ಸ್ಯಾನಿಟರಿ ನ್ಯಾಪ್‌ಕಿನ್‌ಗೆ ಜಿಎಸ್‌ಟಿ ಬೇಡ


Team Udayavani, Jul 25, 2017, 11:18 AM IST

tara-napkin.jpg

ಬೆಂಗಳೂರು: ಕೇಂದ್ರ ಸರ್ಕಾರ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮೇಲೆ ವಿಧಿಸಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ರದ್ದುಗೊಳಿಸಬೇಕು ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯೆ ತಾರಾ ಅನುರಾಧಾ ಒತ್ತಾಯಿಸಿದ್ದಾರೆ.

ಸೋಮವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಅಯೋಧ್‌ ಸೇವಾ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಬಡತನ ರೇಖೆಗಿಂತ ಕೆಳಗಿನ ಮಹಿಳೆಯರಿಗೆ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಣೆ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಋತುಮತಿ ಮಹಿಳೆಯರ ಅತ್ಯಗತ್ಯ ವಸ್ತುಗಳಲ್ಲಿ ಒಂದಾಗಿರುವ ಸ್ಯಾನಿಟರಿ ನ್ಯಾಪ್‌ಕಿನ್‌ಗಳಿಗೆ ಜಿಎಸ್‌ಟಿ ವಿಧಿಸಿರುವುದು ಸರಿಯಲ್ಲ. ಅದನ್ನು ತೆರಿಗೆ ವ್ಯಾಪ್ತಿಯಿಂದ ಹೊರಗಿಡುವಂತೆ ಜಿಎಸ್‌ಟಿ ಕೌನ್ಸಿಲ್‌ಗೆ ವೈಯಕ್ತಿಕವಾಗಿ ಪತ್ರ ಬರೆಯಲಾಗಿದೆ. ಈ ತಿಂಗಳಲ್ಲಿ ನಡೆಯುವ ಜಿಎಸ್‌ಟಿ ಕೌನ್ಸಿಲ್‌ನ ಸಭೆಯಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮೇಲೆ ತೆರಿಗೆ ವಿನಾಯಿತಿ ನಿರ್ಧಾರ ತೆಗೆದುಕೊಳ್ಳವ ವಿಶ್ವಾಸವಿದೆ ಎಂದು ತಿಳಿಸಿದರು.

ಜಿಎಸ್‌ಟಿ ಜಾರಿಗೊಳಿಸುವ ಮುನ್ನ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಮೇಲೆ ವಿವಿಧ ಹಂತಗಳಲ್ಲಿ ಶೇ.18ರಷ್ಟು ತೆರಿಗೆ ವಿಧಿಸಲಾಗಿತ್ತು. ಇದು ಯಾರ ಗಮನಕ್ಕೂ ಬಂದಿರಲಿಲ್ಲ. ಈಗ ಏಕರೂಪ ತೆರಿಗೆ (ಜಿಎಸ್‌ಟಿ) ಬಂದ ಮೇಲೆ ಶೇ.12ರಷ್ಟು ತೆರಿಗೆ ವಿಧಿಸಿರುವುದು ಜನರ ಗಮನಕ್ಕೆ ಬಂದಿದೆ. ಹೀಗಾಗಿ ತೆರಿಗೆಯಿಂದ ವಿನಾಯಿತಿ ನೀಡುವಂತೆ ಕೋರಲಾಗಿದೆ ಎಂದರು.

ಸುರಕ್ಷತೆ ಅಗತ್ಯ: ದೇಶದಲ್ಲಿ ಕೇವಲ ಶೇ.12ರಷ್ಟು ಮಹಿಳೆಯರು ಮಾತ್ರ ಋತುಮತಿಯರಾದಾಗ ಸ್ಯಾನಿಟರಿ ಪ್ಯಾಡ್‌ಗಳನ್ನು ಖರೀದಿಸಿ ಬಳಸುತ್ತಿದ್ದಾರೆ. ಉಳಿದಂತೆ ಅನೇಕರು ಇಂದಿಗೂ ಸಾಂಪ್ರದಾಯಿಕ ಅವೈಜ್ಞಾನಿಕ ಪದ್ಧತಿಗಳನ್ನೇ ಅನುಸರಿಸುತ್ತಿರುವುದು ಬೇಸರದ ಸಂಗತಿ. ಆರೋಗ್ಯ ದೃಷ್ಟಿಯಿಂದ ಋತುಸ್ರಾವದ ಆ ಮೂರು ದಿನ ಸುರಕ್ಷತೆ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಉಚಿತ ವಿತರಣೆ: ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ಪ್ರವೀಣ್‌ ನಾಯಕ್‌ ಮಾತನಾಡಿ, ನಗರದ ಶಾಂತಿನಗರ ಮತ್ತು ಗಂಗಾವತಿ ತಾಲೂಕಿನ ಬಸವನದುರ್ಗ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯಡಿ 2020ರ ವೇಳೆಗೆ ಐದು ದಶಲಕ್ಷ ಮಹಿಳೆಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಿಸುವ ಗುರಿಯಿದೆ ಇದೆ.

ಇದರೊಂದಿಗೆ ಮುಟ್ಟಿನ ಸಮಯದಲ್ಲಿ ಶಾಲೆಗಳಲ್ಲಿ ಯುವತಿಯರ ಹಾಜರಾತಿ ಹೆಚ್ಚಿಸುವ ಮತ್ತು ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವುದು ಯೋಜನೆಯ ಮುಖ್ಯ ಗುರಿ. ಯೋಜನೆಗೆ ತಗುಲುವ ವೆಚ್ಚವನ್ನು ಸರಿದೂಗಿಸಲು ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಮತ್ತು ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ನಿರ್ಧರಿಸಲಾಗಿದೆ ಎಂದರು.

ಕಾರ್ಯಾಚಾರಣೆಯ ಮುಖ್ಯಸ್ಥೆ ಪೂನಂ ಮಾತನಾಡಿ,ರಾಜ್ಯಾದ್ಯಂತ ಬಿಪಿಎಲ್‌ ಕಾರ್ಡ್‌ ಹೊಂದಿರುವ ಮಹಿಳೆಯರಿಗೆ ಉಚಿತವಾಗಿ ನ್ಯಾಪ್‌ಕಿನ್‌ಗಳನ್ನು ವಿತರಿಸಲು ಆನ್‌ಲೈನ್‌ ವ್ಯವಸ್ಥೆಯನ್ನು ಶೀಘ್ರವೇ ಅಳವಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕೆಲವು ಮಹಿಳೆಯರಿಗೆ ಸಾಂಕೇತಿಕವಾಗಿ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ವಿತರಿಸಲಾಯಿತು. ಸಮಾರಂಭದಲ್ಲಿ  ಟ್ರಸ್ಟಿ ರಾಮಕೃಷ್ಣ ನಾಯಕ್‌, ರಂಗಕರ್ಮಿ ಕೃಷ್ಣಮೂರ್ತಿ ಕವತ್ತಾರ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.