ಆ. 15ರೊಳಗೆ ಅನಿಲಭಾಗ್ಯಕ್ಕೆ ಚಾಲನೆ: ಖಾದರ್‌


Team Udayavani, Jul 28, 2017, 12:10 PM IST

Khadar-U-T-650.jpg

– ಮಾರ್ಗಸೂಚಿ ಪ್ರಕಟ; ಉಚಿತ ಗ್ಯಾಸ್‌ ಸಂಪರ್ಕ, ಸ್ಟವ್‌ ವಿತರಣೆ
ಮಂಗಳೂರು: ರಾಜ್ಯ ಸರಕಾರದ ವತಿಯಿಂದ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಹಾಗೂ ಸ್ಟವ್‌ ನೀಡುವ ಯೋಜನೆ ಅನಿಲ ಭಾಗ್ಯಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು ಮಾರ್ಗಸೂಚಿ ಪ್ರಕಟಿಸಲಾಗಿದೆ. ಆ. 15ರೊಳಗೆ ಮುಖ್ಯಮಂತ್ರಿಯವರು ಈ ಯೋಜನೆಗೆ ಚಾಲನೆ ನೀಡುವರು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕ ಖಾತೆ ಸಚಿವ ಯು.ಟಿ. ಖಾದರ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಪಿಎಲ್‌ ಪಡಿತರ ಚೀಟಿ ಹಾಗೂ ಅಂತ್ಯೋದಯ ಪಡಿತರ ಚೀಟಿಗಳನ್ನು ಹೊಂದಿದ್ದು ಅನಿಲ ಸಂಪರ್ಕ ಹೊಂದಿರದವರು ಮುಖ್ಯಮಂತ್ರಿಗಳ ಅನಿಲಭಾಗ್ಯ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಇವರಿಗೆ ಅಡುಗೆ ಅನಿಲ ವಿತರಕರ ಮುಖಾಂತರ ಅನಿಲ ಸಂಪರ್ಕವನ್ನು ನೀಡಿ ಅನಂತರ ಅಡುಗೆ ಅನಿಲ ವಿತರಕರಿಗೆ ಖಜಾನೆ-2 ಮೂಲಕ ನೇರವಾಗಿ ಹಣವನ್ನು ವರ್ಗಾಯಿಸಲಾಗುತ್ತದೆ ಎಂದರು.

ಅರ್ಜಿ ಪ್ರಕ್ರಿಯೆ
ಅಂತ್ಯೋದಯ ಮತ್ತು ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ 18 ವರ್ಷ ಮೇಲ್ಪಟ್ಟ ಮಹಿಳಾ ಸದಸ್ಯರು, ಒಂದು ವೇಳೆ ಮಹಿಳಾ ಸದಸ್ಯರು ಇಲ್ಲದ ಪಕ್ಷದಲ್ಲಿ 18 ವರ್ಷ ಮೇಲ್ಪಟ್ಟ ಪುರುಷ ಸದಸ್ಯರು ಸಂಬಂಧಪಟ್ಟ ಖಾಸಗಿ ಫ್ರಾಂಚೈಸಿ, ತಾಲೂಕು ಕಚೇರಿ, ಗ್ರಾ.ಪಂ., ಜನಸ್ನೇಹಿ ಕೇಂದ್ರ, ಕರ್ನಾಟಕ ವನ್‌ ಮುಂತಾದ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವಾಗ ಅರ್ಜಿದಾರರ ಕುಟುಂಬದ ಎಲ್ಲ ಸದಸ್ಯರ ಆಧಾರ್‌ ಸಂಖ್ಯೆಯನ್ನು ಮುಖ್ಯಮಂತ್ರಿಗಳ ಅನಿಲಭಾಗ್ಯ ಯೋಜನೆಯ ತಂತ್ರಾಂಶದಲ್ಲಿ ನೋಂದಾಯಿಸಿ ತೈಲ ಕಂಪೆನಿ ವೆಬ್‌ಸೈಟ್‌ ಮುಖಾಂತರ ಎಲ್ಲ ಸದಸ್ಯರು ಅಡುಗೆ ಅನಿಲ ಸಂಪರ್ಕ ಹೊಂದದೆ ಇರುವ ಬಗ್ಗೆ ಪರಿಶೀಲಿಸಿ ಇಲಾಖೆಯಿಂದ ಪರಿಶೀಲನೆ ಮಾಡುವ ನಿಬಂಧನೆಗೊಳಪಟ್ಟು ಅರ್ಜಿದಾರರಿಗೆ ಹಿಂಬರಹ ನೀಡಲಾಗುತ್ತದೆ. ಅರ್ಜಿದಾರರು ತಮ್ಮ ಆಯ್ಕೆಯ ಅಡುಗೆ ಅನಿಲ ವಿತರಕರನ್ನು ಸಂಪರ್ಕಿಸಿ ಮಾಹಿತಿಯನ್ನು ನೀಡಬೇಕಾಗುತ್ತದೆ ಎಂದು ಸಚಿವರು ವಿವರಿಸಿದರು.

