ಶಿರ್ವ: ಪಾಳು ಬಿದ್ದ ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯ


Team Udayavani, Jul 29, 2017, 8:05 AM IST

vasti-nilaya.jpg

ಶಿರ್ವ: ಸುಮಾರು ದಶಕಗಳ ಹಿಂದೆ ನಿರ್ಮಾಣಗೊಂಡ ಶಿರ್ವ ತೊಟ್ಲಗುರಿ ಬಂಗ್ಲೆ ಮೈದಾನದಲ್ಲಿರುವ ಜಿ.ಪಂ.ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾಕ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯವು ಇಂದು ಶಿರ್ವ ಗ್ರಾಮ ಪಂಚಾಯತ್‌ಆಡಳಿತದ ನಿರ್ಲಕ್ಷದಿಂದ ಶಿಥಿಲಗೊಂಡು ಪಾಳು ಬಿದ್ದಿದೆ.ಹಲವಾರು ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದ ಈ ಹಾಸ್ಟೆಲ್‌ ಕಟ್ಟಡ ಪಾಳು ಬಿದ್ದಿರುವುದು ಮಾತ್ರ ದುರದೃಷ್ಟಕರ.

ಬಡ ವಿದ್ಯಾರ್ಥಿಗಳ ಆಶಾಕಿರಣ
ಶಿರ್ವ ಪರಿಸರ ಹಾಗೂ ದೂರದ ಊರುಗಳ ಹಲವಾರು ಬಡ ವಿದ್ಯಾರ್ಥಿಗಳು ಈ ವಸತಿ ನಿಲಯದಲ್ಲಿ ವಾಸ್ತವ್ಯ ಹೊಂದಿ ಪರಿಸರದ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಜನೆಗೈದು ದೇಶ ವಿದೇಶಗಳಲ್ಲಿ ಉದೋÂಗದಲ್ಲಿದ್ದಾರೆ. ದಶಕಗಳ ಹಿಂದೆ ಈ ವಸತಿ ನಿಲಯದಲ್ಲಿ ಸುಮಾರು 60 ರಿಂದ 80 ಸಂಖ್ಯೆಯ ವಿದ್ಯಾರ್ಥಿಗಳು ವಾಸ್ತವ್ಯವಿದ್ದು ಇಬ್ಬರು ವಾರ್ಡನ್‌ಗಳು ಮತ್ತು ಓರ್ವ ಅಡುಗೆಯವರು ಇದ್ದರು. ಬದಲಾದ ಕಾಲಘಟ್ಟದಲ್ಲಿ ಆಂಗ್ಲ ಮಾಧ್ಯಮದ ವ್ಯಾಮೋಹದಿಂದಾಗಿ ಹಾಸ್ಟೆಲ್‌ನಲ್ಲಿದ್ದು ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು ಕ್ರಮೇಣ ಮುಚ್ಚಲ್ಪಟ್ಟಿತ್ತು.

ಗ್ರಾ.ಪಂ.ಗೆ ಹಸ್ತಾಂತರ
2008ರಲ್ಲಿ ಜಿ.ಪಂ.ಅನುದಾನದಿಂದ ಹಳೆ ಕಟ್ಟಡದ ದುರಸ್ತಿ ಮಾಡಿ ಸುಣ್ಣಬಣ್ಣ ಬಳಿದು ಆವರಣ ಗೋಡೆ ನಿರ್ಮಿಸಿ ಬಾಲಕರ ಸುಸಜ್ಜಿತ ಶೌಚಾಲಯದೊಂದಿಗೆ ಹೊಸ ಆರ್‌ಸಿಸಿ ಕೋಣೆ ಸೇರ್ಪಡೆಗೊಂಡು ಸುಸ್ಥಿತಿಯಲ್ಲಿತ್ತು. ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚಲ್ಪಟ್ಟ ಹಾಸ್ಟೆಲ್‌ ಕಟ್ಟಡವನ್ನು ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಶಿರ್ವ ಗ್ರಾ.ಪಂ.ಗೆ ಉಪಯೋಗವಾಗುವಂತೆ ಹಸ್ತಾಂತರಿಸಿದ್ದರು.ಸುಸ್ಥಿತಿಯಲ್ಲಿದ್ದ ಕಟ್ಟಡವನ್ನು ಉಪಯೋಗಿಸುವ ಬದ್ಧತೆ ತೋರದೆ ಗ್ರಾ.ಪಂ.ನಿರ್ಲಕ್ಷé ವಹಿಸಿದೆ.

