ಹಾಲನ್ನು ಹುತ್ತಕ್ಕೆ ಸುರಿಯದೆ ಮಕ್ಕಳಿಗೆ ನೀಡಿ
Team Udayavani, Jul 27, 2017, 3:24 PM IST
ಕಲಬುರಗಿ: ಹಾಲು ಸಂಪೂರ್ಣ ಆಹಾರ. ಅನೇಕ ಪೌಷ್ಟಿಕ ಗುಣ ಹೊಂದಿದೆ. ಮೂಢನಂಬಿಕೆ, ಅವೈಜ್ಞಾನಿಕತೆ ಪರಿಣಾಮವಾಗಿ ಹಾಲನ್ನು ನಾಗರಪಂಚಮಿ ದಿನದಂದು ಹುತ್ತಕ್ಕೆ, ಇಲ್ಲವೇ ಕಲ್ಲಿನ ನಾಗರಕ್ಕೆ ಸುರಿದು ನೆಲದ ಪಾಲು ಮಾಡುತ್ತಿರುವುದನ್ನು ನಿಲ್ಲಿಸಿ ಎಂದು ಸಾರಂಗಮಠದ ಜಗದ್ಗುರು ಪೂಜ್ಯ ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ನುಡಿದರು.
ಬಸವ ಪಂಚಮಿ ಅಂಗವಾಗಿ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ನಗರದ ಅಂಧಮಕ್ಕಳ ಸರ್ಕಾರಿ ಶಾಲಾ ಆವರಣದಲ್ಲಿ ಮಕ್ಕಳಿಗೆ ಹಾಲು, ಹಣ್ಣು ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ವಚನಗಳಲ್ಲಿ ಅಡಗಿರುವ ವೈಚಾರಿಕತೆಯನ್ನು ನಿಜಜೀವನದಲ್ಲಿ ಅಳವಡಿಸಿಕೊಂಡು ಮನೆ ಹಾಗೂ ಮನಗಳನ್ನು ಶುದ್ದಗೊಳಿಸಬೇಕೆಂದು ಹೇಳಿದರು.
ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಚವದಾಪೂರ ಹಿರೇಮಠದ ಪೂಜ್ಯ ರಾಜಶೇಖರ ಶಿವಾಚಾರ್ಯ ಮಹಾಸ್ವಾಮೀಜಿ, ಹಾಗರಗುಂಡಗಿ ಶ್ರೀಮಠದ ಪೂಜ್ಯ ಶಿವಾನಂದ ಸ್ವಾಮೀಜಿ, ಫಿರೋಜಾಬಾದ ಶ್ರೀಗಳು, ಮೇಯರ್ ಶರಣಕುಮಾರ ಮೋದಿ, ಜಿ.ಪಂ. ಉಪಾಧ್ಯಕ್ಷೆ ಶೋಭಾ ಸಿರಸಗಿ, ಪಾಲಿಕೆ ಪ್ರತಿಪಕ್ಷ ನಾಯಕ ಆರ್.ಎಸ್.ಪಾಟೀಲ, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ಚವ್ಹಾಣ, ಆನಂದ ಪಾಟೀಲ ಜವಳಿ, ಕಲ್ಯಾಣಪ್ಪ ಪಾಟೀಲ ಮಳಖೇಡ, ಮಲ್ಲಣ್ಣ ನಾಗರಾಳ, ಶರಣಪ್ಪ ನಿರಗುಡಿ, ನಾಟಕ ನಿರ್ದೇಶಕ ಬಿ.ಸಂದೀಪ,
ಪರಮೇಶ್ವರ ಶೆಟಕಾರ, ಡಾ| ಬಾಬುರಾವ್ ಶೇರಿಕಾರ, ಶ್ರೀಕಾಂತ ಪಾಟೀಲ ತಿಳಗೂಳ, ಡಾ| ನಾಗರತ್ನಾ ದೇಶಮಾನೆ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