“ಮುಂದಿನ ಚುನಾವಣೆಗೆ ಹಣ ಮಾಡಲು ಕೆರೆಗಳ ಡಿನೋಟಿಫೈ’


Team Udayavani, Jul 23, 2017, 11:37 AM IST

mys5.jpg

ಮೈಸೂರು: ರಾಜ್ಯ ಸರ್ಕಾರ ಮುಂದಿನ ಚುನಾವಣೆಗೆ ಮಾಡುವ ಉದ್ದೇಶದಿಂದ ಕೆರೆಗಳನ್ನು ಡಿನೋಟಿಫೈ ಮಾಡಿ ರಿಯಲ್‌ ಎಸ್ಟೇಟ್‌ನವರಿಗೆ ಮಾರಾಟ ಮಾಡಲು ಮುಂದಾಗಿದೆ ಎಂದು ಮಾಜಿ ಸಂಸದ ಎಚ್‌.ವಿಶ್ವನಾಥ್‌ ದೂರಿದರು.

ಕೆರೆಗಳಲ್ಲಿ ನೀರಿಲ್ಲ ಎಂಬ ಕಾರಣವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಕೆರೆಗಳನ್ನು ಡಿನೋಟಿಫಿಕೇಷನ್‌ ಮಾಡುತ್ತಿದ್ದು, ಅದರಂತೆ ಬೆಂಗಳೂರಿನ 195 ಕೆರೆಗಳು ಸೇರಿದಂತೆ , ರಾಜ್ಯದ 1300 ಕೆರೆಗಳನ್ನು ಡಿನೋಟಿಪೈ ಮಾಡಲು ಮುಂದಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಸರ್ಕಾರದ ಈ ತೀರ್ಮಾನ ನಿಜಕ್ಕೂ ಆಘತಕಾರಿ ಸಂಗತಿ.

ರಾಜ್ಯದಲ್ಲಿ ಈವರೆಗೂ ಅಧಿಕಾರ ನಡೆಸಿರುವ ಯಾವ ಸರ್ಕಾರಗಳೂ ಕೆರೆಗಳನ್ನು ನಿರ್ಮಿಸಿಲ್ಲ. ಎಲ್ಲಾ ಕೆರೆಗಳನ್ನು ರಾಜರ ಕಾಲದಲ್ಲಿ ನಿರ್ಮಿಸಲಾಗಿದೆ. ಇನ್ನೂ ಒಂದೆಡೆ ಕೆರೆಗಳ ಸಂರಕ್ಷಣೆಗೆ ಕೋಟ್ಯಂತರ ರೂ.ವ್ಯಯ ಮಾಡುವ ಸರ್ಕಾರ ಮತ್ತೂಂದೆಡೆ ಕೆರೆಗಳನ್ನು ಡಿನೋಟಿಫೈç ಮಾಡುತ್ತಿರುವುದು ಮೂರ್ಖತನದ ನಿರ್ಧಾರ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಹಣ ಮಾಡುವ ಹುನ್ನಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ 10 ಕೋಟಿ ರೂ. ಕೊಡುವುದಾಗಿ ಹೇಳಿದ್ದಾರೆ. ಹೀಗಾಗಿ ರಾಜ್ಯದ ಕೆರೆಗಳನ್ನು ಡಿನೋಟಿಫೈ ಮಾಡಿ, ರಿಯಲ್‌ ಎಸ್ಟೇಟ್‌ನವರಿಗೆ ಮಾರಾಟ ಮಾಡಿ ಹಣ ಸಂಗ್ರಹಣೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಹೀಗಿದ್ದರೂ ಮುಂದಿನ ಚುನಾವಣೆಯಲ್ಲಿ ಅವರು ಗೆಲ್ಲುವುದಿಲ್ಲ. ಆದ್ದರಿಂದ ಕೆರೆಗಳನ್ನು ಡಿನೋಟಿಫೈ ಮಾಡುವ ಸರ್ಕಾರದ ತೀರ್ಮಾನ ಜನರ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಕೆರೆಗಳ ಸಂರಕ್ಷಣೆಗೆ ಜೆಡಿಎಸ್‌ ಬದ್ಧವಾಗಿದ್ದು, ಪರಿಸರ ವಾದಿಗಳು ಸಹ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಬೇಕಿದೆ. ಇಲ್ಲವಾದಲ್ಲಿ ಇದು ಮತ್ತೂಂದು ಅರ್ಕಾವತಿ ಆಗಲಿದೆ ಎಂದರು.

