆ ಜಾಗವನ್ನು  ಅಂದಾಜಿಸ ಲಾಯಿತು. ರಾಷ್ಟ್ರೀಯ ಹೆದ್ದಾರಿ  66ಕ್ಕೆ ತಾಗಿಕೊಂಡಂತೆ  ಪ್ರಥಮ ಹಂತದಲ್ಲಿ  ಸುಮಾರು 8  ಎಕ್ರೆ ಜಾಗವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಪ್ರಸ್ತುತ ಉಳಿದ 7.33 ಎಕ್ರೆ ಪ್ರದೇಶಕ್ಕೆ  ಮಣ್ಣು ತುಂಬಿಸುವ ಕಾರ್ಯ ಆರಂಭವಾಗಿ 3 ವರ್ಷಗಳಾಗಿವೆ. ಈ ವರ್ಷದ  ಆರಂಭದಲ್ಲಿ ಇಲ್ಲಿ  ಇಂಟರ್‌ಲಾಕ್‌ ಅಳವಡಿಸಿ ತಾತ್ಕಾಲಿಕವಾಗಿ ಪ್ರಾಯೋಗಿಕ ನೆಲೆಯಲ್ಲಿ  ಸರ್ವಿಸ್‌  ಬಸ್‌ ನಿಲ್ದಾಣವನ್ನು  ಸ್ಥಳಾಂತರಿಸುವ ಬಗ್ಗೆ  ಪ್ರಸ್ತಾವಿಸಲಾಗಿತ್ತು¤.  ಮುಖ್ಯಮಂತ್ರಿಯ 2ನೇ ಹಂತದ 100 ಕೋ.ರೂ. ಅನುದಾನದಲ್ಲಿ ಒಂದಷ್ಟು ಹಣವನ್ನು ಇದರ ಅಭಿವೃದ್ಧಿಗೆ  ವಿನಿಯೋಗಿಸುವ ಬಗ್ಗೆ  ತೀರ್ಮಾನವಾಗಿತ್ತು.

ಯಾವುದೂ ಕೈಗೂಡಿಲ್ಲ. 
ಪ್ರಸ್ತುತ ಲಭ್ಯವಿರುವ 7.33 ಎಕ್ರೆ ಜಾಗದಲ್ಲಿ ಯಾವ ರೀತಿ ಸುಸಜಿcತ ಬಸ್‌ನಿಲ್ದಾಣ ನಿರ್ಮಿಸಬಹುದು ಎಂಬ ಬಗ್ಗೆ ಸಾಧ್ಯತಾ ವರದಿ ಹಾಗೂ ನಕ್ಷೆ ಸಿದ್ಧಗೊಂಡಿದೆ. ಸರಕಾರಿ- ಖಾಸಗಿ ನೆಲೆಯಲ್ಲಿ ಇದನ್ನು  ನಿರ್ಮಿಸಲು ಉದ್ದೇಶಿಸಲಾಗಿದ್ದು, ಖಾಸಗಿ ಬಿಡ್‌ದಾರರು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಕೆಲವು ದಿನಗಳಲ್ಲಿ  ಈ ಬಗ್ಗೆ  ಸ್ಪಷ್ಟ ಚಿತ್ರಣ ಹೊರಬೀಳಲಿದೆ.

ಪಂಪ್‌ವೆಲ್‌ನಲ್ಲಿ ತಾತ್ಕಾಲಿಕ ವ್ಯವಸ್ಥೆಗೆ ಚಿಂತನೆ
ಪಂಪ್‌ವೆಲ್‌ನಲ್ಲಿ  ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣ ಕುರಿತಂತೆ ಪ್ರಕ್ರಿಯೆಗಳು ಜಾರಿಯಲ್ಲಿದೆ.  ಸುಸಜ್ಜಿತ ಬಸ್‌ನಿಲ್ದಾಣ ನಿರ್ಮಾಣವಾಗುವವರೆಗೆ ತಾತ್ಕಾಲಿಕ ನೆಲೆಯಲ್ಲಿ ಬಸ್‌ನಿಲ್ದಾಣ ವ್ಯವಸ್ಥೆ ಗೊಳಿಸುವಂತೆ ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆದಿದೆ. ಮುಂದಿನ 15 ದಿನಗಳಲ್ಲಿ  ಈ ಬಗ್ಗೆ ನಿರ್ಧಾರವಾಗಬಹುದು.  ಖಾಸಗಿ- ಸರಕಾರಿ ಸಹಭಾಗಿತ್ವದಲ್ಲಿ ಬಸ್‌ನಿಲ್ದಾಣ ನಿರ್ಮಾಣ ಪ್ರಸ್ತಾವನೆ ಇದ್ದು, ಈ ಬಗ್ಗೆ  ಜಿಲ್ಲಾಧಿಕಾರಿ ಕಚೇರಿಯಲ್ಲಿ ಇತ್ತೀಚೆಗೆ ಸಭೆ ಜರಗಿದ್ದು ಆಸಕ್ತರು ಭಾಗವಹಿಸಿದ್ದಾರೆ.  ಮಂಗಳೂರಿನಲ್ಲಿ  ವಾಹನದಟ್ಟಣೆ ನಿಭಾಯಿಸಲು ಬಸ್‌ನಿಲ್ದಾಣವನ್ನು  ಪಂಪ್‌ವೆಲ್‌ಗೆ ಸ್ಥಳಾಂತರಿಸುವುದು ಅನಿವಾರ್ಯ.
– ಜೆ .ಆರ್‌.ಲೋಬೋ, ಶಾಸಕರು

ಹೆದ್ದಾರಿ ಅಡಚಣೆ ನೆವ
ನಂತೂರು ವೃತ್ತದಿಂದ ತಲಪಾಡಿವರೆಗೆ ರಾ.ಹೆ. 66ನ್ನು ಅಗಲಗೊಳಿಸುವ ಕಾಮಗಾರಿ ನಡೆಯುತ್ತಿದೆ. ಪಂಪ್‌ವೆಲ್‌ನಲ್ಲಿ ಫ್ಲೈಓವರ್‌ ನಿರ್ಮಾಣವಾಗುತ್ತಿದೆ. ಈ ಹಂತದಲ್ಲಿ ಇಲ್ಲಿ  ಬಸ್‌ನಿಲ್ದಾಣ ನಿರ್ಮಾಣವಾದರೆ ಸಂಚಾರ ವ್ಯವಸ್ಥೆ ಬಾಧಿತವಾಗಲಿದೆ. ತಾಂತ್ರಿಕ ಸಮಸ್ಯೆಗಳು ಉದ್ಭವವಾಗಲಿದೆ. ನಿಲ್ದಾಣಕ್ಕೆ  ಬಸ್‌ಗಳ ಆಗಮನ ನಿರ್ಗಮನಕ್ಕೆ ಸಮಸ್ಯೆಯಾಗಲಿದೆ ಎಂಬ ವಾದವನ್ನು  ರಾಷ್ಟ್ರೀಯ ಹೆದ್ದಾರಿ ಇಲಾಖೆ ಮುಂದಿಡುತ್ತಿದೆ.

ಟಾಪ್ ನ್ಯೂಸ್

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

4

Bantwal: ಬಾವಿಗೆ ಬಿದ್ದ ಮಗು; ರಕ್ಷಿಸಿದ ಯುವಕ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.