ವಯಸ್ಸಾದ ಮಾವಿನ ಮರಗಳ ಪುನಃಶ್ಚೇತನಕ್ಕೆ ಕಾರ್ಯಾಗಾರ


Team Udayavani, Aug 3, 2017, 11:46 AM IST

mango.jpg

ಬೆಂಗಳೂರು: ಅಧಿಕ ಇಳುವರಿ ಮತ್ತು ಗುಣಮಟ್ಟದ ಮಾವು ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಾವಿನ ಮರಗಳ ಪುನಃಶ್ಚೇತನಕ್ಕಾಗಿ ವೈಜ್ಞಾನಿಕ ತರಬೇತಿ ಮತ್ತು ಕಾರ್ಯಾಗಾರವನ್ನು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಡೆಸಲಿದೆ.

ಮಾವು ಬೆಳೆಗಾರರು ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಉತ್ಪಾದನೆ ಹೆಚ್ಚಿಸಬೇಕು ಎಂಬ ಉದ್ದೇಶದಿಂದ ಕಾರ್ಯಕ್ರಮವನ್ನು ನಿಗಮ ಆಯೋಜಿಸುತ್ತಿದೆ. ರಾಜ್ಯದ ಸುಮಾರು ಶೇ.95ರಷ್ಟು ಮಳೆಯಾಶ್ರೀತ ಮಾವಿನ ತೋಟಗಳಿವೆ. ಪ್ರಸ್ತುತ ಹಳೆಯ ತೋಟಗಳು ಹೆಚ್ಚು ಇದ್ದು, ಪುನಃಶ್ವೇತನದ ಅವಶ್ಯಕತೆ ಇದೆ. ಈ ಕುರಿತು ಮಾವು ಬೆಳೆಗಾರರನ್ನು ಸಂಪರ್ಕಿಸಿ, ತರಬೇತಿ ಮತ್ತು ಕಾರ್ಯಗಾರ ನಡೆಸುತ್ತಿರುವುದಾಗಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಬೆಳಗಾವಿ, ಹಾವೇರಿ, ಕೊಪ್ಪಳ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಶ್ರೀನಿವಾಸಪುರ, ಮುಳಬಾಗಿಲು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಮಾವು ಬೆಳೆಗಾರರನ್ನು ಸಂಪರ್ಕಿಸಿ ಇಳುವರಿ ಹೆಚ್ಚಿಸಲು ಮಾಹಿತಿ ನೀಡಲಾಗುವುದು. ಹಳೆಯ ಮಾವಿನ ಮರಗಳಲ್ಲಿ ಅನಾವಶ್ಯಕವಾಗಿ ಬೆಳೆದ ರೆಂಬೆ-ಕೊಂಬೆಗಳನ್ನು ಕತ್ತರಿಸುವುದು. ಮಣ್ಣು ಮತ್ತು ನೀರಿನ ಸಂರಕ್ಷಣೆ ಹೆಚ್ಚಿಸುವುದು, ಕಾಂಡಕ್ಕೆ ರಕ್ಷಕ ಪೇಸ್ಟ್‌ನ್ನು ಬಳಸುವುದು ಹಾಗೂ ಕೀಟರೋಗ ನಿವಾರಣೆ ಮಾಡುವುದು ಪುನಶ್ಚೇತನ ಕಾರ್ಯಕ್ರಮದ ಪ್ರಮುಖ ವಿಷಯವಾಗಿದೆ ಎಂದು ಅವರು ಹೇಳಿದರು.

ಹೊಸ ತಳಿ ಕಸಿ: ಜೂನ್‌ ಅಂತ್ಯದ ವೇಳೆಗೆ ಈ ವರ್ಷದ ಮಾವು ಕೊಯ್ಲು ಮುಗಿದಿದ್ದು, ಜುಲೈನಿಂದಲೇ ಪುನಃಶ್ಚೇತನ ಕಾರ್ಯ ಕೈಗೊಳ್ಳಲಾಗಿದೆ. ಆಗಸ್ಟ್‌ ತಿಂಗಳ ಅಂತ್ಯದೊಳಗೆ ಪುನಃಶ್ಚೇತನ ಕಾರ್ಯ ಪೂರ್ಣಗೊಳಿಸಿದರೆ, ಅಕ್ಟೋಬರ್‌, ನವೆಂಬರ್‌ ವೇಳೆಗೆ ಮಾವು ಹೂವು ಬಿಡಲು ಪ್ರಾರಂಭಿಸುತ್ತದೆ. ಉಳಿಸಿಕೊಳ್ಳಲು ಸಾಧ್ಯವಿರುವ ಮರಗಳ ರೆಂಬೆಗಳನ್ನು ಸಂಪೂರ್ಣವಾಗಿ ಕತ್ತರಿಸಿ, ಅದೇ ತಳಿಯ ಮಾವು ಬೇಕಿದ್ದರೆ, ಅದನ್ನೇ ಚಿಗುರಲು ಬಿಡಬಹುದು. ಒಂದು ವೇಳ ಆ ತಳಿಯ ಮಾವು ಬೇಡವಾದರೆ ಕೊಂಬೆಗಳನ್ನು ಕತ್ತರಿಸಿ ಅದಕ್ಕೆ ಕಸಿ ಮಾಡಬಹುದು. ಮರಗಳು ಮುದಿಯಾಗಿದ್ದು, ಒಣಗಿದ್ದರೆ ಬುಡಸಮೇತ ತೆಗೆಸಿ, ಹೊಸ ಸಸಿಗಳನ್ನು ನೆಡಲಾಗುವುದು ಎಂದರು. 

ನರೇಗಾ ನೆರವು: ಪ್ರಾರಂಭಿಕ ವರ್ಷದಲ್ಲಿ 10 ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಟ್ಟಿದೆ. ಆರ್‌ಕೆವಿವೈ ಮತ್ತು ನರೇಗಾದ ನೆರವಿನೊಂದಿಗೆ ಮಾವು ಪುನಃಶ್ಚೇತನ ಕಾರ್ಯ ನಡೆಯಲಿದೆ. ರೈತರು ಹಾಗೂ ಬೆಳೆ ಆಯ್ಕೆಯ ಕುರಿತು ಮಾರ್ಗಸೂಚಿ ತಯಾರಿಸಲಾಗುತ್ತಿದೆ. ಮಾವಿನ ಸಸಿ ನೆಟ್ಟು 15 ವರ್ಷ ಮೇಲ್ಪಟ್ಟಿರಬೇಕು. ಸರಿಯಾದ ಫಸಲು ಕೊಡದಿರಬೇಕು. ಅಂತಹ ಮಾವನ್ನು ಪುನಃಶ್ಚೇತನಗೊಳಿಸಲು ರೈತರಿಗೆ ಅಗತ್ಯ ಆರ್ಥಿಕ ನೆರವು ನೀಡಲಾಗುವುದು. ಈಗಾಗಲೇ ಬೆಳೆ ವ್ಯಾಪ್ತಿಯ ಪ್ರಮಾಣವನ್ನೂ ಗುರುತಿಸಲಾಗಿದೆ ಎಂದು ಗೋಪಾಲಕೃಷ್ಣ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ನಿಗಮದ ಉಪಾಧ್ಯಕ್ಷ ರಾಜ್‌ಕುಮಾರ್‌, ವ್ಯವಸ್ಥಾಪಕ ನಿರ್ದೇಶಕ ಕದಿರೇಗೌಡ ಇದ್ದರು. 

ಟಾಪ್ ನ್ಯೂಸ್

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.