ಹುತ್ತಕ್ಕೆ ಹಾಲೆರೆಯದೆ ಮಕ್ಕಳಿಗೆ ನೀಡಿ: ಶಿಮುಶ


Team Udayavani, Jul 29, 2017, 2:41 PM IST

29-CIT-3.jpg

ಚಿತ್ರದುರ್ಗ: ನಿರ್ಜಿವ ವಸ್ತುಗಳಾದ ನಾಗರಕಲ್ಲು, ಹುತ್ತಕ್ಕೆ ಹಾಲೆರೆಯದೆ ರೋಗಿಗಳಿಗೆ, ಬಡವರಿಗೆ, ಶಾಲಾ ಮಕ್ಕಳಿಗೆ ವಿತರಿಸುವ ಮೂಲಕ ನಾಗರಪಂಚಮಿಯನ್ನು ಬಸವ ಪಂಚಮಿಯಾಗಿ ಹಾಗೂ ಹಾಲುಣಿಸುವ ಹಬ್ಬವನ್ನಾಗಿ ಆಚರಿಸಬೇಕು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು
ಹೇಳಿದರು.

ಇಲ್ಲಿನ ಬಸವಕೇಂದ್ರ ಶ್ರೀ ಮುರುಘಾಮಠ ಹಾಗೂ ರೋಟರಿ ಕ್ಲಬ್‌ ಚಿತ್ರದುರ್ಗ ಸಹಯೋಗದಲ್ಲಿ ಪಿ ಆ್ಯಂಡ್‌ ಟಿ ಕ್ವಾಟ್ರರ್ಸ್‌ ಹಿಂಭಾಗದ ಮೈಲಾರಲಿಂಗೇಶ್ವರ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶುಕ್ರವಾರ ನಡೆದ ನಾಗರಪಂಚಮಿ ನಿಮಿತ್ತ ಶಾಲಾ ಮಕ್ಕಳಿಗೆ ಹಾಲು ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾಡಿನ ಹಲವು ಸಂಘಟನೆಗಳು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಆರೋಗ್ಯಕರ ಬೆಳವಣಿಗೆ. ಬಹಳಷ್ಟು ಜನರು ಹಾಲನ್ನು ಮಣ್ಣು ಪಾಲು ಮಾಡುತ್ತಾರೆ. ಪೌಷ್ಟಿಕವಾದ ಈ ಹಾಲನ್ನು ಮಕ್ಕಳಿಗೆ ನೀಡಬೇಕು. ಸರ್ಕಾರ ಅನ್ನಭಾಗ್ಯದ
ಜೊತೆಗೆ ಕ್ಷೀರಭಾಗ್ಯ ಕೊಟ್ಟಿರುವುದು ಒಳ್ಳೆಯ ಕಾರ್ಯವಾಗಿದೆ. ಇದರಿಂದ ಮಕ್ಕಳಿಗೆ ಪೌಷ್ಟಿಕಾಂಶ ದೊರೆಯುತ್ತದೆ ಎಂದರು.

ಶಿವಮೊಗ್ಗ ಬಸವಕೇಂದ್ರದ ಬಸವಮರುಳಸಿದ್ಧ ಸ್ವಾಮೀಜಿ ಮಾತನಾಡಿ, ಭಕ್ತಿಯಿಂದ ಸ್ವೀಕರಿಸುವ ಪ್ರಸಾದ ಹಾಳಾಗಬಾರದು. 25-30ವರ್ಷಗಳಿಂದ ಶ್ರೀಗಳು ಈ ವಿಚಾರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು. ನಿವೃತ್ತ ಐಎಎಸ್‌ ಅಧಿಕಾರಿ ಕೆ. ಅಮರನಾರಾಯಣ ಮಾತನಾಡಿ, ಯಾವುದು ಹಾಲನ್ನು ಕುಡಿಯುವುದಿಲ್ಲವೋ ಅದಕ್ಕೆ ಹಾಲನ್ನು ನೀಡುತ್ತಿದ್ದೇವೆ. ಕ್ರಾಂತಿಕಾರಿ ಬದಲಾವಣೆ ಮಾಡುತ್ತಿರುವ ಶ್ರೀಗಳು ಅನುಪಯುಕ್ತ ಪದ್ಧತಿಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ ಎಂದರು. 

ಮುಸ್ಲಿಂ ಧರ್ಮಗುರು ಸರ್‌ಖಾಜಿ ಶಂಷುದ್ದೀನ್‌ ಮಾತನಾಡಿ, ಕಂದಾಚಾರಗಳನ್ನು ಆಚರಿಸದೆ ಹಾಲು ಕುಡಿಯದಿರುವ ಹಾವಿಗೆ ಬದಲಾಗಿ ಮಕ್ಕಳಿಗೆ, ರೋಗಿಗಳಿಗೆ, ಬಡವರಿಗೆ ಹಾಲನ್ನು ಕೊಡಿ. ಪಟಾಕಿ ಹಚ್ಚುವ ಬದಲು ಮನೆಯಲ್ಲಿ ದೀಪ ಹಚ್ಚಬೇಕು ಎಂದರು. ಫಾದರ್‌ ಎಂ.ಎಸ್‌. ರಾಜು ಮಾತನಾಡಿದರು. ಪ್ರೌಢಶಾಲಾ ವಿಭಾಗದ ಸಂಯೋಜನಾಧಿಕಾರಿ ಶಶಿಕಲಾ, ರೋಟರಿ ಕ್ಲಬ್‌ ಅಧ್ಯಕ್ಷ ವಿಶ್ವನಾಥ್‌ ಮಾತನಾಡಿದರು. ಬಸವ ಮಾಚಿದೇವ ಸ್ವಾಮೀಜಿ, ಜಿಲ್ಲಾ ಶರಣಸಾಹಿತ್ಯ ಪರಿಷತ್‌ ಅಧ್ಯಕ್ಷ ಕೆ.ಎಂ. ವೀರೇಶ್‌, ವೀರಶೈವ ಸಮಾಜದ ಕಾರ್ಯದರ್ಶಿ ಜಿ.ಸಿ. ಮಲ್ಲಿಕಾರ್ಜುನ್‌, ರೋಟರಿ ವೀರೇಶ್‌, ಗಾಯತ್ರಿ ಶಿವರಾಮ್‌, ಕೆಇಬಿ ಷಣ್ಮುಖಪ್ಪ, ಷರೀಫಾಬಿ, ಕೇತೇಶ್ವರ ಟ್ರಸ್ಟ್‌ ಪ್ರಹ್ಲಾದಪ್ಪ ಮತ್ತು ಸಹನಾ ಮಾತೃಶ್ರೀ ಸಂಸ್ಥೆಯವರು ಇದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.