ಪುಣ್ಯಕೋಟಿಯಲ್ಲಿದೆ ಏಡ್ಸ್‌ಗೆ ಮದ್ದು !


Team Udayavani, Jul 23, 2017, 7:00 AM IST

punya-koti.jpg

ವಾಷಿಂಗ್ಟನ್‌: ವೈದ್ಯಕೀಯ ಲೋಕದಲ್ಲಿ ಹಲವು ಉತ್ಪನ್ನಗಳಿಗೆ ಗೋಜನ್ಯ, ಪ್ರಾಣಿಜನ್ಯ ವಸ್ತುಗಳು ಬಳಕೆಯಾಗುತ್ತವೆ. ಆದರೀಗ ಮನುಷ್ಯರಿಗೆ ಮಾರಣಾಂತಿಕವಾದ, ಜಗತ್ತಿನಲ್ಲಿ ಈವರೆಗೆ ಔಷಧವೇ ಇಲ್ಲದ ಎಚ್‌ಐವಿ ಸೋಂಕಿನ ವಿರುದ್ಧ ಹೋರಾಡುವ ಶಕ್ತಿ ಗೋವಿನಲ್ಲಿದೆ ಎಂಬ ವಿಚಾರ ಬಹಿರಂಗವಾಗಿದೆ. ಪರಿಣಾಮ ಮುಂದಿನ ದಿನಗಳಲ್ಲಿ ಗೋವಿನಿಂದ ತಯಾರಾದ ಲಸಿಕೆಯನ್ನು ಎಚ್‌ಐವಿ ನಿರೋಧಕವಾಗಿ ಬಳಸಲ್ಪಡುವ ಸಾಧ್ಯತೆ ಹೆಚ್ಚಾಗಿದೆ.

ಇಂಥ ವಿನೂತನ ಸಂಶೋಧನೆಯನ್ನು ಅಮೆ ರಿಕದ ಸಂಶೋಧಕರ ತಂಡ ಮಾಡಿದ್ದು, “ನೇಚರ್‌’ ಹೆಸರಿನ ನಿಯತಕಾಲಿಕೆಯಲ್ಲಿ ಸಂಶೋಧನೆಯ ವಿವರಗಳನ್ನು ನೀಡಿದೆ. ಸಂಶೋಧನೆ ಪ್ರಕಾರ, ಗೋವಿನಿಂದ ಎಚ್‌ಐವಿಗಳನ್ನು ತಡೆಯುವ ಪ್ರತಿಜೀವಿಗಳನ್ನು ಕೆಲವು ವಾರಗಳಲ್ಲಿ ತಯಾರು ಮಾಡಬಹುದು.

ಗೋವುಗಳಲ್ಲಿರುವ ಬ್ಯಾಕ್ಟೀರಿಯಾ ಪೂರಿತ ಜೀರ್ಣಾಂಗ ವ್ಯವಸ್ಥೆ ಅತ್ಯಂತ ಸಂಕೀರ್ಣ ವಾಗಿದ್ದು, ಹೊಟ್ಟೆಯಲ್ಲಿನ ಬಹು
ಹಂತದ ವ್ಯವಸ್ಥೆ, ಹುಲ್ಲುಗಳನ್ನು ಜೀರ್ಣಗೊಳಿಸಲು ಸಹಾಯ ಮಾಡುತ್ತವೆ. ಇದಕ್ಕೆ ತಕ್ಕುದಾದ ಭಾರೀ ಪ್ರಮಾಣದ ಬ್ಯಾಕ್ಟೀರಿಯಾ ವ್ಯವಸ್ಥೆ ಅವು ಗಳಲ್ಲಿದೆ. ಆದ್ದರಿಂದ ಅವುಗಳಲ್ಲಿ ಸಹಜವಾಗಿ ರೋಗನಿರೋಧಕ ಶಕ್ತಿಯೂ ಹೆಚ್ಚು. ಜತೆಗೆ ಪ್ರತಿಜೀವಿ (ಆ್ಯಂಟಿಬಾಡಿ)ಗಳು ಅತಿ ವೇಗದಲ್ಲಿ ಗೋವುಗಳಲ್ಲಿ ಉತ್ಪತ್ತಿಯಾಗುತ್ತವೆ. ಇದೇ ರೀತಿ ಮಾನವನಲ್ಲಾದರೆ ಪ್ರಾಕೃತಿಕವಾಗಿ ಎಚ್‌ಐವಿ ವಿರುದ್ಧದ ಪ್ರತಿಜೀವಿಗಳು (ಬಿಎನ್‌ಎಬಿಎಸ್‌) ಬೆಳವಣಿಗೆ ಹೊಂದುವ ಪ್ರಮಾಣ ಶೇ. 10ರಿಂದ 20ರಷ್ಟು ಮಾತ್ರವಾಗಿದೆ. ಇಷ್ಟು ಬೆಳವಣಿಗೆ ಯಾಗಲು 2 ವರ್ಷ ಬೇಕಾಗಿದ್ದು, ಅದಾಗಲೇ ಎಚ್‌ಐವಿ ವೈರಸ್‌ ರೂಪಾಂತರಗೊಂಡು ದೇಹ ವನ್ನು ಜರ್ಝರಿತಗೊಳಿಸಿರುತ್ತದೆ.

