ಹಿಂದಿ ಹೇರಿಕೆ ಕುರಿತು ಸಿಎಸ್, ಮೆಟ್ರೋ ಎಂಡಿ ಮೇಲೆ ದೂರು
Team Udayavani, Aug 2, 2017, 11:23 AM IST
ಬೆಂಗಳೂರು: “ನಮ್ಮ ಮೆಟ್ರೋ’ ನಿಲ್ದಾಣಗಳಲ್ಲಿ ಹಿಂದಿ ನಾಮಫಲಕಗಳ ಅಳವಡಿಸಿರುವ ಸಂಬಂಧ ರಾಜ್ಯ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಅ ಹಾಗೂ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ವಿರುದ್ಧ ಕನ್ನಡ ಅನುಷ್ಠಾನ ಮಂಡಳಿ ಅಧ್ಯಕ್ಷ ಪ್ರಸಾದ್ ಮಂಗಳವಾರ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆದರೆ, ಪೊಲೀಸರು ಈ ಬಗ್ಗೆ ಎಫ್ಐಆರ್ ದಾಖಲಿಸಿಲ್ಲ. ಬದಲಿಗೆ, ಪ್ರಕರಣ ಸಂಬಂಧ ಸೂಕ್ತ ಸಲಹೆ ನೀಡುವಂತೆ ಕಾನೂನು ತಜ್ಞರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಮಂಡಳಿಯ ದೂರಿನಲ್ಲಿರುವ ಅಂಶಗಳು ಶಿಸ್ತು ಕ್ರಮಕ್ಕೆ ಮಾತ್ರ ಒಳಪಡುತ್ತವೆ. ಕಾನೂನು ಕ್ರಮದ ವ್ಯಾಪ್ತಿಗೆ ಬರುವುದಿಲ್ಲ. ಈ ಹಿನ್ನೆಲೆಯೆಲ್ಲಿ ಕಾನೂನು ತಜ್ಞರಿಂದ ಸಲಹೆ ಪಡೆದು ಕ್ರಮಕೈಗೊಳ್ಳಲಾಗುವುದು ಎಂದು ವಿಧಾನಸೌಧ ಠಾಣೆ ಪೊಲೀಸರು ತಿಳಿಸಿದ್ದಾರೆ.
ದೂರಿನಲ್ಲೇನಿದೆ?: “ನಮ್ಮ ಮೆಟ್ರೋ’ ನಿಲ್ದಾಣಗಳಲ್ಲಿ ತ್ರಿಭಾಷಾ ಸೂತ್ರ ಪಾಲನೆ ಮಾಡಿರುವ ವಿಚಾರ ಸರ್ಕಾರದ ಮುಖ್ಯಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಅ ಅವರ ಗಮನಕ್ಕೆ ಬಂದರೂ ಯಾವುದೇ ಕ್ರಮಕೈಗೊಂಡಿಲ್ಲ. ಅಲ್ಲದೇ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ನಾಮಫಲಕವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರದೇ ಅಳವಡಿಸಿದ್ದಾರೆ.
ಈ ಮೂಲಕ ಕನ್ನಡ ಭಾಷೆಗೆ ಬಿಎಂಆರ್ಸಿಎಲ್ ಅಗೌರವ ತೋರಿದೆ. ಹಿಂದಿ ನಾಮಫಲಕ ಅಳವಡಿಸಿ ಭಾಷಾ ವೈಷಮ್ಯದ ಕಿಚ್ಚು ಹಚ್ಚಲು ಮುಂದಾಗಿದೆ. ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಅ ಅವರು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ವಿರುದ್ಧ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ.
ಪ್ರದೀಪ್ಸಿಂಗ್ ಕರೋಲ ಸಹ ಹಿಂದಿ ನಾಮಫಲಕ ಅಳವಡಿಕೆ ಸೂಚನೆ ಬಗ್ಗೆ ಈ ವಿಚಾರ ರಾಜ್ಯ ರಾಜ್ಯ ಸರ್ಕಾರದ ಗಮನಕ್ಕೆ ತರಬೇಕಿತ್ತು. ಇವರು ಸಹ ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ಈ ಇಬ್ಬರು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ
Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ
Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ
Bengaluru: ಠಾಣೆಯಲ್ಲೇ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
HD Revanna ಫಾರ್ಮ್ ಹೌಸ್ನಲ್ಲಿ ಎಸ್ಐಟಿ ತಂಡ ಪರಿಶೀಲನೆ
Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