ಜಾತಿ ಒಡೆಯುವ ರಾಜಕಾರಣ ಸಲ್ಲ


Team Udayavani, Jul 27, 2017, 1:35 PM IST

27-BLR-3.jpg

ಬಳ್ಳಾರಿ: ಕೋಮುವಾದ ಮತ್ತು ಪ್ರತ್ಯೇಕ ಧರ್ಮದ ಹೆಸರಿನಡಿ ಪ್ರಬಲ ಜಾತಿ ಸಮುದಾಯದ ಉಪಜಾತಿಗಳ
ನಡುವೆ ಬಿರುಕು ಮೂಡಿಸಲು ಬಿಜೆಪಿ ಮತ್ತು ಕಾಂಗ್ರೆಸ್‌ ನೇತೃತ್ವದ ಸರ್ಕಾರಗಳು ಹುನ್ನಾರ ನಡೆಸಿವೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

ನಗರದ ಡಾ| ರಾಜಕುಮಾರ್‌ ರಸ್ತೆಯಲ್ಲಿರುವ ರಾಘವ ಕಲಾ ಮಂದಿರದಲ್ಲಿ ಬುಧವಾರ ಜೆಡಿಎಸ್‌ ಜಿಲ್ಲಾ ಯುವ
ಘಟಕ ಏರ್ಪಡಿಸಿದ್ದ ಈ ಬಾರಿ ಕುಮಾರಣ್ಣ ಸರ್ಕಾರ ಎಂಬ ಘೋಷವಾಕ್ಯದಡಿ ಜಿಲ್ಲಾ ಮಟ್ಟದ ಯುವ ಸಮಾವೇಶ
ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ಸರ್ಕಾರಗಳಿಂದ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಹೀಗಾಗಿ, ಈ ಎರಡೂ ಸರ್ಕಾರಗಳನ್ನು ಬುಡ ಸಮೇತ ಕಿತ್ತೆಸೆಯಬೇಕು. ಅನಗತ್ಯ ಕೋಮು ಗಲಭೆ ಸೃಷ್ಟಿಸಿ, ಜಾತಿ ರಾಜಕಾರಣದ ಹೆಸರಿನಡಿ ಸಮಾಜಕ್ಕೆ ಬೆಂಕಿ ಹಚ್ಚುವ ಕಾರ್ಯಕ್ಕೆ ಆ ಎರಡೂ ಪಕ್ಷಗಳು ನಾಂದಿ ಹಾಡಿವೆ. ಅವುಗಳಿಗೆ ನಾವೆಲ್ಲರೂ ಸೇರಿಕೊಂಡು ಕೊನೆ ಹಾಡಬೇಕಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗು ಹಿಡಿದಾದರೂ ಮೊದಲೇ ಅವರು ಸಹಕಾರಿ ಸಂಘಗಳಲ್ಲಿನ ರೈತರ 50,000 ರೂ.ಗಳವರೆಗಿನ ಸಾಲ ಮನ್ನಾ ಮಾಡಿದ್ದಾರೆ. ಯಡಿಯೂರಪ್ಪನವರಿಗೆ ರಾಜ್ಯದ ರೈತರ ಕುರಿತು ಸ್ವಲ್ಪವಾದರೂ ಕಾಳಜಿ ಇದ್ದರೆ, ಪ್ರಧಾನಿ ನರೇಂದ್ರ ಅವರ
ಬಳಿ ಬಿಜೆಪಿ ಸಂಸದರ ನಿಯೋಗ ಕೊಂಡೊಯ್ದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ
ಮಾಡುವಂತೆ ಆಗ್ರಹಿಸಿದರು.  

