ಅಧಿಕಾರಿಗಳಿಗಾಗಿ ವಿಶ್ವ ಕೂಟದಿಂದ ಅಥ್ಲೀಟ್ಸ್‌ಗಳ ಕೈಬಿಟ್ಟ ಎಎಫ್ಐ?


Team Udayavani, Jul 27, 2017, 8:15 AM IST

World-Athletics-Championshi.jpg

ನವದೆಹಲಿ: ಮುಂದಿನ ತಿಂಗಳು ಲಂಡನ್‌ನಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ ಶಿಪ್‌ಗೆ ಅರ್ಹತೆ ಪಡೆದಿದ್ದ ಭಾರತದ ಮೂವರು ಅಥ್ಲೀಟ್‌ಗಳು ಅನರ್ಹರಾಗಿದ್ದಾರೆ!

ಸ್ಟೀಪಲ್‌ಚೆಸ್‌ ಸ್ಪರ್ಧಿ ಸುಧಾ ಸಿಂಗ್‌, 1500 ಮೀ. ಓಟಗಾರ್ತಿ ಪಿ.ಯು.ಚಿತ್ರಾ ಹಾಗೂ ಪುರುಷರ 1500 ಮೀ. ಓಟಗಾರ ಅಜಯ್‌ ಕುಮಾರ್‌ ಸರೋಜ್‌ ಅನರ್ಹಗೊಂಡವರು.

ಇದಕ್ಕಿದ್ದಂತೆ ಭಾರತೀಯ ಅಥ್ಲೆಟಿಕ್ಸ್‌ ಒಕ್ಕೂಟ (ಎಎಫ್ಐ) ಇಂತಹದೊಂದು ಹೇಳಿಕೆ ನೀಡಿರುವು ದು ಭಾರೀ ವಿವಾದಕ್ಕೆ ಕಾರಣವಾಗಿದೆ.ಭುವನೇಶ್ವರದಲ್ಲಿ ನಡೆದ ಏಷ್ಯನ್‌ ಅಥ್ಲೆಟಿಕ್ಸ್‌ ಕೂಟದಲ್ಲಿ ಈ ಮೂವರು ಸ್ಪರ್ಧಿಗಳು ತಲಾ ಚಿನ್ನದ ಪದಕ ಗೆದ್ದು ವಿಶ್ವ ಕೂಟಕ್ಕೆ ಅರ್ಹತೆ ಪಡೆದಿದ್ದರು. ಸದ್ಯ ಇವರು ವಿಶ್ವ ಚಾಂಪಿಯನ್‌ ಶಿಪ್‌ಅರ್ಹತಾ ಸಮಯ ದಲ್ಲಿ ಓಡಿಲ್ಲ ಎನ್ನುವ ಕಾರಣಕ್ಕೆ ಇವರಿಗೆ ಅವಕಾಶ ನಿರಾಕರಿಸಲಾಗಿದೆ.

ಎಎಫ್ಐನಿಂದ ಒಟ್ಟಾರೆ 24 ಮಂದಿ ಅಥ್ಲೀಟ್‌ ಗಳ ತಂಡ ಪ್ರಕಟಿಸಲಾಗಿದೆ. ಜತೆಗೆ ತಂಡದ ಜತೆಗೆ ಹೋಗುವ ಕೆಲ ಪ್ರಭಾವಿ ಅಧಿಕಾರಿಗಳು ಕೂಡ ಹೋಗುತ್ತಿದ್ದಾರೆ. ಇಂತಿಷ್ಟು ಜನರಿಗೆ ಅವಕಾಶ ಎನ್ನುವ ನಿಯಮವಿದೆ. ಹೀಗಾಗಿ
ಮೂವರು ಅಥ್ಲೀಟ್‌ಗಳನ್ನು ಕೈಬಿಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಈ ಬಗ್ಗೆ ಸುಧಾ ಸಿಂಗ್‌ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೂಬ್ಬ ಅಥ್ಲೀಟ್‌ ಕೇರಳದ ಪಿ.ಯು.ಚಿತ್ರಾ ಕೋಟ್‌ ಮರೆಹೋಗಲು ತೀರ್ಮಾನಿಸಿದ್ದಾರೆ.

ಎಎಫ್ಐ ಹೇಳುವುದೇನು?: ವಿಶ್ವಚಾಂಪಿ ಯನ್‌ ಶಿಪ್‌ನಲ್ಲಿ ಪಾಲ್ಗೊಳ್ಳಲು ಇರುವ ಅರ್ಹತಾ ಸಮಯದಲ್ಲಿ ಅಥ್ಲೀಟ್‌ಗಳು ಗುರಿಮುಟ್ಟಿಲ್ಲ. ಹೀಗಾಗಿ ಅವಕಾಶ ನೀಡಿಲ್ಲ. ಸುಧಾಸಿಂಗ್‌ 9 ನಿಮಿಷ, 59.47 ಸೆಕೆಂಡ್‌ಗೆ ಗುರಿ ಮುಟ್ಟಿ ಚಿನ್ನ ಗೆದ್ದಿದ್ದಾರೆ. ಆದರೆ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತಾ ಸಮಯ 9 ನಿಮಿಷ,42 ಸೆಕೆಂಡ್‌ ಆಗಿದೆ. ಅದೇ ರೀತಿ ಯಾಗಿ ಚಿತ್ರಾ ಮತ್ತು ಅಜಯ್‌ ಕೂಡ ನಿಗದಿತ ಸಮಯದಲ್ಲಿ ಗುರಿ ಮುಟ್ಟಿಲ್ಲ ಎಂದು ಎಎಫ್ಐ ತಿಳಿಸಿದೆ.

ಅಥ್ಲೀಟ್‌ಗಳು ಹೇಳುವುದೇನು?
ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನಗೆದ್ದ ವರಿಗೆ ವಿಶ್ವ ಚಾಂಪಿಯನ್‌ಶಿಪ್‌ಗೆ ನೇರ ಅರ್ಹತೆ ನೀಡಲಾಗುತ್ತದೆ. ಜಿ.ಲಕ್ಷ್ಮಣನ್‌ ಸೇರಿದಂತೆ ಆಯ್ಕೆಯಾಗಿರುವ ಕೆಲವು ಅಥ್ಲೀಟ್‌ಗಳು ವಿಶ್ವಚಾಂಪಿಯನ್‌ಶಿಪ್‌ನ ಅರ್ಹತಾ ಸಮಯವನ್ನು ರೀಚ್‌ ಆಗಿಲ್ಲ. ಆದರೂ ಅವಕಾಶ ನೀಡಿಲ್ಲವೇ? ಎಂದು ಪ್ರಶ್ನಿಸಿದ್ದಾರೆ .

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.