ಸ್ಥಳೀಯಾಡಳಿತದ ನಿರ್ಲಕ್ಷ
ಹಸ್ತಾಂತರಗೊಂಡ ಹಾಸ್ಟೆಲ್‌ ಕಟ್ಟಡವನ್ನು ಉಪಯೋಗ ಮಾಡುವು ದಾಗಲೀ ಯಾ ಸದ್ರಿ ಸ್ಥಳದಲ್ಲಿ ಕಟ್ಟಡ ಕೆಡವಿ ಯಾವುದೇ ನೂತನ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ಆಸಕ್ತಿ ತೋರದೆ ಗ್ರಾ.ಪಂ.ಸಂಪೂರ್ಣ ನಿರ್ಲಕ್ಷé ವಹಿಸಿದೆ. ಹಳೆ ಕಟ್ಟಡಕ್ಕೆ ಹೊಂದಿಕೊಂಡು ನಿರ್ಮಿಸಿರುವ  ಹೊಸ ಆರ್‌ಸಿಸಿ ಕಟ್ಟಡ‌ ಕೂಡಾ ಉಪಯೋಗಕ್ಕೆ ಬಾರದೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಸುಮಾರು 25 ಲ.ರೂ.ಗಳ ಮೌಲ್ಯದ ಕಟ್ಟಡ ಸರಿಯಾದ ನಿರ್ವಹಣೆಯಿಲ್ಲದೆ ಸುತ್ತಮುತ್ತ ಪೊದೆ ಗಿಡ ಗಂಟಿ ಬೆಳೆದು ನಿರುಪಯುಕ್ತವಾಗಿದೆ. ಕಿಟಿಕಿ ಬಾಗಿಲುಗಳು ಮುರಿದಿದ್ದು, ಮಾಡಿನ ಹೆಂಚುಗಳು ಹಾರಿ ಹೋಗಿ ಮಳೆ ನೀರು ಬಿದ್ದು ಗೋಡೆಗಳು ಶಿಥಿಲಗೊಂಡು ಸಾರ್ವಜನಿಕರ ತೆರಿಗೆಯ ಹಣ ಪೋಲಾಗುತ್ತಿದೆ. ಒಂದು ಕಾಲದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ,ಚಟುವಟಿಕೆಯ ಕೇಂದ್ರವಾಗಿದ್ದ ಹಾಸ್ಟೆಲ್‌ ಕಟ್ಟಡ ಮತ್ತು ಧ್ವಜಸ್ತಂಭ ಪಾಳು ಬಿದ್ದು ಅನಾಥವಾಗಿದೆ.

ಅಕ್ರಮ ಚಟುವಟಿಕೆಗಳ ತಾಣ
ಸರಿಯಾದ ನಿರ್ವಹಣೆಯಿಲ್ಲದೆ ಕಟ್ಟಡದ ಕಿಟಿಕಿ ಬಾಗಿಲುಗಳು ಮುರಿದು ಹೋಗಿದ್ದು ಪಡ್ಡೆ ಹುಡುಗರ ಆಶ್ರಯ ತಾಣವಾಗಿದೆ. ಕಟ್ಟಡದ ಹಿಂಬದಿಯ ಬಾಗಿಲು ಮತ್ತು ಶೌಚಾಲಯದ ಬಾಗಿಲುಗಳು ಮುರಿದಿದ್ದು , ರಾತ್ರಿ ವೇಳೆಗೆ ಪಾಳು ಬಿದ್ದ ಕಟ್ಟಡ ಅನೈತಿಕ ಮತ್ತು ಅಕ್ರಮ ಚಟುವಟಿಕೆಗಳ ಕೇಂದ್ರವಾಗಿದೆ ಎಂದು ಸಾರ್ವಜನಿಕ ವಲಯದಿಂದ ದೂರುಗಳು ಕೇಳಿ ಬರುತ್ತಿದೆ.

ಶಿರ್ವ ಗ್ರಾ.ಪಂ.ಗೆ ಉಪಯೋಗಕ್ಕೆ ಬಾರದ ಈ ಕಟ್ಟಡವನ್ನು ಹಾಳುಗೆಡವದೆ ಶಾಸಕರು / ಜನಪ್ರತಿನಿಧಿಗಳು/ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸಾರ್ವಜನಿಕರ ತೆರಿಗೆ ಹಣ ಪೋಲಾಗದಂತೆ ಮುಂದಿನ ದಿನಗಳಲ್ಲಿ ಕಾಪು ತಾಲೂಕು ಕೇಂದ್ರವಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವ ತಾಲೂಕು ಮಟ್ಟದ ಕಚೇರಿಗಳಿಗೆ ಅವಕಾಶ ಮಾಡಿಕೊಡಬೇಕೆಂಬುದು ಶಿರ್ವದ ನಾಗರಿಕರ ಆಶಯವಾಗಿದೆ.