ಸಂಬಂಧಪಟ್ಟ ಅಡುಗೆ ಅನಿಲ ವಿತರಕರು ತಂತ್ರಾಂಶದ ಮುಖಾಂತರ ಅಡುಗೆ ಅನಿಲ ಸಂಪರ್ಕದ ಅರ್ಜಿಯನ್ನು ಜನರೇಟ್‌ ಮಾಡಲಾಗುತ್ತಿದೆ. ಅನಂತರ ಈ ಮಾಹಿತಿ ಸಂಬಂಧಪಟ್ಟ ಆಹಾರ ನಿರೀಕ್ಷಕರಿಗೆ ಲಾಗಿನ್‌ನಲ್ಲಿ ಲಭ್ಯವಾಗಲಿದ್ದು ಆಹಾರ ನಿರೀಕ್ಷಕರು ತೈಲ ಕಂಪೆನಿ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ ಅನುಮೋದನೆ ನೀಡುತ್ತಾರೆ. ಅನಿಲ ವಿತರಕರು ಕೆವೈಸಿ ಮುಖಾಂತರ ತಂತ್ರಾಂಶದಲ್ಲಿ ಅನಿಲ ಕಂಪೆನಿಗಳಿಗೆ ಅಪ್‌ಲೋಡ್‌ ಮಾಡಿದ ಅನಂತರ ತಂತ್ರಾಂಶವು ಅಡುಗೆ ಅನಿಲ ಸಂಪರ್ಕ ಬಿಡುಗಡೆ ಮಾಡಲು ಕನಿಷ್ಠ 3 ದಿನ ತೆಗೆದುಕೊಳ್ಳುತ್ತದೆ. ಅನಿಲ ವಿತರಕರು ಆಹಾರ ಇಲಾಖೆಯ ತಂತ್ರಾಂಶದ ಮುಖಾಂತರ ಮಾಹಿತಿಯನ್ನು ಅಪ್‌ಲೋಡ್‌ ಮಾಡಿ 7 ದಿನಗಳೊಳಗೆ ಅಡುಗೆ ಅನಿಲ ಸಂಪರ್ಕ ನೀಡಬೇಕಾಗುತ್ತದೆ. ಇದೇ ಅವಧಿಯೊಳಗೆ ಜಿಲ್ಲಾ ಆಡಳಿತವು ಫಲಾನುಭವಿಗಳಿಗೆ 2 ಬರ್ನರ್‌ಗಳ ಸ್ಟವ್‌ ನೀಡಲು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಚಿವ ಖಾದರ್‌ ವಿವರಿಸಿದರು.

ಉಸ್ತುವಾರಿ, ಮೇಲ್ವಿಚಾರಣೆ
ರಾಜ್ಯ ಮಟ್ಟದಲ್ಲಿ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಇದು ಯೋಜನೆಯ ಸಮಗ್ರ ಜಾರಿ ಬಗ್ಗೆ ಪರಿಶೀಲನೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ನಾಮನಿರ್ದೇಶಿತ ಸದಸ್ಯ ರನ್ನು ಒಳಗೊಂಡ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ರಚಿಸಲಾಗಿದೆ ಎಂದು ಖಾದರ್‌ ತಿಳಿಸಿದರು.

ಉಜ್ವಲ ಯೋಜನೆ: ನಿರ್ಲಕ್ಷ್ಯ ಸಲ್ಲದು
ಕೇಂದ್ರ ಸರಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಬಗ್ಗೆ ಜಿಲ್ಲೆಯಲ್ಲಿ ಇತ್ತೀಚೆಗೆ ಜರಗಿದ ಕಾರ್ಯಕ್ರಮವನ್ನು ಜಿಲ್ಲೆಯ ಜನಪ್ರತಿನಿಧಿಗಳನ್ನು ಬಿಟ್ಟು ನಡೆಸಲಾಗಿದೆ. ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಚಿವ ಖಾದರ್‌ ಅವರು, ಈ ಬಗ್ಗೆ ಈಗಾಗಲೇ ಯೋಜನೆಯ ರಾಜ್ಯ ಸಂಯೋಜಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.

