ಕೋಟ್ಯಂತರ ರೂ. ವೆಚ್ಚ ಮಾಡಿದ್ರೂ ಅಭಿವೃದ್ಧಿಯ ಕೊರತೆ
Team Udayavani, Aug 2, 2017, 8:35 AM IST
ಬೆಂಗಳೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ರಾಜ್ಯ ಸರ್ಕಾರ 7 ವರ್ಷಗಳಲ್ಲಿ 21 ಸಾವಿರ ಕೋಟಿ ರೂ. ವೆಚ್ಚ ಮಾಡಿದರೂ ಸಮಗ್ರ ಅಭಿವೃದಿಟಛಿಯಾಗಿಲ್ಲ ಎಂದು ರಾಜ್ಯ ಸಾಂಖೀÂಕ ಹಾಗೂ ಯೋಜನಾ ಸಚಿವ ಎಂ.ಆರ್.ಸೀತಾರಾಂ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ 114 ವಿಧಾನಸಭೆ ಕ್ಷೇತ್ರಗಳನ್ನೊಳಗೊಂಡ ಕರಾವಳಿ ಅಭಿವೃದಿಟಛಿ ಮಂಡಳಿ, ಹೈದರಾಬಾದ್ ಕರ್ನಾಟಕ ಅಭಿವೃದಿಟಛಿ ಮಂಡಳಿ, ಬಯಲು ಸೀಮೆ ಅಭಿವೃದಿಟಛಿ ಮಂಡಳಿ ಹಾಗೂ ಮಲೆನಾಡು ಅಭಿವೃದಿಟಛಿ ಮಂಡಳಿಗಳ ಮೂಲಕ ವರ್ಷಕ್ಕೆ 3 ಸಾವಿರ ಕೋಟಿ ರೂ.ನಂತೆ ಏಳು ವರ್ಷಗಳಲ್ಲಿ 21 ಸಾವಿರ ಕೋಟಿ ರೂ. ವೆಚ್ಚವಾಗಿದೆ. ಆದರೆ, ನಿರೀಕ್ಷಿತ ಸಾಧನೆಯಾಗಿಲ್ಲ ಎಂದು ಹೇಳಿದರು.
ಮೇಲ್ನೋಟಕ್ಕೆ ಬಜೆಟ್ನ ಅನುದಾನ 18 ಇಲಾಖೆಗಳಿಗೆ ಹಂಚಿಕೆಯಾಗಿರುವುದರಿಂದ ಎಲ್ಲೂ ಪೂರ್ಣಪ್ರಮಾಣದ ಅಭಿವೃದಿಟಛಿಯಾಗಿಲ್ಲ ಎಂಬುದು ಕಂಡು ಬಂದಿದೆ. ಹೀಗಾಗಿ, ಇಲಾಖೆಗಳ ಸಂಖ್ಯೆ 7 ಅಥವಾ 8ಕ್ಕೆ ಇಳಿಸಲು ಚಿಂತನೆ ನಡೆದಿದೆ ಎಂದರು. ಪ್ರಮುಖವಾಗಿ ಗ್ರಾಮೀಣಾಭಿವೃದಿಟಛಿ, ಪಂಚಾಯತ್, ಕೃಷಿ, ತೋಟಗಾರಿಕೆ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ಸೀಮಿತಗೊಳಿಸಿ ನಿಯಮಾವಳಿ ರೂಪಿಸಲು ತೀರ್ಮಾನಿಸಲಾಗಿದೆ.