ಕಾವೇರಿ, ಮಹಾದಾಯಿ ಹಾಗೂ ಕಳಸಾ ಬಂಡೂರಿ ನಾಲೆಯ ವಿವಾದ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಚಲ ನಿಲುವು ತಾಳುತ್ತಿಲ್ಲ. ಕರ್ನಾಟಕದ ಗಡಿ, ನೆಲ, ಜಲ ಸಂರಕ್ಷಣೆ ಕುರಿತು ದೃಢವಾದ ನಿರ್ಧಾರ ತೆಗೆದುಕೊಳ್ಳಲು ಎದೆಗಾರಿಕೆ ಬೇಕು. ಆ ಎದೆಗಾರಿಕೆ ಈ ಸರ್ಕಾರಗಳಲ್ಲಿಲ್ಲ. ಆದ ಕಾರಣ ಪ್ರತಿಬಾರಿ ಜಲ ವಿವಾದಗಳಲ್ಲಿ ಕರ್ನಾಟಕ ಪಾಲುದಾರ ರಾಜ್ಯಗಳಿಗೆ ತಲೆ ಬಾಗುತ್ತಿದೆ. ಇಂತಹ ಧೈರ್ಯವಿಲ್ಲದ ಸರ್ಕಾರಗಳ ಆಡಳಿತ ನಮಗೆ ಬೇಕಾ? ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು. ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಆಡಳಿತದ ಕಾರ್ಯ ವೈಖರಿಯನ್ನು ರಾಜ್ಯದ ಮತದಾರರು ಸೂಕ್ಷ್ಮವಾಗಿ ಗಮನಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷದ ಪರ್ವ ಆರಂಭವಾಗಲಿದೆ ಎಂದರು.

ಕಾರ್ಯಾಧ್ಯಕ್ಷ ಚಂದ್ರಶೇಖರ, ಜಿಲ್ಲಾ ಘಟಕದ ಅಧ್ಯಕ್ಷ ವೈ.ಗೋಪಾಲ, ಜಿಲ್ಲಾ ಕೋರ್‌ ಕಮಿಟಿ ಸದಸ್ಯರಾದ ಹೇಮಯ್ಯ, ಕೊಟ್ರೇಶ, ಲಕ್ಷ್ಮೀಕಾಂತರೆಡ್ಡಿ, ಪಿ.ಎಸ್‌. ಸೋಮಲಿಂಗನಗೌಡ, ಮೀನಳ್ಳಿ ತಾಯಣ್ಣ, ಮುಖಂಡರಾದ ಕುಡಿತಿನಿ ಶ್ರೀನಿವಾಸ, ಶಿವಶಂಕರ, ಎಚ್‌.ಎಂ.ಕಿರಣಕುಮಾರ, ರಫಿಕ್‌, ಕರ್ಚಿಗನೂರು ಯಲ್ಲನಗೌಡ, ವಿಜಯ ಕುಮಾರಿ,
ವೈ.ಗೌಸಿಯಾ ಬೀ, ಶರಭಯ್ಯ, ಪ್ರಶಾಂತ, ಕುಮಾರ, ಯಲ್ಲನಗೌಡ, ಬಂಡೇಗೌಡ, ಕಪ್ಪಗಲ್ಲು ರಸೂಲ್‌ಸಾಬ್‌,
ವೀರೇಶ, ಹೊನ್ನೂರಸ್ವಾಮಿ, ಪ್ರವೀಣಕುಮಾರ್‌, ಚಾಂದ್‌ ಬಾಷಾ, ಓಂಪ್ರಕಾಶಗೌಡ, ವಸಂತಕುಮಾರ, ಕಾರಪ್ಪ,
ವೆಂಕಣ್ಣ, ನಾಗಪ್ಪ ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.

ಕಾವೇರಿ, ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲೆಯ ವಿವಾದ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಚಲ ನಿಲುವು ತಾಳುತ್ತಿಲ್ಲ. ಕರ್ನಾಟಕದ ಗಡಿ, ನೆಲ, ಜಲ ಸಂರಕ್ಷಣೆ  ಕುರಿತು ದೃಢವಾದ ನಿರ್ಧಾರ ತೆಗೆದುಕೊಳ್ಳಲು ಎದೆಗಾರಿಕೆ ಬೇಕು. 

ಮಧು ಬಂಗಾರಪ್ಪ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.