ಕುಖ್ಯಾತ ರೌಡಿ ಕರಿಚಿರತೆ ಎನ್ಕೌಂಟರ್ಗೆ ಬಲಿ
Team Udayavani, Aug 2, 2017, 8:00 AM IST
ಕಲಬುರಗಿ: ಕೊಲೆ, ಸುಲಿಗೆ, ದರೋಡೆ ಮತ್ತಿತರ ದುಷ್ಕೃತ್ಯಗಳ ಮೂಲಕ ಸಾರ್ವಜನಿಕರಿಗೆ ಹಾಗೂ ಪೊಲೀಸರಿಗೆ ತಲೆ ನೋವಾಗಿದ್ದ ಕುಖ್ಯಾತ ರೌಡಿ ನಂದೂರ ಗ್ರಾಮದ ಮಲ್ಲಿಕಾರ್ಜುನ ಅಲಿಯಾಸ್ ಕರಿಚಿರತೆ ಶಿವಾನಂದ ಬಡಿಗೇರ
(21) ಮಂಗಳವಾರ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ.
ಮಂಗಳವಾರ ಬೆಳಗ್ಗೆ ನಗರದ ಹೊರ ವಲಯ ಕೆಸರಟಗಿ ಸೀಮಾಂತರದಲ್ಲಿ ಮಲ್ಲಿಕಾರ್ಜುನ ತನ್ನ ಸಹಚರರೊಂದಿಗೆ ಮೂರು ಬೈಕ್ಗಳಲ್ಲಿ ತಿರುಗಾಡುತ್ತಿದ್ದಾನೆಂಬ ಮಾಹಿತಿ ಮೇರೆಗೆ ಗ್ರಾಮೀಣ ಡಿವೈಎಸ್ಪಿ ಎಸ್.ಎಸ್. ಹುಲ್ಲೂರ ನೇತೃತ್ವದಲ್ಲಿ ಬಂಧಿಸಲು ಹೋದಾಗ ಎರಡು ಬೈಕ್ಗಳಲ್ಲಿ ಮೂವರು ಪರಾರಿಯಾಗಿದ್ದರು. ಆದರೆ ಮಲ್ಲಿಕಾರ್ಜುನ ಬೈಕ್ ಸ್ಕಿಡ್ ಆಗಿ ಬಿದ್ದಿದ್ದರಿಂದ ಆತನನ್ನು ಸುತ್ತುವರಿದು ಹಿಡಿಯಲು ಪೊಲೀಸರು ಮುಂದಾಗಿದ್ದಾರೆ. ಆದರೆ ಮಲ್ಲಿಕಾರ್ಜುನ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆಯೇ ಗುಂಡು ಹಾರಿಸಿದ. ಒಂದು ಗುಂಡು ಡಿವೈಎಸ್ಪಿ ಹುಲ್ಲೂರ ಅವರ ಎದೆಯ ಮಗ್ಗುಲಿಗೆ ಬಡಿದು ಕೈಗೆ ತಗುಲಿದೆ. ಪ್ರತಿಯಾಗಿ ಮಹಾತ್ಮ ಬಸವೇಶ್ವರ ಠಾಣೆ ಸಿಪಿಐ ಶಾಂತಿನಾಥ ಮಲ್ಲಿಕಾರ್ಜುನನ ಮೇಲೆ ಗುಂಡು ಹಾರಿಸಿದ್ದಾರೆ. ಆತ ಸ್ಥಳದಲ್ಲಿಯೇ ಕುಸಿದು ಬಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.
ದಾಳಿಯಲ್ಲಿ ಪೇದೆಗಳಾದ ಶ್ರೀಶೈಲ, ಆನಂದ ಎಂಬುವರೂ ಗಾಯಗೊಂಡಿದ್ದಾರೆ. ಹುಲ್ಲೂರ ಹಾಗೂ ಪೇದೆಗಳಿಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್