ಅನ್ನದಾತನ ಪರಿ’ತಾಪ’: ರೈತರ ಆತ್ಮಹತ್ಯೆಗೆ ತಾಪವೇ ಕಾರಣ
Team Udayavani, Aug 2, 2017, 7:50 AM IST
ಲಾಸ್ಏಂಜಲೀಸ್: ಭಾರತದಲ್ಲಿ ಬರಗಾಲ ಬರಲು ಯುರೋಪ್ನ ಮಾಲಿನ್ಯವೇ ಕಾರಣ ಎಂದು ಇತ್ತೀಚೆಗೆ ಲಂಡನ್ನ ಸಂಶೋಧಕರ ವರದಿಯೊಂದು ತಿಳಿಸಿದ್ದು ನೆನಪಿರಬಹುದು. ಯುರೋಪ್ನ ವಿದ್ಯುತ್ ಸ್ಥಾವರಗಳಲ್ಲಿ ಉತ್ಪತ್ತಿಯಾಗುವ ಸಲ್ಫರ್ ಡಯಾಕ್ಸೈಡ್ನಿಂದ ಮಾಲಿನ್ಯ ಹೆಚ್ಚಾಗಿ, ಅದರ ದುಷ್ಪರಿಣಾಮ ನೇರವಾಗಿ ಭಾರತಕ್ಕೆ ತಲುಪಿತ್ತಿದೆ ಎಂದು ಈ ವರದಿ ಹೇಳಿತ್ತು. ಇದೀಗ ಅದಕ್ಕೆ ಪುಷ್ಟಿ ನೀಡುವಂತೆ, ಹವಾಮಾನ ವೈಪರೀತ್ಯವೇ ಭಾರತದಲ್ಲಿ ರೈತರ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಮುಖ ಕಾರಣ ಎಂದು ಅಮೆರಿಕದ ಸಂಶೋಧಕರ ತಂಡವೊಂದು ಹೇಳಿದೆ.
ಕಳೆದ 30 ವರ್ಷಗಳಲ್ಲಿ ಭಾರತದಲ್ಲಿ 59 ಸಾವಿರಕ್ಕೂ ಹೆಚ್ಚು ಅನ್ನದಾತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೃಷಿ ಚಟುವಟಿಕೆಗಳ ಕಾಲದಲ್ಲಿ ತಾಪಮಾನ ಹೆಚ್ಚಳ ಮತ್ತು ಮಳೆಯ ಕೊರತೆಯಿಂದ ರೈತರು ಹತಾಶೆಗೊಳಗಾಗುತ್ತಾರೆ. ನಿರೀಕ್ಷೆಯೆಲ್ಲ ಹುಸಿಯಾದಾಗ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕ್ಯಾಲಿಫೋರ್ನಿಯಾ ವಿವಿಯ ಸಂಶೋಧಕರ ಅಧ್ಯಯನ ವರದಿ ಹೇಳಿದೆ. ಜಾಗತಿಕ ತಾಪಮಾನ ಹೆಚ್ಚಿದಂತೆ ರೈತರ ಆತ್ಮಹತ್ಯೆ ಪ್ರಮಾಣವೂ ಹೆಚ್ಚಳವಾಗಲಿದೆ ಎಂಬ ಎಚ್ಚರಿಕೆಯನ್ನೂ ವರದಿ ನೀಡಿದೆ. ಜತೆಗೆ, ಸರಕಾರವು ಸೂಕ್ತ ನೀತಿಗಳನ್ನು ತಂದರೆ ಅನ್ನದಾತರ ಜೀವವನ್ನು ಉಳಿಸಲು ಸಾಧ್ಯ ಎಂದೂ ವರದಿ ಹೇಳಿದೆ. 2050ರ ವೇಳೆಗೆ ತಾಪಮಾನ ಇನ್ನೂ 3 ಡಿ.ಸೆ.ನಷ್ಟು ಹೆಚ್ಚಾಗಲಿದೆ ಎಂಬ ಆತಂಕಕಾರಿ ಭವಿಷ್ಯವನ್ನೂ ಸಂಶೋಧಕರು ನುಡಿದಿದ್ದಾರೆ. ಜಗತ್ತಿನ ಆತ್ಮಹತ್ಯೆಗಳಲ್ಲಿ ಶೇ.75ರಷ್ಟು ನಡೆಯುತ್ತಿರುವುದು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ. ಈ ಪೈಕಿ ಐದನೇ ಒಂದರಷ್ಟು ಪ್ರಕರಣಗಳು ಭಾರತದಲ್ಲೇ ಘಟಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