ಒಂದು ತಿಂಗಳ ಹಿಂದೆ ಜೆಡಿಎಸ್ನಲ್ಲೇ ಉಳಿಯುವ ಮನಸ್ಸಿತ್ತು!;ಜಮೀರ್
Team Udayavani, Aug 1, 2017, 4:50 PM IST
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನನ್ನ ರಾಜಕೀಯ ಗುರು. ಅವರ ಋಣ ನನ್ನ ಮೇಲಿದೆ. ಒಂದು ತಿಂಗಳ ಹಿಂದೆ ಜೆಡಿಎಸ್ನಲ್ಲೇ ಉಳಿಯುವ ಮನಸ್ಸಿತ್ತು, ಈಗ ಇಲ್ಲ ಎಂದು ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಮಂಗಳವಾರ 51 ನೇ ಜನ್ಮ ದಿನಾಚರಣೆ ಆಚರಿಸಿಕೊಂಡ ಜಮೀರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ನಮಗೆ ಒಂದು ತಿಂಗಳ ಹಿಂದೆ ಜೆಡಿಎಸ್ನಲ್ಲಿ ಉಳಿದುಕೊಳ್ಳುವ ಮನಸ್ಸಿತ್ತು, ಈಗ ಇಲ್ಲ. ನಮ್ಮ ಮಾಜಿ ಅಣ್ಣ ಕುಮಾರಸ್ವಾಮಿ ಅವರು ಲೂಸ್ ಟಾಕ್ ಹೇಳಿಕೆ ನೀಡಿ ನಮ್ಮ ಮನಸ್ಸನ್ನು ಹಾಳು ಮಾಡಿದರು. ಮುಂದೆ ಜೆಡಿಎಸ್ಗೆ ಮರಳುವ ಪ್ರಶ್ನೆಯೇ ಇಲ್ಲ’.
‘ನನಗೆ ಆಯ್ಕೆ ಕಾಂಗ್ರೆಸ್ ಮಾತ್ರವಾಗಿತ್ತು, ಕೋಮುವಾದಿ ಬಿಜೆಪಿಗೆ ನಾನು ಸೇರ್ಪಡೆ ಆಗುವುದಿಲ್ಲ’ ಎಂದರು.
ಇದೇ ವೇಳೆ ‘ನನ್ನ ರಾಜಕೀಯ ಗುರು ದೇವೇಗೌಡ, ಕುಮಾರಸ್ವಾಮಿ ಅಲ್ಲ. ದೇವೇಗೌಡರ ವಿರುದ್ಧ ಯಾವುದೇ ಹೇಳಿಕೆ ನೀಡುವುದಿಲ್ಲ’ ಎಂದರು.
ಕೆಲ ದಿನಗಳ ಹಿಂದೆ ಜಮೀರ್ ‘ಚಾಮರಾಜ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೆ ನನ್ನತಲೆ ಕತ್ತರಿಸಿ ಮಾಧ್ಯಮದವರ ಕೈಯಲ್ಲಿ ನೀಡುತ್ತೇನೆ’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