ಉಗ್ರನ ಮೃತದೇಹ ಕೊಂಡು ಹೋಗಿ: ಪಾಕ್ಗೆ ಭಾರತ
Team Udayavani, Aug 3, 2017, 10:00 AM IST
ಶ್ರೀನಗರ: ಮಂಗಳವಾರ ಕಾಶ್ಮೀರ ಪುಲ್ವಾಮಾದಲ್ಲಿ ಮಹತ್ವದ ಎನ್ಕೌಂಟರ್ಗೆ ಬಲಿಯಾದ ಲಷ್ಕರ್ ಉಗ್ರ ಅಬು ದುಜಾನಾ ಮೃತದೇಹವನ್ನು ಕೊಂಡುಹೋಗುವಂತೆ ಪಾಕಿಸ್ಥಾನ ಹೈಕಮಿಷನ್ಗೆ ಕೇಂದ್ರ ಗೃಹ ಇಲಾಖೆ ತಿಳಿಸಲಿದೆ. ಹೀಗೆಂದು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ದುಜಾನಾ ಪಾಕ್ ಪ್ರಜೆಯಾದ ಕಾರಣ ಅವನ ಶವವನ್ನು ಅಲ್ಲಿಗೆ ಕಳುಹಿಸಲು ನಿರ್ಧರಿಸಲಾಗಿದೆ. ಆದರೆ, ಕಣಿವೆ ರಾಜ್ಯದಲ್ಲಿ ಈ ಹಿಂದೆಯೂ ಅನೇಕ ಪಾಕ್ ಮೂಲದ ಉಗ್ರರು ಹತ್ಯೆಗೀಡಾಗಿದ್ದರೂ ಮೃತದೇಹ ಕೊಂಡುಹೋಗುವಂತೆ ಪಾಕಿಸ್ಥಾನಕ್ಕೆ ಕೋರುತ್ತಿರುವುದು ಇದೇ ಮೊದಲು ಎನ್ನಲಾಗಿದೆ.
ಇದೇ ವೇಳೆ, ಮಂಗಳವಾರದ ಎನ್ಕೌಂಟರ್ ವೇಳೆ ಪ್ರತಿಭಟಿಸಲು ಮುಂದಾಗಿ ಗಾಯಗೊಂಡಿದ್ದ ಪ್ರತ್ಯೇಕತಾವಾದಿ ಗುಂಪಿನ ಸದಸ್ಯ ಬುಧವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಬರ್ಪೂರ ನಿವಾಸಿ ಅಖೀಲ್ ಅಹಮ್ಮದ್ ಭಟ್ ಸಾವನ್ನಪ್ಪಿದ ವ್ಯಕ್ತಿ. ದುಜಾನಾ ಹತ್ಯೆ ಬಳಿಕ ಜಂಟಿ ಕಾರ್ಯಾಚರಣೆ ನಡೆಸಿದ ಗಡಿ ಭದ್ರತಾ ಪಡೆ ಹಾಗೂ ಪೊಲೀಸರ ವಿರುದ್ಧವೇ ಗುಂಪು ಪ್ರತಿಭಟಿಸಿ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಪೊಲೀಸರು ಅಶ್ರುವಾಯು ಹಾಗೂ ಗುಂಡಿನ ದಾಳಿ ನಡೆಸಿತ್ತು. ಘಟನೆಯಲ್ಲಿ ಗಾಯಗೊಂಡು ಸಾವನ್ನಪ್ಪಿರುವವರಲ್ಲಿ ಅಖೀಲ್ ಎರಡನೆಯವರಾಗಿದ್ದಾರೆ. ಫಿರ್ದೋಸ್ ಎಂಬವರು ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು. ಎನ್ಕೌಂಟರ್ ಬಳಿಕ ಪುಲ್ವಾಮಾ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕಾಶ್ಮೀರ ವಿಚಾರ ಸೇರಿದಂತೆ ಎಲ್ಲದರಲ್ಲೂ ಚೀನ ಸದಾ ಬೆಂಬಲ ನೀಡುತ್ತಿರುವುದಕ್ಕೆ ನಾವು ಚಿರಋಣಿಗಳಾಗಿದ್ದೇವೆ.
– ಜ. ಖಮರ್ ಜಾವೇದ್ ಬಾಜ್ವಾ, ಪಾಕ್ ಸೇನಾ ಮುಖ್ಯಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು