ಎನ್ಡಿಎ ತೆಕ್ಕೆಗೆ ಶಿವಪಾಲ್ ಯಾದವ್?
Team Udayavani, Jul 31, 2017, 8:55 AM IST
ಲಕ್ನೋ: ದೇಶಾದ್ಯಂತ “ಆಪರೇಷನ್ ಕಮಲ’ದ ಭರಾಟೆ ಹೆಚ್ಚಿರುವ ನಡುವೆಯೇ ಉತ್ತರ ಪ್ರದೇಶದ ಸಮಾಜವಾದಿ ಪಕ್ಷಕ್ಕೆ ಅತೀ ದೊಡ್ಡ ಆಘಾತ ಎದುರಾಗುವ ಲಕ್ಷಣಗಳು ಗೋಚರಿಸಿವೆ. ಗುಜರಾತ್, ಉತ್ತರಪ್ರದೇಶ ಹಾಗೂ ಬಿಹಾರದಲ್ಲಿನ ರಾಜಕೀಯ ಸಂಚಲನದ ಬೆನ್ನಲ್ಲೇ ಈಗ ಎಸ್ಪಿ ನಾಯಕ ಶಿವಪಾಲ್ ಯಾದವ್ ಅವರೂ ಎನ್ಡಿಎ ಜತೆ ಸಖ್ಯ ಬೆಳೆಸುವ ಚಿಂತನೆ ನಡೆಸುತ್ತಿದ್ದಾರೆ.
ಈಗಾಗಲೇ ಮಾಜಿ ಸಿಎಂ ಅಖೀಲೇಶ್ ಯಾದವ್ ಅವರೊಂದಿಗೆ ಮುನಿಸಿಕೊಂಡಿರುವ ಶಿವಪಾಲ್ ಯಾದವ್ ಅವರು ಬಿಹಾರದಲ್ಲಿ ಸಿಎಂ ನಿತೀಶ್ ಕುಮಾರ್ ಎನ್ಡಿಎ ಜತೆ ಸೇರಿಕೊಂಡು ಸರಕಾರ ರಚಿಸಿದ ಬಳಿಕ ತಾವೂ ಎನ್ಡಿಎ ತೆಕ್ಕೆಗೆ ಬೀಳಲು ಉತ್ಸುಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಅವರು ತಮ್ಮ ಆಲೋಚನೆಯ ಬಗ್ಗೆ ಎಸ್ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಚರ್ಚಿಸಿದ್ದಾರೆ. ವಿಶೇಷವೆಂದರೆ ನಿತೀಶ್ ಅವರ ಜೆಡಿಯು ಪಕ್ಷದತ್ತ ಶಿವಪಾಲ್ ಆಕರ್ಷಿತರಾಗಿದ್ದು, ಜೆಡಿಯು ನಾಯಕರೊಂದಿಗೂ ಆರಂಭಿಕ ಮಾತುಕತೆ ನಡೆಸಿದ್ದಾರೆ. ಇದು ಕಾರ್ಯಗತ ಆಗದಿದ್ದರೆ ಹೊಸ ಪಕ್ಷ ರಚಿಸಿ, ಅನಂತರ ಎನ್ಡಿಎ ಜತೆ ಮೈತ್ರಿ ಮಾಡಿಕೊಳ್ಳುವ ಆಲೋಚನೆಯೂ ಶಿವಪಾಲ್ರಿಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು