ಕುತೂಹಲ ಕೆರಳಿಸಿದ ದೋವಲ್‌ ಭೇಟಿ ಬಗೆಹರಿಯುವುದೇ ಬಿಕ್ಕಟು?


Team Udayavani, Jul 27, 2017, 7:43 AM IST

27-ankan-3.jpg

ಚೀನದ ಸರಕಾರಿ ಮಾಧ್ಯಮಗಳೇ ಯುದ್ದೋನ್ಮಾದದ ಮಾತುಗಳನಾಡುತ್ತಾ ಆ ದೇಶದ ವಿದೇಶಾಂಗ ನೀತಿಯನ್ನು
ನಿರ್ಧರಿಸಿತೊಡಗಿವೆ. ಆದರೆ ಭಾರತ ಈ ವಿಚಾರದಲ್ಲಿ ಅದ್ಭುತವಾದ ಸಂಯಮವನ್ನು ತೋರಿಸಿದೆ.

ದೇಶದ ಭದ್ರತಾ ಸಲಹೆಗಾರ ವಿದೇಶ ಪ್ರಯಾಣ ಕೈಗೊಳ್ಳುವುದು ಸಾಮಾನ್ಯ ಸನ್ನಿವೇಶದಲ್ಲಾದರೆ ಅಂತಹ ಪ್ರಮುಖ ವಿಚಾರವೇನೂ ಅಲ್ಲ. ಆದರೆ ದೋಕ್ಲಾಮ್‌ ಬಿಕ್ಕಟ್ಟಿನಿಂದಾಗಿ ಭಾರತ ಮತ್ತು ಚೀನ ನಡುವೆ ಪ್ರಸ್ತುತ ಏರ್ಪಟ್ಟಿರುವ ಪ್ರಕ್ಷುಬ್ಧ ಪರಿಸ್ಥಿತಿಯ ನಡುವೆಯೇ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಬ್ರಿಕ್ಸ್‌ ದೇಶಗಳ ಭದ್ರತಾ ಸಲಹೆಗಾರರ ಶೃಂಗದಲ್ಲಿ ಭಾಗವಹಿಸುವ ಸಲುವಾಗಿ ಬೀಜಿಂಗ್‌ಗೆ ಹೊರಟಿರುವುದು ಇಡೀ ಜಗತ್ತಿನ ಗಮನ ಸೆಳೆದ ವಿದ್ಯಮಾನವಾಗಿದೆ. ಗುರುವಾರ ಮತ್ತು ಶುಕ್ರವಾರ ದೋವಲ್‌ ಬೀಜಿಂಗ್‌ನಲ್ಲಿರುತ್ತಾರೆ. ದೋವಲ್‌ ಭೇಟಿಯಿಂದ ಉಭಯ ದೇಶಗಳ ನಡುವಿನ ಪ್ರಕ್ಷುಬ್ಧತೆ ನಿವಾರಣೆಯಾಗುವ ಯಾವುದಾದರೂ ಬೆಳವಣಿಗೆ ನಡೆದೀತೆ ಎನ್ನುವ ನಿರೀಕ್ಷೆ ಈ ಕುತೂಹಲಕ್ಕೆ ಕಾರಣ. ಚೀನ, ಭಾರತ ಮತ್ತು ಭೂತಾನ್‌ ಸೇರುವ ಸಿಕ್ಕಿಂ ರಾಜ್ಯದ ದೋಕ್ಲಾಮ್‌ ತ್ರಿಜಂಕ್ಷನ್‌ನಲ್ಲಿ ಭಾರತ ಮತ್ತು ಚೀನಿ ಸೇನೆ ಮುಖಾಮುಖೀಯಾಗಿ ಒಂದೂವರೆ ತಿಂಗಳಾಗಿದೆ. ಈ ಹಿನ್ನಲೆಯಲ್ಲಿ ದೋವಲ್‌ ಭೇಟಿಗೆ ಭಾರತ ಮಾತ್ರವಲ್ಲ, ಚೀನದಲ್ಲೂ ಸಕಾರಾತ್ಮಕ ಅಭಿಪ್ರಾಯ ವ್ಯಕ್ತವಾಗಿರುವುದು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ.

