ಇಲ್ಲಿ  ಹೊಂಡಗಳದ್ದೇ ಕಾರುಬಾರು.!?


Team Udayavani, Jul 24, 2017, 8:55 AM IST

karu-baru.jpg

ಮಹಾನಗರ: ನಗರದ ಪ್ರಮುಖ ರಸ್ತೆಗಳಲ್ಲೊಂದಾದ ಕಂಕನಾಡಿ- ಪಂಪ್‌ವೆಲ್‌ ಬೈಪಾಸ್‌ ರಸ್ತೆಯು ಪೂರ್ತಿ ಹೊಂಡ ಗುಂಡಿಗಳಿಂದ ಕೂಡಿದ್ದು, ಸಂಚಾರ ದುಸ್ತರವೆನಿಸಿದೆ. ರಸ್ತೆಯಲ್ಲಿ ಬಹುತೇಕ ಅಪಾಯಕಾರಿ ಹೊಂಡಗಳೇ ಸೃಷ್ಟಿಯಾಗಿರುವುದರಿಂದ ಅಪಘಾತದ ಭೀತಿಯೂ ಎದುರಾಗಿದೆ. 

ಈ ರಸ್ತೆಯಲ್ಲಿ ನಿತ್ಯ ನೂರಾರು ಬಸ್‌ಗಳ ಜತೆಗೆ ಸಾವಿರಾರು ವಾಹನಗಳು ಓಡಾ ಡುತ್ತವೆ. ಕಾಸರಗೋಡು, ಬಿ.ಸಿ. ರೋಡ್‌, ದೇರಳಕಟ್ಟೆ ಭಾಗಗಳಿಗೆ ತೆರಳುವ ಬಸ್ಸುಗಳು ಇದೇ ರಸ್ತೆಯಲ್ಲಿ ಸಾಗುತ್ತಿರುವುದರಿಂದ ದಿನದ ಬಹುತೇಕ ಹೊತ್ತು ವಾಹನಗಳ ಒತ್ತಡ ಹೆಚ್ಚಿರುತ್ತದೆ. ಪ್ರಸ್ತುತ ಹೊಂಡಗಳು ಸೃಷ್ಟಿ ಯಾಗಿ ಸುಗಮ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. 

ಮಳೆಗಾಲದ ಆರಂಭದಲ್ಲೇ ಹೊಂಡಗಳು ಸೃಷ್ಟಿ ಯಾಗಿದ್ದವು. ಪ್ರಸ್ತುತ ದಿನೇ ದಿನೇ ಹೊಂಡಗಳ ಗಾತ್ರ ದೊಡ್ಡದಾಗುತ್ತಿದ್ದು, ಅಪಾಯ ಕಾರಿಯಾಗಿ ಮಾರ್ಪಟ್ಟಿದೆ. ಮಳೆಗಾಲ ಆರಂಭವಾಗುವ ಮುಂಚೆಯೇ ರಸ್ತೆಗಳಿಗೆ ಸೂಕ್ತ ಕಾಯಕಲ್ಪ ಮಾಡಿದರೆ ಈ ರೀತಿಯ ಸಮಸ್ಯೆಗಳು ಉಂಟಾಗುತ್ತಿರಲಿಲ್ಲ. ಪ್ರಸ್ತುತ ವಾಹನಗಳು ಎದ್ದು ಬಿದ್ದು ಸಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. 