ಈ ಕುರಿತು ಆರ್ಥಿಕ ಇಲಾಖೆ ಅಧಿಕಾರಿಗಳ ಜತೆಯೂ ಚರ್ಚಿಸಿದ್ದು ಮುಖ್ಯಮಂತ್ರಿ ಜತೆಗೂ ಸಮಾಲೋಚನೆ ನಡೆಸಿ ಅಗತ್ಯವಾದರೆ ತಿದ್ದುಪಡಿ ತರಲಾಗುವುದು. ವಿಧಾನಮಂಡಲ ಅಧಿವೇಶನದವರೆಗೆ ಕಾಯಬೇಕೋ ಅಥವಾ ಸಂಪುಟ ಸಭೆಯ ಮುಂದಿಟ್ಟು ತೀರ್ಮಾನ ಕೈಗೊಳ್ಳಬೇಕೋ ಎಂಬುದನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಡಾ.ಡಿ.ಎಂ.ನಂಜುಂಡಪ್ಪ ವರದಿ ಪ್ರಕಾರ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹಣ ನೋಡಿದರೆ ಪ್ರತಿ ಕ್ಷೇತ್ರಕ್ಕೆ ವರ್ಷಕ್ಕೆ 30 ಕೋಟಿ ರೂ. ವರೆಗೆ ದೊರೆತಿದೆ. ಆದರೆ, ಸ್ಥಳೀಯ ಶಾಸಕರು ಸಹ ಆ ಅನುದಾನದಡಿ ಅಭಿವೃದಿಟಛಿಯೇ ಆಗಿಲ್ಲ. ಎಲ್ಲ ಇಲಾಖೆಗಳಿಗೂ ಹಂಚಿಕೆಯಾಗಿ ಅದು ಯಾವುದಕ್ಕೂ ಸಾಲದಂತಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಾದರೂ ಅಭಿವೃದಿಟಛಿ ಪೂರ್ಣ ಪ್ರಮಾಣದಲ್ಲಿ ಆಗಲು ಅನುದಾನ ಹಂಚಿಕೆಯ ಇಲಾಖೆಗಳನ್ನು ಕಡಿಮೆ ಸಂಖ್ಯೆಗೆ ಇಳಿಸಲಾಗುವುದು ಎಂದು ತಿಳಿಸಿದರು.
ಡಾ.ಡಿ.ಎಂ. ನಂಜುಂಡಪ್ಪ ವರದಿ ಪ್ರಕಾರ ಇದುವರೆಗೂ ಬಿಡುಗಡೆಯಾಗಿರುವ ಮೊತ್ತದಲ್ಲಿ ಆಗಿರುವ ಅಭಿವೃದಿಟಛಿ ಮತ್ತು ಹಿನ್ನಡೆ ಕುರಿತು ಸಮೀಕ್ಷೆ ನಡೆಸಲಾಗುವುದು. ಮುಂದೆ ಬಿಡುಗಡೆಯಾಗುವ ಹಣದ ವೆಚ್ಚದ ಬಗ್ಗೆ ನಿಗಾ ವಹಿಸಲಾಗುವುದು ಎಂದು ಹೇಳಿದರು.
ಶಾಸಕರ ಕ್ಷೇತ್ರಾಭಿವೃದಿಟಛಿ ನಿಧಿಯಡಿ 2017-18 ನೇ ಸಾಲಿನಲ್ಲಿ ತಲಾ 50 ಲಕ್ಷ ರೂ. ನೀಡಿದ್ದು, ಅದು ಸಂಪೂರ್ಣ
ವೆಚ್ಚ ಆದ ನಂತರ ಎರಡನೇ ಕಂತಿನಲ್ಲಿ 1 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಕೋಟಿ ರೂ., ಶಿವಮೊಗ್ಗದಲ್ಲಿ 1.50 ಕೋಟಿ ರೂ. ಹಿಂದಿನ ಅನುದಾನ ವೆಚ್ಚ ಆಗದೆ ಉಳಿದಿದೆ. 2013-14ನೇ ಸಾಲಿನಲ್ಲೂ ಮುಂಚಿನ 20 ಕೋಟಿ ರೂ. ಅನುದಾನ ಬಳಕೆ ಆಗದೆ ಒಟ್ಟಾರೆ ಉಳಿದಿತ್ತು. ಅದನ್ನು ವೆಚ್ಚ ಮಾಡಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್