ಗಡಿ ಪ್ರಕ್ಷುಬ್ಧಗೊಂಡ ಬಳಿಕ ಚೀನ ಸರಕಾರದ ಅಧೀನದಲ್ಲಿರುವ ವಿವಿಧ ಮಾಧ್ಯಮಗಳು ನಿರಂತರವಾಗಿ
ಭಾರತವನ್ನು ಕೆರಳಿಸುವ ಕೆಲಸ ಮಾಡುತ್ತಿವೆ. ಒಂದು ಪತ್ರಿಕೆ 1962ರ ಸೋಲನ್ನು ನೆನಪಿಸಿದಾಗ ವಿತ್ತ ಸಚಿವ ಅರುಣ್‌ ಜೈಟ್ಲೀ ಇದಕ್ಕೆ ತಕ್ಕ  ತಿರುಗೇಟು ನೀಡಿದರು. ಅನಂತರ ಚೀನದ ಮಾಧ್ಯಮ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಸಂಸತ್ತಿಗೆ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿತು. ಒಂದು ಮಾಧ್ಯಮವಂತೂ ಮೋದಿ ಪ್ರಧಾನಿಯಾದ ಬಳಿಕ ಹುಟ್ಟಿಕೊಂಡ ಹಿಂದು ರಾಷ್ಟ್ರೀಯವಾದವೇ ಎಲ್ಲ ಸಮಸ್ಯೆಗಳಿಗೆ ಮೂಲ ಎಂದು, ವಿವಾದಕ್ಕೆ ಭಾರತದ ರಾಜಕೀಯ ಒಡಕಿನ ಆಯಾಮ ನೀಡುವ ಪ್ರಯತ್ನ ಮಾಡಿತು. ತನ್ನ ಸೇನಾ ಬಲದ ಕುರಿತು ಚೀನ ಹೇಳಿಕೊಂಡಿರುವ ಉತ್ಪ್ರೇಕ್ಷಿತ ಮಾತುಗಳಿಗೆ ಲೆಕ್ಕವಿಲ್ಲ. ಪರ್ವತವನ್ನಾದರೂ ಕದಲಿಸಬಹುದು, ನಮ್ಮ ಸೇನೆಯ ಕೂದಲು ಕೊಂಕಿಸಲು ಸಾಧ್ಯವಿಲ್ಲ ಎಂದು ಸರಕಾರದ ಪರವಾಗಿ ಇನ್ನೊಂದು ಪತ್ರಿಕೆ ತುತ್ತೂರಿ ಊದಿತು. ಇದರ ಬೆನ್ನಿಗೆ ಮತ್ತೂಂದು ಪತ್ರಿಕೆಯಲ್ಲಿ ಚೀನದ ವಿರುದ್ಧ ಯುದ್ಧ ಮಾಡಿ ಗೆಲ್ಲುವ ಹುಸಿ ಭ್ರಮೆಯಲ್ಲಿ ಭಾರತವಿದೆ ಎಂಬ ವ್ಯಂಗ್ಯ ಲೇಖನ ಪ್ರಕಟವಾಯಿತು. ಹೀಗೆ ಚೀನದ ಸರಕಾರಿ ಮಾಧ್ಯಮಗಳೇ ಯುದ್ದೋನ್ಮಾದದ ಮಾತುಗಳನಾಡುತ್ತಾ ಆ ದೇಶದ ವಿದೇಶಾಂಗ ನೀತಿಯನ್ನು ನಿರ್ಧರಿಸಿತೊಡಗಿವೆ. ಆದರೆ ಭಾರತ ಈ ವಿಚಾರದಲ್ಲಿ ಅದ್ಭುತವಾದ ಸಂಯಮವನ್ನು ತೋರಿಸಿದೆ. ಚೀನದ ಪ್ರಚೋದನೆಗಳಿಗೆ ಅಗತ್ಯವಿರುವಾಗ ಅಗತ್ಯವಿರುವಷ್ಟು ಮಾತ್ರ ಪ್ರತಿಕ್ರಿಯಿಸಿ ಉಳಿದಂತೆ ದಿವ್ಯ ನಿರ್ಲಕ್ಷ್ಯ ತೋರಿಸುವ ಮೂಲಕ ಗೊಡ್ಡು ಬೆದರಿಕೆಗಳಿಗೆ ಸೊಪ್ಪು ಹಾಕುವುದಿಲ್ಲ ಎಂದು ಸೂಚಿಸಿದೆ. 