ಅನವಶ್ಯಕ ಚರ್ಚೆಗಳು: ರಾಜ್ಯದಲ್ಲಿ ಕೆರೆಗಳನ್ನು ಡಿನೋಟಿಫೈ ಮಾಡಲು ಮುಂದಾಗಿರುವ ಸರ್ಕಾರ ತನ್ನ ಆಡಳಿತ ವೈಫ‌‌ಲ್ಯ, ದುರುದ್ದೇಶಗಳನ್ನು ಜನರ ಮನಸ್ಸಿನಿಂದ ದೂರ ಮಾಡಲು ಇಲ್ಲದ ವಿಷಯಗಳ ಕುರಿತು ಚರ್ಚೆ ಆರಂಭಿಸಿದೆ. ಒಂದೆಡೆ ಕನ್ನಡ ಧ್ವಜ ಬದಲಾವಣೆ ಚರ್ಚೆಯಾದರೆ, ಮತ್ತೂಂದೆಡೆ ಲಿಂಗಾಯಿತ ಮತ್ತು ವೀರಶೈವ ಧರ್ಮದ ವಿಷಯ ಪ್ರಸ್ತಾಪಿಸಿ ಬೆಂಕಿ ಹಚ್ಚಿದ್ದಾರೆ.

ಆದರೆ, ವೀರಶೈವ ಹಾಗೂ ಲಿಂಗಾಯಿತ ಧರ್ಮಗಳು ಒಂದೇ ಎಂಬುದಾಗಿ ಅಖೀಲ ಭಾರತ ವೀರಶೈವ ಮಹಾಸಭಾ ಸಂಸ್ಥಾಪಕ ಹಾನಗಲ್‌ ಕುಮಾರಸ್ವಾಮಿ ಅವರು 1904ರಲ್ಲೇ ಹೇಳಿದ್ದಾರೆ. ಇನ್ನೂ ಕನ್ನಡ ಧ್ವಜ ಬದಲಾವಣೆ ಮಾಡುವ ಬಗ್ಗೆ ಯಾರೋಬ್ಬರೂ ಒತ್ತಾಯಿಸಿರಲಿಲ್ಲ. ಹೀಗಿದ್ದರೂ ಕನ್ನಡ ಧ್ವಜದ ವಿಷಯವನ್ನು ಅನಾವಶ್ಯಕವಾಗಿ ಚರ್ಚೆಗೆ ತರಲಾಗುತ್ತಿದ್ದು, ಇದು ಸಹ ಚುನಾವಣಾ ಗಿಮಿಕ್‌ ಆಗಿದೆ ಎಂದು ಕಿಡಿಕಾರಿದರು.

ಸಾಹಿತಿಗಳಿಗೆ ಅವಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಸಂದಿ ಪಾಠ ಮಾಡಿದ್ದರೂ ಅವರಿಗೆ ಏಕವಚನ-ಬಹುವಚನವೇ ಸರಿಯಾಗಿ ತಿಳಿದಿಲ್ಲ. ಇತ್ತೀಚೆಗೆ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರು ಮನವಿ ನೀಡಲು ಬಂದ ಸಂದರ್ಭದಲ್ಲಿ ಕುಳಿತುಕೊಂಡೇ ಮನವಿ ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಸಾಹಿತಿಗಳಿಗೆ ಅವಮಾನ ಮಾಡಿದ್ದಾರೆ.

ಇದು ಮುಖ್ಯಮಂತ್ರಿಗಳ ದುರಹಂಕಾರದ ಸಂಸ್ಕೃತಿಯಾಗಿದ್ದು, ಇವರು ಕನ್ನಡ ಧ್ವಜದ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್‌ ನಗರಾಧ್ಯಕ್ಷ ಹರೀಶ್‌ಗೌಡ, ಮುಖಂಡರಾದ ರೇವಣ್ಣ, ಸೋಮಸುಂದರ್‌ ಇತರರು ಹಾಜರಿದ್ದರು.

ತಹಶೀಲ್ದಾರ್‌ ಡೆತ್‌ನೋಟ್‌ ಬಹಿರಂಗಪಡಿಸಿ: ಮೈಸೂರು ಜಿಲ್ಲೆ ತಿ.ನರಸೀಪುರದ ತಹಶೀಲ್ದಾರ್‌ ಶಂಕರಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಬರೆದಿರುವ ಡೆತ್‌ನೋಟ್‌ ಬಹಿರಂಗಪಡಿಸುವಂತೆ ಎಚ್‌.ವಿಶ್ವನಾಥ್‌ ಆಗ್ರಹಿಸಿದರು. ಶಂಕರಯ್ಯ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿರುವ ಡೆತ್‌ನೋಟ್‌ 2 ಪುಟಗಳಿದ್ದು, ಇದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಆದರೆ ಶಂಕರಯ್ಯ ಅವರ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ಡೆತ್‌ನೋಟ್‌ ಬಹಿರಂಗಪಡಿಸುವ ಮೂಲಕ ಅದರಲ್ಲಿ ಯಾರ ಹೆಸರಿದೆ ಎಂಬುದನ್ನು ತಿಳಿಸಬೇಕಿದೆ. ಡೆತ್‌ನೋಟ್‌ ಬಹಿರಂಗಪಡಿಸದಂತೆ ಎಸ್ಪಿ$ಅವರಿಗೆ ಯಾರಿಂದಾದರೂ ಒತ್ತಡವಿದೆಯೇ ಎಂದು ವಿಶ್ವನಾಥ್‌ ಪ್ರಶ್ನಿಸಿದರು. 

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.