ವಿಧಾನಸಭೆಗೆ ಘಟಬಂಧನ್‌ ಬೇಡ


Team Udayavani, Jul 24, 2017, 11:43 AM IST

vidhanasabhe.jpg

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಗೆ ರಾಷ್ಟ್ರೀಯ ಮಟ್ಟದಲ್ಲಿ ಜಾತ್ಯತೀತ ಪಕ್ಷಗಳು ಒಂದಾಗುವ ಅಗತ್ಯತೆ ಇದೆ. ಆದರೆ, ಕರ್ನಾಟಕ ವಿಧಾನಸಭಾ ಚುನಾವಣೆಗೆ ಇದು ಅನ್ವಯಿಸುವುದಿಲ್ಲ. ಏಕೆಂದರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ಬಲಿಷ್ಠವಾಗಿದ್ದು, ಸ್ಪಷ್ಟ ಬಹುಮತ ಪಡೆಯಲಿದೆ ಎಂದು ರಾಜ್ಯಸಭಾ ಸದಸ್ಯ ಜೈರಾಮ್‌ ರಮೇಶ್‌ ಹೇಳಿದರು.

ನಗರದ ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾನುವಾರ ವಿಚಾರ ಮಂಡಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾ ಘಟಬಂಧನ್‌ ಐತಿಹಾಸಿಕ ಮತ್ತು ರಾಜಕೀಯ ಅಗತ್ಯ. ಮಮತಾ ಬ್ಯಾನರ್ಜಿ ಅವರು ಈಗಾಗಲೇ ಮಹಾ ಘಟಬಂಧನ್‌ಗೆ ಕರೆ ನೀಡಿದ್ದಾರೆ. ಬಿಹಾರದಲ್ಲಿ ಜಾರಿಯಲ್ಲಿದೆ. 2019ರ ಚುನಾವಣೆಗೆ ರಾಷ್ಟ್ರೀಯ ಮಟ್ಟದಲ್ಲಿ ಜಾತ್ಯತೀತ ಶಕ್ತಿ ಒಂದಾಗುವ ಅಗತ್ಯವಿದೆ ಎಂದರು.

ಆದರೆ, ಕರ್ನಾಟಕದಲ್ಲಿ ಸಮರ್ಥವಾದ ಮುಖ್ಯಮಂತ್ರಿ ಜತೆಗೆ ಕೆಪಿಸಿಸಿಗೆ ಫ‌ುಲ್‌ಟೈಮ್‌ ಅಧ್ಯಕ್ಷರಿದ್ದಾರೆ ಹಾಗೂ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ವೇಣುಗೋಪಾಲ್‌ ಚುರುಕಿನಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. 2018ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಹೀಗಾಗಿ ಕರ್ನಾಟಕದಲ್ಲಿ ಮಹಾ ಘಟಬಂಧನ್‌ ಅಗತ್ಯವಿಲ್ಲ. ಆದರೆ, ಬೇರೆ ರಾಜ್ಯದಲ್ಲಿ ಅಲ್ಲಿನ ಪರಿಸ್ಥಿತಿ ನೋಡಿ ಹೊಂದಾಣಿಕೆ ಮಾಡಿಕೊಳ್ಳಲಿದ್ದೇವೆ ಎಂದರು.

ಗಾಂಧೀಜಿ ಅವರನ್ನು ಹೈಜಾಕ್‌ ಮಾಡಿದಂತೆ ಇಂದು ಆರ್‌ಎಸ್‌ಎಸ್‌ ಮತ್ತು ಮೋದಿಯವರು ಅಂಬೇಡ್ಕರ್‌ ಅವರನ್ನು ಹೈಜಾಕ್‌ ಮಾಡುತ್ತಿದ್ದಾರೆ. ಸಂಸತ್‌ನಲ್ಲಿ ಚರ್ಚೆಗೆ ಅವಕಾಶವೇ ನೀಡುತ್ತಿಲ್ಲ. ಒಟ್ಟಿನಲ್ಲಿ ಕೇಂದ್ರ ಸರ್ಕಾರ ಬೂಟಾಟಿಕೆಯ ರಾಜಕಾರಣ ನಡೆಸುತ್ತಿದೆ. ಸಂವಿಧಾನದ ಬಗ್ಗೆ ಅವರಿಗೆ ನಂಬಿಕೆಯಿಲ್ಲ.