ಭಾರತದ ಮಾಧ್ಯಮಗಳು ಕೂಡ ಈ ವಿಚಾರದಲ್ಲಿ ಅತಿರೇಕವಾಗುವಷ್ಟು ವರದಿಗಳನ್ನು ಪ್ರಕಟಿಸಿಲ್ಲ ಎನ್ನುವುದು ಗಮನಾರ್ಹ ವಿಚಾರ. ಭಾರತವೇ ದೋಕ್ಲಾಮ್‌ನಲ್ಲಿ ಗಡಿ ದಾಟಿ ಅತಿಕ್ರಮಣ ಮಾಡಿದೆ, ದ್ವಿಪಕ್ಷೀಯ ಮಾತುಕತೆಯೇನಿದ್ದರೂ ಸೇನೆಯನ್ನು ವಾಪಸು ಕರೆಸಿಕೊಂಡ ಬಳಿಕ ಎನ್ನುವುದು ಚೀನದ ಸ್ಪಷ್ಟ ನಿಲುವು. ದೋಕ್ಲಾಮ್‌ನಿಂದ ಸೇನೆ ಹಿಂದೆಗೆಯುವುದೆಂದರೆ ಚೀನಕ್ಕೆ ರಸ್ತೆ ನಿರ್ಮಿಸಲು ಅವಕಾಶ ಮಾಡಿ ಕೊಡುವುದು. ವ್ಯೂಹಾತ್ಮಕವಾಗಿ ಅತ್ಯಂತ ಮುಖ್ಯವಾಗಿರುವ ಈ ಭೂಭಾಗದಲ್ಲಿ ಚೀನ ರಸ್ತೆ ನಿರ್ಮಿಸಿದರೆ ದೇಶದ ಭದ್ರತೆಗೆ ಅಪಾಯ ಕಟ್ಟಿಟ್ಟ ಬುತ್ತಿ. ಇದರಲ್ಲಿ ಭಾರತ ಮಾತ್ರವಲ್ಲದೆ ಭೂತಾನ್‌ನ ಹಿತಾಸಕ್ತಿಯೂ ಅಡಗಿದೆ. ಹೀಗಾಗಿ ಯಾವ ಕಾರಣಕ್ಕೂ ರಸ್ತೆ ನಿರ್ಮಿಸಲು ಬಿಡುವುದಿಲ್ಲ ಎನ್ನುವುದು ಭಾರತದ ಬಿಗಿಪಟ್ಟು. 

ಇಂತಹ ಕಗ್ಗಂಟಿನ ಸ್ಥಿತಿಯಲ್ಲಿ ದೋವಲ್‌ ಚೀನಕ್ಕೆ ಹೋಗುತ್ತಿದ್ದಾರೆ. ಎರಡೂ ದೇಶಗಳು ಮಣಿಯಲು ತಯಾರಿಲ್ಲದ ಕಾರಣ ಯಾವ ರೀತಿ ದೋವಲ್‌ ವಿವಾದವನ್ನು ಬಗೆಹರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕು. ಅಂತೆಯೇ ದೋವಲ್‌ ಭೇಟಿ ಸೆಪ್ಟೆಂಬರ್‌ನಲ್ಲಿ ಬೀಜಿಂಗ್‌ ನಲ್ಲಿ ನಡೆಯಲಿರುವ ಬ್ರಿಕ್ಸ್‌ ಸಮಾವೇಶದಲ್ಲಿ ಮೋದಿ ಭಾಗವಹಿಸುವ ಸಾಧ್ಯತೆಯನ್ನೂ ನಿರ್ಧರಿಸಲಿದೆ. 

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.