ಆದರೆ, ಸಂಶೋಧನೆ ಪ್ರಕಾರ, ಎಚ್‌ಐವಿ ವಿರುದ್ಧ ಕೆಲವೇ ವಾರಗಳಲ್ಲಿ ಗೋವುಗಳಲ್ಲಿ ಬಿಎನ್‌ಎಬಿಎಸ್‌ಗಳು ಸೃಷ್ಟಿಯಾಗಿವೆ. ನಾಲ್ಕು ಹಸುಗಳ ಮೇಲೆ ಇಂತಹ ಪ್ರಯೋಗ ಮಾಡಲಾಗಿದ್ದು, ಧನಾತ್ಮಕ ಫ‌ಲಿತಾಂಶಗಳು ಗೋಚರವಾಗಿವೆ. 

ಎಚ್‌ಐವಿ ಗೋವುಗಳ ಮೇಲೆ ಪರಿ ಣಾಮ ಬೀರುವುದಿಲ್ಲ ಮತ್ತು ಸದ್ಯದ ಪರಿಸ್ಥಿತಿಯಲ್ಲಿ ಗೋವಿನ ಪ್ರತಿಜೀವಕ ಗಳನ್ನೇ ಔಷಧವನ್ನಾಗಿ ಮಾನವನಿಗೆ ನೀಡಲು ಸಾಧ್ಯವಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಅವುಗಳನ್ನು ಪೂರಕ ವಾಗಿ ಬಳಸಿ ಮಾನವರಿಗೆ ಬೇಕಾದ ಸುಧಾರಿತ ಎಚ್‌ಐವಿ ವಿರೋಧಿ ಲಸಿಕೆ ಕಂಡುಹಿಡಿಯುವುದು ವಿಜ್ಞಾನಿಗಳ ಲೆಕ್ಕಾಚಾರವಾಗಿದೆ. ಈ ಬಗ್ಗೆ ಇನ್ನೂ ವ್ಯಾಪಕವಾದ ಸಂಶೋಧನೆಗಳು ನಡೆಯಬೇಕಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಎಚ್‌ಐವಿ ವಿರುದ್ಧ ಹೋರಾಟ ಹೇಗೆ ?
ಮಾನವನಲ್ಲಿ ಎಚ್‌ಐವಿ ಬಳಿಕ ಪ್ರತಿಜೀವಿಗಳು ಸೃಷ್ಟಿಯಾಗುತ್ತಾವಾದರೂ, ಅವುಗಳ ಉತ್ಪಾದನೆ ನಿಧಾನವಾಗಿರುತ್ತದೆ ಮತ್ತು ಪ್ರಬಲವಾಗಿರುವುದಿಲ್ಲ. ವಿರೋಧಿ ಪ್ರತಿಜೀವಿಗಳ ಬೆಳವಣಿಗೆಗೆ ಸುಮಾರು 2 ವರ್ಷ ತಗಲುತ್ತವೆ. ಆದರೆ ಮಾನವ ದೇಹ ಆಗ ಎಚ್‌ಐವಿನಿಂದಾಗಿ ತೀರಾ ಘಾಸಿಗೊಂಡಿರುತ್ತವೆ. ಆದರೆ ಗೋವು ಗಳಲ್ಲಿ 30-45 ದಿನಗಳಲ್ಲಿ ಪ್ರತಿಜೀವಿಗಳು ಉತ್ಪತ್ತಿಯಾಗಿ ಎಚ್‌ಐವಿ ನಿರೋಧಕವಾಗಿ ಕೆಲಸ ಮಾಡುವುದನ್ನು ಪತ್ತೆ ಹಚ್ಚಲಾಗಿದೆ.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.