ಹರ್ಮನ್ಪ್ರೀತ್ ಡಿಎಸ್ಪಿಯಾಗಿ ನೇಮಕ
Team Udayavani, Aug 3, 2017, 7:35 AM IST
ಚಂಡೀಗಢ: ಐಸಿಸಿ ವನಿತಾ ವಿಶ್ವಕಪ್ನ ಸೆಮಿಫೈನಲ್ನಲ್ಲಿ ಬಲಿಷ್ಠ ಆಸ್ಟ್ರೇಲಿಯ ವಿರುದ್ಧ ಅಮೋಘ ಶತಕ ಸಿಡಿಸಿದ್ದ ಹರ್ಮನ್ಪ್ರೀತ್ ಕೌರ್ ಅವರಿಗೆ ಡಿಎಸ್ಪಿ ಹುದ್ದೆ ನೀಡಲು ಪಂಜಾಬ್ ಸರಕಾರ ನಿರ್ಧರಿಸಿದೆ.
ಕೌರ್ ಬುಧವಾರ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಭೇಟಿ ಮಾಡಿದರು. ಕೌರ್ ಅವರನ್ನು ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಡಿಎಸ್ಪಿ) ಆಗಿ ನೇಮಕ ಮಾಡಲು ಅಗತ್ಯವಿರುವ ವಿಧಾನಗಳನ್ನು ಪೂರ್ತಿಗೊಳಿಸುವಂತೆ ರಾಜ್ಯದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸುರೇಶ್ ಅರೋರ ಅವರಿಗೆ ಮುಖ್ಯಮಂತ್ರಿ ಅಮರಿಂದರ್ ನಿರ್ದೇಶ ನೀಡಿದರು. ಪ್ರತಿಭಾನ್ವಿತ ಯುವ ಆಟಗಾರ್ತಿಯಾಗಿರುವ ಕೌರ್ ಪಂಜಾಬ್ನಲ್ಲಿಯೇ ಇರಬೇಕೆನ್ನುವುದು ನಮ್ಮ ಬಯಕೆ ಎಂದವರು ಹೇಳಿದರು. ಕೌರ್ ಸದ್ಯ ರೈಲ್ವೇಸ್ನಲ್ಲಿ ಉದ್ಯೋಗದಲ್ಲಿದ್ದಾರೆ.
ಕೌರ್ ಅವರ ಸಾಧನೆಯನ್ನು ಕೊಂಡಾಡಿದ ಅಮರಿಂದರ್ ಅವರು ಈ ಸಂದರ್ಭದಲ್ಲಿ 5 ಲಕ್ಷ ರೂ.ಗಳ ಚೆಕ್ ಅನ್ನು ಕೌರ್ಗೆ ನೀಡಿದರು. ವಿಶ್ವಕಪ್ ಕೂಟದ ಸೆಮಿಫೈನಲ್ನಲ್ಲಿ ಕೌರ್ 115 ಎಸೆತಗಳಲ್ಲಿ ಅಜೇಯ 171 ರನ್ ಸಿಡಿಸಿದ್ದರು. ಅವರ ಈ ಸಾಧನೆಯಿಂದ ಭಾರತ ಫೈನಲ್ ತಲುಪುವಂತಾಯಿತು.
ಕೌರ್ ಅವರನ್ನು ಪೊಲೀಸ್ ಇಲಾಖೆಗೆ ಸೇರ್ಪಡೆ ಮಾಡಿದ ಬಳಿಕ ಕ್ರಿಕೆಟ್ ತಂಡವೊಂದನ್ನು ರಚಿಸಲಾಗುವುದು ಎಂದು ಅರೋರ ಈ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