ಐಟಿ ದಾಳಿ ಅನುಮಾನ ಮೂಡಿಸಿದೆ: ನ್ಯಾ. ಸಂತೋಷ್ ಹೆಗ್ಡೆ ಹೇಳಿದ್ದೇನು?
Team Udayavani, Aug 2, 2017, 2:57 PM IST
ಚಿತ್ರದುರ್ಗ : ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿರಿಸಿ ಬುಧವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ಭಾರೀ ದಾಳಿಯ ಬಗ್ಗೆ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಅನುಮಾನ ವ್ಯಕ್ತ ಪಡಿಸಿದ್ದಾರೆ.
ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ನ್ಯಾ.ಹೆಗ್ಡೆ ”ಖಚಿತ ಮಾಹಿತಿ ಇದ್ದು ದಾಳಿ ಮಾಡಿದರೆ ತಪ್ಪಲ್ಲ , ಅಧಿಕೃತ ಮಾಹಿತಿ ಇದ್ದು ಕಾನೂನು ಪ್ರಕಾರ ದಾಳಿ ಮಾಡುವುದು ಸರಿ, ಆದರೆ ಸಮಯ ನೋಡಿದರೆ ಯಾವುದೋ ಒಂದು ಉದ್ದೇಶ ಇದೆ ಎಂದು ಕಾಣುತ್ತದೆ” ಎಂದರು.
”ದಾಳಿ ಚರ್ಚೆಗೆ ಎಡೆ ಮಾಡಿ ಕೊಟ್ಟಿದೆ.ನೀವೆ ಹೇಳಿದಂತೆ ಯಾರದ್ದೋ ಮನೆಯಲ್ಲಿ 11 ಕೋಟಿ ಸಿಕ್ಕಿದೆ ಅಂತ. ಅದರ ಅರ್ಥ ದಾಳಿ ಮಾಡಿದವರಿಗೆ ಮಾಹಿತಿ ಇತ್ತು ಎನ್ನುವುದಲ್ಲವೆ” ಎಂದು ಪ್ರಶ್ನಿಸಿದರು.
‘ರೆಸಾರ್ಟ್ ಸಂಸ್ಕೃತಿ ಪ್ರಾರಂಭಿಸಿದ್ದು ಬಿಜೆಪಿ, ಈಗ ಕಾಂಗ್ರೆಸ್ ಶುರು ಮಾಡಿದೆ’ ಎಂದು ಕಿಡಿ ಕಾರಿದರು.
ಆಪರೇಷನ್ ಕಮಲ ಭೀತಿಯಿಂದ ಗುಜರಾತ್ನ ಕಾಂಗ್ರೆಸ್ ಶಾಸಕರು ತಂಗಿದ್ದ ಬಿಡದಿಯ ಈಗಲ್ ಟನ್ ರೆಸಾರ್ಟ್ ಸೇರಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ್ದ 36 ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ; ವಿಡಿಯೋ ವೈರಲ್
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್ ಭಾಗಿ ಅನುಮಾನ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್ ʼರಾಯನ್ʼ ಬಿಡುಗಡೆಗೆ ಪ್ಲ್ಯಾನ್
AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಯ್ಕೆ