ಕಟ್ಟಡದ ಬಗ್ಗೆ ಈಗಾಗಲೇ ಶಿರ್ವ ಗ್ರಾ.ಪಂ.ಆಡಳಿತದ ಗಮನಕ್ಕೆ ತಂದು ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಪಂ.ಅ.ಅಧಿಕಾರಿ ಮತ್ತು ಸದಸ್ಯರೊಂದಿಗೆ ಭೇಟಿ ನೀಡಿ ಪರಿಶೀಲಿಸಿದೇªವೆ. ಹಳೇ ಕಟ್ಟಡದ ದುರಸ್ತಿ ಯಾ ಕೆಡವಿ ಬೇರೆ ಕಟ್ಟಡ  ಕಟ್ಟುವ ಬಗ್ಗೆ ಮತ್ತು ಹಳೆ ಕಟ್ಟಡಕ್ಕೆ ತಾಗಿ ನಿರ್ಮಿಸಿರುವ ಹೊಸ ಆರ್‌ಸಿಸಿ ಕಟ್ಟಡವನ್ನು ಉಳಿಸಿ ಗ್ರಾ.ಪಂ.ಗೋಡೌನ್‌ ಆಗಿ ಬಳಸುವಂತೆ ಸಲಹೆ ನೀಡಿದೇªನೆ.ಆದರೆ ಯಾವುದೇ ಸಲಹೆ ಈವರೆಗೆ ಕಾರ್ಯಗತವಾಗಿಲ್ಲ. ಕಟ್ಟಡಕ್ಕೆ ನೀರು ಸರಬರಾಜು ಆಗುತ್ತಿದ್ದ ಬಾವಿಯನ್ನು ಮುತುವರ್ಜಿ ವಹಿಸಿ ಶಾಸಕ ವಿನಯ ಕುಮಾರ್‌ ಸೊರಕೆಯವರ ಅನುದಾನದಿಂದ ದುರಸ್ತಿಗೊಳಿಸಿದೇªವೆ. ಪಂಪುಸೆಟ್‌, ಪೈಪ್‌ಲೈನ್‌ ಅಳವಡಿಸಿ ಸಾರ್ವಜನಿಕ ನೀರಿನ ಟ್ಯಾಂಕ್‌ಗೆ ಸಂಪರ್ಕ ಕಲ್ಪಿಸಿ ಶಿರ್ವ ಪೇಟೆಗೆ ಕುಡಿಯುವ ನೀರಿನ ಸರಬರಾಜು ಮಾಡಿ ಸಾರ್ವಜನಿಕರ ಉಪಯೋಗಕ್ಕಾಗಿ ಅವಕಾಶ ಕಲ್ಪಿಸಿ ಕೊಡಲಾಗಿದೆ.
– ವಿಲ್ಸನ್‌ ರೊಡ್ರಿಗಸ್‌, ಜಿ.ಪಂ.ಸದಸ್ಯರು,ಶಿರ್ವ ಕ್ಷೇತ್ರ

ಹಲವಾರು ವರುಷಗಳಿಂದ ನೆನೆಗುದಿಗೆ ಬಿದ್ದಿರುವ ಬಂಗ್ಲೆ ಮೈದಾನಕ್ಕೆ ಬರುವ ರಸ್ತೆಯನ್ನು ಡಾಮರೀಕರಣಗೊಳಿಸಿದರೆ ಉತ್ತಮ. ಈ ಪರಿಸರದಲ್ಲಿ  ಮಾಲಿನ್ಯರಹಿತ ವಾತಾವರಣವಿರುವುದರಿಂದ ಸುಸಜ್ಜಿತ ಪಾರ್ಕ್‌ ನಿರ್ಮಿಸಿ ಸಾರ್ವಜನಿಕರಿಗೆ/ಮಕ್ಕಳಿಗೆ ವಾಯುವಿಹಾರಕ್ಕಾಗಿ ಅವಕಾಶ ಕಲ್ಪಿಸಬಹುದು.
– ಹರೀಶ್‌ ಆಚಾರ್ಯ, ಸ್ಥಳೀಯ ನಿವಾಸಿ.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.