ನೀರು ಕೇಳಿದವರಿಗೆ ಹಾಲು ನೀಡಿದ ಸಂಸ್ಕೃತಿ ನಮ್ಮದು


Team Udayavani, Aug 3, 2017, 8:16 AM IST

03-YAD-1.jpg

ಶಹಾಪುರ: ಕಾಯಕ ಸಂಸ್ಕೃತಿ ಆಚರಣೆ ಮೂಲಕ ಕೆಲಸದಲ್ಲಿ ಸಂತೃಪ್ತಿ ಜೊತೆಗೆ ದೈವಾನುಭೂತಿ ಹೊಂದಿದ ಹಾಲುಮತ ಸಮಾಜ ನೀರು ಕೇಳಲು ಬಂದವರಿಗೆ ಹಾಲುಕೊಟ್ಟು ಬೆಳೆಸಿದ ಕೀರ್ತಿ ಸಲ್ಲುತ್ತದೆ ಎಂದು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಕಲಬುರಗಿ ವಿಭಾಗದ ಪೀಠಾಧ್ಯಕ್ಷ ಸಿದ್ಧರಾಮಾನಂದ ಮಹಾಸ್ವಾಮೀಜಿ ಹೇಳಿದರು.

ನಗರದ ಹಳೆಪೇಟೆಯ ವಗ್ಗರಾಯಣ್ಣ ಶರಣನ ಸನ್ನಿಧಾನದ ಆವರಣದಲ್ಲಿ 9 ನೇ ವರ್ಷದ ಹಸಿರು ಮತ್ತು ಹಾಲುಮತ ಸಂಸ್ಕೃತಿ ಜಾಗೃತಿ ಯಾತ್ರೆಗೆ ಚಾಲನೆ ನೀಡಿ, ನಂತರ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ಸಮಾಜದ ಆರಾಧ್ಯ ದೇವರಾದ ಶ್ರೀ ಮಾಳಿಂಗರಾಯ, ಬೀರ ದೇವರು, ದಾರ್ಶನಿಕ ಕನಕದಾಸರಂಥ ದಾಸ ಶ್ರೇಷ್ಠರ ಪರಂಪರೆ ಹೊಂದಿದ ಹಾಲುಮತ ಸಮುದಾಯ ಮನುಷ್ಯ ಸಂಸ್ಕೃತಿ ಕಾಳಜಿ ಮತ್ತು ಜೀವ ಸಂಕುಲದ ಉಸಿರಾಗಿರುವ ನಿಸರ್ಗ ರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಮನುಷ್ಯತ್ವಕ್ಕಾಗಿ ಸಂಸ್ಕೃತಿ ಮುಖ್ಯವಾಗಿದ್ದು, ಪ್ರತಿಯೊಬ್ಬರು ಇಂದಿನ ಹೊಸ ಸಮಾಜದಲ್ಲಿ ಸದಾಚಾರ ಸಂಪನ್ನರಾಗಬೇಕು. ಕ್ಷಮಾಗುಣ, ಸ್ಪಂಧನಾಗುಣ, ಪ್ರೀತಿ ವಿಶ್ವಾಸ ಮತ್ತು ನಂಬಿದ ದೈವ ದೇವರಲ್ಲಿ ಶ್ರದ್ಧೆ ಭಕ್ತಿಯನಿಟ್ಟು ಮುನ್ನಡೆಯಬೇಕು ಎಂದರು. ಇದೇ ಸಂದರ್ಭದಲ್ಲಿ ಶ್ರೀಗಳು ಸಸಿಗಳನ್ನು ವಿತರಿಸಿ ಅವುಗಳ ರಕ್ಷಣೆ ಮಾಡುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕನಕಗುರು ಪೀಠದ ನಿಂಗಬೀರ ದೇವರು, ನಗರದ ಸಿದ್ಧರಾಮಯ್ಯ ಗುರುವಿನ, ಕುರುಬ ಸಮಾಜದ ಹಿರಿಯ ಮುಖಂಡರಾದ ಬಸವರಾಜ ವಿಭೂತಿಹಳ್ಳಿ, ಮಾಜಿ ಎಂ.ಎಲ್‌ .ಸಿ ಅಮಾತೆಪ್ಪ ಕಂದಕೂರ, ರೈತ ಮುಖಂಡ ಶರಣಪ್ಪ ಸಲಾದಪುರ, ಡಾ| ಭೀಮಣ್ಣ ಮೇಟಿ, ತಾಲೂಕು ಕುರುಬ ಸಮಾಜದ ಅಧ್ಯಕ್ಷ ಸಾಯಬಣ್ಣ ಹೊರಕೇರಿ, ಮುಖಂಡ ವಿಠಲ ವಗ್ಗಿ, ಶಾಂತಗೌಡ ನಾಗನಟಿಗಿ, ಯಮನಪ್ಪ ಭಪ್ಪರಗಿ, ಮಲ್ಲಿಕಾರ್ಜುನ ಕಂದಕೂರು, ಅಯ್ಯಣ್ಣ ಇನಾಂದಾರ, ಮಾನಪ್ಪ ಅರಿಕೇರಿ
ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೂ ಮುಂಚೆ ನಗರದ ಸಿ.ಬಿ.ಕಮಾನದಿಂದ ರಾಯಣ್ಣ ದೇವರ ಸನ್ನಿಧಾನದವರೆಗೂ ಯಾತ್ರಾ ಮೆರವಣಿಗೆ ಜರುಗಿತು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.