ಬೆಳ್ಮಣ್ಣು: ಆಮ್ನಿಯಲ್ಲಿ ಮದ್ಯ, ಬಿಯರ್ ಸಾಗಾಟ ಪತ್ತೆ, ಬಂಧನ
Team Udayavani, Jul 24, 2017, 7:20 AM IST
ಉಡುಪಿ: ಮಾರಾಟ ಮಾಡುವ ಸಲುವಾಗಿ ಮಾರುತಿ ಆಮ್ನಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಹಾಗೂ ಬಿಯರ್ ಅನ್ನು ಸಾಗಿಸುತ್ತಿದ್ದುದನ್ನು ಅಬಕಾರಿ ಇಲಾಖೆ ಪೊಲೀಸರು ಪತ್ತೆ ಮಾಡಿದ್ದು, ಸೊತ್ತುಗಳನ್ನು ವಶಕ್ಕೆ ಪಡೆದು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಜು. 22ರ ಮುಂಜಾನೆ ಕಾರ್ಕಳ ತಾಲೂಕಿನ ಬೆಳ್ಮಣ್ಣು ಗ್ರಾಮದಲ್ಲಿ ಹೋಗುತ್ತಿದ್ದ ಮಾರುತಿ ಆಮ್ನಿಯನ್ನು ಅಬಕಾರಿ ಪೊಲೀಸರು ಪರಿಶೀಲಿಸಿದಾಗ ಅದರಲ್ಲಿ 77.760 ಲೀ. ಮದ್ಯ ಹಾಗೂ 125.040 ಲೀ. ಬಿಯರ್ ಅನ್ನು ಸಾಗಿಸುತ್ತಿದ್ದುದು ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ. ಕಾರು ಸಹಿತ ವಶಕ್ಕೆ ಪಡೆದ ಮಾಲುಗಳ ಮೌಲ್ಯ 3,28,000 ರೂ. ಅಂದಾಜಿಸಲಾಗಿದೆ. ಕಾರ್ಕಳ ತಾಲೂಕಿನ ಗ್ರೀಷ್ಮ (24) ಮತ್ತು ಸುಕೇಶ (28) ಬಂಧಿತ ಆರೋಪಿಗಳು.
ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತೆ ಶೈಲಜಾ ಕೋಟೆ ಅವರ ನಿರ್ದೇಶನದಂತೆ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತೆ ರೂಪಾ ಎಂ. ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆಯಲ್ಲಿ ಅಬಕಾರಿ ಉಪನಿರೀಕ್ಷಕ ನಿತ್ಯಾನಂದ, ಸಿಬಂದಿ ಮುನಾಫ್ ಸಾಹೇಬ್, ಶಾಂತಪ್ಪ ಏಳಗಿ, ಗೃಹರಕ್ಷಕ ಗಣೇಶ್, ಹಿರಿಯ ವಾಹನ ಚಾಲಕ ವೆಂಕಟರಮಣ ಗೊಲ್ಲ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