ಅನಿಲಭಾಗ್ಯ ಸಂಪೂರ್ಣ ಉಚಿತ
ಸರಕಾರದ ವತಿಯಿಂದ ಮುಖ್ಯಮಂತ್ರಿಗಳ ಅನಿಲಭಾಗ್ಯ ಯೋಜನೆಯ ಫಲಾನುಭವಿಗಳಿಗೆ 1,940 ರೂ. ಮೌಲ್ಯದ ಉಚಿತ ಅಡುಗೆ ಅನಿಲ ಸಂಪರ್ಕದೊಂದಿಗೆ 999 ರೂ. ಮೌಲ್ಯದ 2 ಬರ್ನರ್‌ ಗ್ಯಾಸ್‌ಸ್ಟವ್‌ ಕೂಡ ಉಚಿತವಾಗಿ ನೀಡಲಾಗುತ್ತಿದೆ. ಗ್ಯಾಸ್‌ಸ್ಟವ್‌ ಮುಖ್ಯಮಂತ್ರಿಗಳ ಭಾವಚಿತ್ರ ಸಹಿತ ಅನಿಲಭಾಗ್ಯ ಯೋಜನೆಯ ಲಾಂಛನವನ್ನು ಹೊಂದಿರುತ್ತದೆ. ಅರ್ಜಿದಾರರು 20 ರೂ. ನೀಡಿ ಅರ್ಜಿ ನೋಂದಾಯಿಸಬೇಕಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ಯಾಸ್‌ ಸಂಪರ್ಕ ರಹಿತ 71,000 ಕುಟುಂಬಗಳನ್ನು ಗುರುತಿಸಲಾಗಿದೆ. ರಾಜ್ಯದಲ್ಲಿ 35,44,479 ಕುಟುಂಬಗಳಿವೆ. ಕೇಂದ್ರ ಸರಕಾರದ ಉಜ್ವಲ ಯೋಜನೆಯಲ್ಲಿ ಅಡುಗೆ ಅನಿಲ ಸಂಪರ್ಕ ಮಾತ್ರ ಉಚಿತವಾಗಿರುತ್ತದೆ. ಗ್ಯಾಸ್‌ಸ್ಟವ್‌ ನೀಡಿ ಅದರ ಮೊತ್ತವನ್ನು ಗ್ಯಾಸ್‌ ಸಬ್ಸಿಡಿಯಲ್ಲಿ ಪ್ರತಿ ತಿಂಗಳು ಕಡಿತ ಮಾಡಲಾಗುತ್ತದೆ. ಆದರೆ ಅನಿಲಭಾಗ್ಯ ಯೋಜನೆಯಲ್ಲಿ ಎಲ್ಲವೂ ಸಂಪೂರ್ಣ ಉಚಿತವಾಗಿರುತ್ತದೆ. ಉಜ್ವಲ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದವರು ಇದರಲ್ಲಿ ಅರ್ಜಿ ಸಲ್ಲಿಸಬಹುದು. ಆದರೆ ಅದರಲ್ಲಿ ಗ್ಯಾಸ್‌ ಸಂಪರ್ಕ ಪಡೆದವರಿಗೆ ಅವಕಾಶವಿರುವುದಿಲ್ಲ  ಎಂದು ಖಾದರ್‌ ತಿಳಿಸಿದರು.

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಮೂಲ್ಕಿಯ ಡಾ| ಹಂಸರಾಜ್‌ ಶೆಟ್ಟಿ ಅವರಿಗೆ ಬ್ರಿಟನ್‌ನ ಎಂಬಿಇ ಪ್ರಶಸ್ತಿ

ಮೂಲ್ಕಿಯ ಡಾ| ಹಂಸರಾಜ್‌ ಶೆಟ್ಟಿ ಅವರಿಗೆ ಬ್ರಿಟನ್‌ನ ಎಂಬಿಇ ಪ್ರಶಸ್ತಿ

Mangaluru; ಚರಂಡಿ ತೋಡಿಗೆ ಬಿದ್ದ ಆಟೋ ರಿಕ್ಷಾ; ಚಾಲಕ ಸಾವು

Mangaluru; ಚರಂಡಿ ತೋಡಿಗೆ ಬಿದ್ದ ಆಟೋ ರಿಕ್ಷಾ; ಚಾಲಕ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.