ದುರಸ್ತಿಯಾಗದ ಹೊಂಡ
ನಗರದ ಬೆಂದೂರುವೆಲ್‌ ಭಾಗದಿಂದ ಕಂಕನಾಡಿ ಜಂಕ್ಷನ್‌ಗೆ ತೆರಳುವಲ್ಲಿ ಬೃಹತ್‌ ಹೊಂಡವೊಂದು ಸೃಷ್ಟಿಯಾಗಿದೆ. ಬೆಂದೂರುವೆಲ್‌ನಿಂದ ವೆಲೆನ್ಸಿಯಾ, ಮಂಗಳಾದೇವಿ ಭಾಗಕ್ಕೆ ಹೋಗುವವರು ನೇರವಾಗಿ ಕಂಕನಾಡಿ ಜಂಕ್ಷನ್‌ನ ಸಿಗ್ನಲ್‌ ದಾಟಿ ಹೋಗಬೇಕಿದೆ. ಆದರೆ ಪಂಪ್‌ವೆಲ್‌ ಭಾಗಕ್ಕೆ ಹೋಗುವವರಿಗೆ ಫ್ರಿಲೆಫ್ಟ್‌ ಮೂಲಕ ಹೋಗಲು ಅನುಕೂಲವಾಗುವಂತೆ ಬ್ಯಾರಿಕೇಡ್‌ ಇಡಲಾಗಿದೆ. ಅದೇ ರಸ್ತೆಯಲ್ಲಿ ಹೊಂಡಗಳ ಸೃಷ್ಟಿಯಾಗಿ ವಾಹನಗಳು ಎಡಕ್ಕೆ ಹೋಗುವ ಬದಲು ಬಲಭಾಗದಿಂದಲೇ ಸಾಗುತ್ತಿವೆ. ಹೀಗಾಗಿ ಟ್ರಾಫಿಕ್‌ ಜಾಮ್‌ ಕೂಡ ಸಂಭವಿಸುತ್ತದೆ. ಬಸ್‌ಗಳು ಹೊಂಡಕ್ಕೆ ಬಿದ್ದು ಚಲಿಸಿದರೂ, ಸಣ್ಣ ವಾಹನಗಳು ಬಲಭಾಗದಿಂದಲೇ ಹೋಗುತ್ತದೆ. 

ಪ್ರತಿವರ್ಷವೂ ಹೀಗೆ
ಕಂಕನಾಡಿ-ಪಂಪ್‌ವೆಲ್‌ ರಸ್ತೆ ಪ್ರತಿ ವರ್ಷವೂ ಹೀಗೆ ಇರುತ್ತದೆ. ನಗರದ ಡಾಮರು ರಸ್ತೆಗಳು ಪದೇ ಪದೇ ಹದಗೆಡುತ್ತಿರುವುದರಿಂದ ಇಲ್ಲಿನ ರಸ್ತೆಗಳನ್ನು ಕಾಂಕ್ರೀಟ್‌ ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಆದರೆ ನಗರದ ಪ್ರಮುಖ ಪ್ರದೇಶವಾಗಿರುವ ಕಂಕನಾಡಿಯಲ್ಲಿ ಇನ್ನೂ ಡಾಮರು ರಸ್ತೆಯೇ ಇರುವುದರಿಂದ ಈ ರೀತಿಯ ತೊಂದರೆ ಉಂಟಾಗುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಾರೆ. 

ಇದು ಇಳಿಜಾರು ರಸ್ತೆಯಾಗಿದ್ದು ಸಮರ್ಪಕ ಚರಂಡಿ ವ್ಯವಸ್ಥೆಯೂ ಇಲ್ಲ. ಇರುವ ಚರಂಡಿಗೆ ಒಂದು ಭಾಗದಲ್ಲಿ ಗುಡ್ಡ ಜರಿದು ಹಾನಿಯಾಗಿದೆ. ಅದನ್ನು ದುರಸ್ತಿ ಪಡಿಸದೇ ಇರುವುದರಿಂದ ಮಳೆನೀರು ರಸ್ತೆಯಲ್ಲೇ ಹರಿಯುತ್ತಿದೆ. ರಸ್ತೆಯನ್ನು ಅಗೆದು ಡ್ರೈನೇಜ್‌ನ ಮ್ಯಾನ್‌ಹೋಲ್‌ ನಿರ್ಮಿಸಿದ್ದು, ಪ್ರಸ್ತುತ ಮ್ಯಾನ್‌ಹೋಲ್‌ನ ಸುತ್ತ ಹೊಂಡಗಳು ಸೃಷ್ಟಿಯಾಗಿವೆ. 

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.