ತ.ನಾಡಿಗೆ ನೀರು ಬಿಡುಗಡೆ: ರೈತರ ಆಕ್ರೋಶ; ರಾಜ್ಯದ ರೈತರ ಕಡೆಗಣನೆ
Team Udayavani, Jul 23, 2017, 8:00 AM IST
ಎಚ್.ಡಿ.ಕೋಟೆ: ಒಂದು ವಾರದಿಂದ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಸುರಿದ ಮಳೆಗೆ ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದ್ದಂತೆಯೇ ತಮಿಳುನಾಡಿಗೆ ಸುಮಾರು 7 ಸಾವಿರ ಕ್ಯೂಸೆಕ್ ಗೂ ಹೆಚ್ಚು ನೀರನ್ನು ಬಿಡಲಾಗುತ್ತಿದೆ. ಶುಕ್ರವಾರ ಮಧ್ಯರಾತ್ರಿಯಿಂದಲೇ ಜಲಾಶಯದ ಸಮೀಪದಲ್ಲಿರುವ ಸುಭಾಷ್ ವಿದ್ಯುತ್ ಘಟಕದ ಮೂಲಕ ಮುಂಭಾಗದ ನದಿಗೆ ನೀರು ಬಿಡಲಾಗುತ್ತಿದ್ದು, ಜಲಾಶಯದಿಂದ ಹರಿದು ಹೋಗುತ್ತಿರುವ ನೀರು ತಮಿಳುನಾಡು ಸೇರುತ್ತಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದ್ದು ರಾಜ್ಯದ ಮತ್ತು ಅಚ್ಚುಕಟ್ಟು ಪ್ರದೇಶದ ರೈತರ ಹಿತ ಕಡೆಗಣಿಸಿ ಜಲಾಶಯ ಭರ್ತಿಗೊಳ್ಳುವ ಮುನ್ನವೇ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ರೈತರು ಕಿಡಿ ಕಾರಿದ್ದಾರೆ.
ಜಲಾಶಯದಿಂದ ಹೊರ ಬಿಡಲಾಗುತ್ತಿರುವ ನೀರನ್ನು ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮೂಲಕ ಹರಿಸಿದ್ದರೆ ರೈತರ ಹೊಲ ಗದ್ದೆಗಳಿಗೆ ನೀರು ಪೂರೈಸುವುದರ ಜತೆಗೆ ಕೆರೆ ಕಟ್ಟೆಗಳು ತುಂಬಿ ಅಲ್ಲಿಂದ ಹರಿದ ನೀರು ನದಿ ಸೇರುತ್ತದೆ. ಆ ನೀರು ಕೂಡ ತಮಿಳುನಾಡನ್ನೇ ಸೇರುತ್ತದೆ. ಆದರೆ, ಕಬಿನಿ ಜಲಾಶಯದ ಅಧಿಕಾರಿಗಳು ಈ ಕುರಿತು ಗಮನ ಹರಿಸಿಲ್ಲ ಎಂಬುದು ರೈತರ ಆಕ್ರೋಶ. ಈ ಮಧ್ಯೆ, ನೀರು ಬಿಡುಗಡೆ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಶನಿವಾರ ನಂಜನಗೂಡಿನ ಕಬಿನಿ ನೀರಾವರಿ ನಿಗಮದ ಮುಂದೆ ರೈತರು ದಿಢೀರ್ ಪ್ರತಿಭಟನೆ ನಡೆಸಿದರು. ಇದೇ ವೇಳೆ, ತಿ.ನರಸೀಪುರದಲ್ಲಿರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಸದಸ್ಯರು ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇಗುಲದ ಎದುರಿನ ಕಪಿಲಾ ನದಿಗೆ ಇಳಿದು ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