ಅಸ್ಸಾಂನಲ್ಲಿ  ಭಾರೀ ಮಳೆ: ನೆರೆಯಬ್ಬರಕ್ಕೆ 91 ಪ್ರಾಣಿಗಳು ಬಲಿ


Team Udayavani, Aug 1, 2017, 9:31 AM IST

01-PTI-10.jpg

ಹೊಸದಿಲ್ಲಿ: ಇತ್ತ ದಕ್ಷಿಣ ಭಾರತದಲ್ಲಿ ಈ ಬಾರಿಯೂ ಬರಗಾಲದ ಛಾಯೆ ಆವರಿಸಿದ್ದರೆ, ಅಸ್ಸಾಂ, ಗುಜರಾತ್‌ನಂಥ ರಾಜ್ಯಗಳಲ್ಲಿ ಭಾರೀ ಮಳೆ, ಪ್ರವಾಹವು ಜನಜೀವನವನ್ನು ತತ್ತರಿಸುವಂತೆ ಮಾಡಿದೆ. ಈಶಾನ್ಯ ರಾಜ್ಯದಲ್ಲಿ ಪ್ರಸಕ್ತ ವರ್ಷ ಮಳೆಯಿಂದಾಗಿ ಸುಮಾರು 70 ಮಂದಿ ಸಾವಿಗೀ ಡಾಗಿ ದ್ದಾರೆ. ಅಷ್ಟೇ ಅಲ್ಲ, ಅಸ್ಸಾಂನ ಕಾಜಿರಂಗಾ ರಾಷ್ಟ್ರೀಯ ಉದ್ಯಾನ ವನ ದಲ್ಲಿದ್ದ 90ಕ್ಕೂ ಹೆಚ್ಚು ಪ್ರಾಣಿಗಳು ವರುಣನ ಅಬ್ಬರಕ್ಕೆ ಬಲಿಯಾಗಿವೆ.

ಕೇಂದ್ರ ಪರಿಸರ ಸಚಿವ ಹರ್ಷವರ್ಧನ್‌ ಅವರೇ ಲೋಕಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಪ್ರಶ್ನೆ ಯೊಂದಕ್ಕೆ ಲಿಖೀತ ಉತ್ತರ ನೀಡಿದ ಹರ್ಷವರ್ಧನ್‌, “ಮಳೆ, ಪ್ರವಾಹದಿಂದಾಗಿ 7 ಘೇಂಡಾಮೃಗಗಳು, 84 ಜಿಂಕೆಗಳು ಸಾವಿಗೀಡಾಗಿವೆ. ಅಸ್ಸಾಂನ 29 ಜಿಲ್ಲೆಗಳಲ್ಲಿನ 25 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಡಳಿತವು ಇಲ್ಲಿ 1,098 ಪರಿಹಾರ ಶಿಬಿರಗಳನ್ನು ನಿರ್ಮಿಸಿದ್ದು, ಜನರಿಗೆ ತೊಂದರೆ ಯಾಗ  ದಂತೆ ಕ್ರಮ ಕೈಗೊಳ್ಳುತ್ತಿದೆ,’ ಎಂದು ಹೇಳಿದ್ದಾರೆ.

2 ಲಕ್ಷ ಪರಿಹಾರ ಘೋಷಣೆ: ಅಸ್ಸಾಂ ಮತ್ತು ರಾಜಸ್ಥಾನದಲ್ಲಿ ಮಳೆ, ಪ್ರವಾಹದಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಂಭೀರ ಗಾಯ ಗೊಂಡವರಿಗೆ 50 ಸಾವಿರ ರೂ. ನೀಡುವುದಾಗಿಯೂ ಹೇಳಿದ್ದಾರೆ.  

ಇಂದು ಪ್ರಧಾನಿ ಭೇಟಿ
ಪ್ರವಾಹಪೀಡಿತ ಅಸ್ಸಾಂಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ಪ್ರತಿ ವರ್ಷ ಪ್ರವಾಹದಿಂದಾಗುವ ಸಮಸ್ಯೆಗಳ ಕುರಿತು ಚರ್ಚಿಸಿ, ಅದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಚಿವರ ಸಮಿತಿ ಮತ್ತು ರಾಜ್ಯದ ಅಧಿಕಾರಿಗಳ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ಅಸ್ಸಾಂನ ಹಣಕಾಸು ಸಚಿವ ಹಿಮಾಂತ ಬಿಸ್ವಾ ಸರ್ಮಾ ಹೇಳಿದ್ದಾರೆ. 

13 ಗಂಟೆ ಬಳಿಕ ಪ್ರವಾಹದಲ್ಲಿ ಸಿಲುಕಿದ್ದ ವೃದ್ಧೆಯ ರಕ್ಷಣೆ
ಪಶ್ಚಿಮ ಬಂಗಾಳದ ದಾಮೋದರ ನದಿಯಲ್ಲಿ ಕೊಚ್ಚಿ ಹೋಗಿದ್ದ 62 ವರ್ಷದ ತಪಥಿ ಚೌಧರಿ ಎಂಬ ಮಹಿಳೆಯನ್ನು ಭಾನುವಾರ ರಕ್ಷಿಸಲಾಗಿದೆ. 13 ಗಂಟೆಗಳ ಕಾಲ ತಪಥಿ ನೀರಲ್ಲಿದ್ದರೂ, ಸಾವಿನ ಜತೆ ಹೋರಾಡಿ ಗೆದ್ದಿದ್ದಾರೆ. ಶನಿವಾರ ಸಂಜೆ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಅವರನ್ನು 13 ಗಂಟೆಗಳ ಬಳಿಕ ಅಂದರೆ ಭಾನುವಾರ ಬೆಳಗ್ಗೆ 80 ಕಿ.ಮೀ. ದೂರದಲ್ಲಿ ಮೀನುಗಾರರು ರಕ್ಷಿಸಿದ್ದಾರೆ.

ದೇಶದ ಪ್ರವಾಹ ಪೀಡಿತ ಪ್ರದೇಶ ಗಳು, ಸಂಕಷ್ಟದಲ್ಲಿರುವ ಜನರ ಬಗ್ಗೆ ಸರಕಾರಕ್ಕೆ ಸೂಕ್ಷ್ಮ ಸಂವೇದನೆಯೇ ಇಲ್ಲ. ಸಚಿವರೆಲ್ಲ ಬೇರೆ ಪಕ್ಷಗಳ ಶಾಸಕ ರನ್ನು ಪಕ್ಷಾಂತರ ಮಾಡಿಸಿಕೊಳ್ಳುವಲ್ಲಿ ಬ್ಯುಸಿಯಾಗಿದ್ದಾರೆ. ಅವರಿಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಬೇಕೆಂಬ ಕನಿಷ್ಠ ಕಾಳಜಿಯೂ ಇಲ್ಲ.
ಗುಲಾಂ ನಬಿ ಆಜಾದ್‌, ಕಾಂಗ್ರೆಸ್‌ ನಾಯಕ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.