ಸಂವಿಧಾನಿಕ ಸಂಸ್ಥೆಯನ್ನು ನಿಧಾನವಾಗಿ ನಿರ್ನಾಮ ಮಾಡಲು ಹೊರಟ್ಟಿದ್ದಾರೆ. ಮೋದಿ ಸರ್ಕಾರ ಕಳೆದ ಮೂರು ವರ್ಷದಲ್ಲಿ ತಂದಿರುವ ಎಲ್ಲಾ ಮಸೂದೆಯೂ ಹಣಕ್ಕೆ ಪ್ರೇರಣೆ ನಿಡುವಂತದ್ದಾಗಿದೆ ಎಂದು ಟೀಕಿಸಿದರು. ಇದೇ ವೇಳೆ ನಾಡಧ್ವಜಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. 

ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಭಾರತರತ್ನ, ಪದ್ಮ ಭೂಷಣ, ಪದ್ಮ ವಿಭೂಷಣ ಇತ್ಯಾದಿ ಪ್ರಶಸ್ತಿ ನೀಡುವ ಅಗತ್ಯವಿಲ್ಲ. ನಾನು ಒಂದು ದಿನದ ಮಟ್ಟಿಗೆ ಪ್ರಧಾನಿಯಾದರೆ ಇದನ್ನೆಲ್ಲ ರದ್ದು ಮಾಡುತ್ತೇನೆ. ಸಂಗೀತ ವಿದ್ವಾಂಸರಿಗೆ, ಕ್ರೀಡಾಪಟುಗಳಿಗೆ, ಸಾಮಾಜಿಕ ಹೋರಾಟಗಾರರಿಗೆ ಈ ಪ್ರಶಸ್ತಿ ಕೊಟ್ಟರೆ ಓಕೆ. ಆದರೆ ರಾಜಕಾರಣಿಗಳಿಗೆ ಏಕೆ ?
-ಜೈರಾಮ್‌ ರಮೇಶ್‌, ರಾಜ್ಯಸಭಾ ಸದಸ್ಯ

ಸಾಮಾಜಿಕ-ಆರ್ಥಿಕ ಅಸಮಾನತೆಯ ಸ್ವರೂಪ ಬದಲು 
ಬೆಂಗಳೂರು:
ದೇಶದ ಮೂಲಭೂತ ಸಮಸ್ಯೆಯಾಗಿರುವ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಈಗಲೂ ಮುಂದುವರಿದಿದ್ದು, ಸ್ವರೂಪ ಬದಲಾಗಿದೆ ಎಂದು ರಾಜ್ಯಸಭಾ ಸದಸ್ಯ ಜೈರಾಮ್‌ ರಮೇಶ್‌ ಹೇಳಿದರು. ಡಾ.ಬಿ.ಆರ್‌.ಅಂಬೇಡ್ಕರ್‌ ಅಂತಾರಾಷ್ಟ್ರೀಯ ಸಮ್ಮೇಳನದ ವಿಚಾರ ಗೋಷ್ಠಿಯಲ್ಲಿ ಮಾತನಾಡಿದರು.

ಭಾರತವು ವಿಶ್ವದಲ್ಲೆಡೆ ಪ್ರಾಮುಖ್ಯತೆ ಪಡೆಯುತ್ತಿದೆ. ಆದರೆ, ನಮ್ಮ ಮೂಲಭೂತ ಸಮಸ್ಯೆಯಾದ ಸಾಮಾಜಿಕ ಹಾಗೂ ಆರ್ಥಿಕ ಅಸಮಾನತೆ ಇಂದಿಗೂ ಕಡಿಮೆಯಾಗಿಲ್ಲ. ಬದಲಾಗಿ ರಾಜಕೀಯ ರೂಪದಲ್ಲಿ ಕ್ರೋಡೀಕರಣಗೊಳ್ಳುತ್ತಿದೆ ಎಂದು ತಿಳಿಸಿದರು. ಸಾಮಾಕ ಹೋರಾಟಗಾರರಾದ ಅರುಣ್‌ ರಾಯ್‌ ಹಾಗೂ ಕೆವಿನ್‌ ಬ್ರೌನ್‌ ವಿಚಾರ ಮಂಡಿಸಿದರು. ಕಲ್ಪನಾ ಕನ್ನಂಬಿರನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.