ಸರಕಾರಿ ಮದ್ಯದಂಗಡಿಗೆ ಪರವಾನಿಗೆ ನೀಡಲು ಆಗ್ರಹ


Team Udayavani, Aug 4, 2017, 2:55 AM IST

Madyadangadi-3-8.jpg

ವೇಣೂರು: ಗುಂಡೂರಿ ಗ್ರಾಮದಲ್ಲಿ ಅಂಗಡಿ, ಮನೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಇಂತಹ ಕಳಪೆ ಗುಣಮಟ್ಟದ ಮದ್ಯದಿಂದ ಇದನ್ನು ಕುಡಿದವರ ಆರೋಗ್ಯ ಹದಗೆಟ್ಟಿದೆ. ಈ ರೀತಿಯ ಮಾರಾಟಕ್ಕೆ ಅವಕಾಶ ನೀಡುವುದರ ಬದಲು ಅಧಿಕೃತ ಮದ್ಯದಂಗಡಿಗೆ ಅನುಮತಿ ನೀಡುವುದೇ ಲೇಸು. ಹಾಗಾಗಿ ಗುಂಡೂರಿ ಗ್ರಾಮದ ತುಂಬೆದಲ್ಕೆಯಲ್ಲಿ ಗ್ರಾಮಸ್ಥರ ಬಹುದಿನದ ಬೇಡಿಕೆಯಾದ ಅಧಿಕೃತ ಸರಕಾರಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬೇಕೆಂದು ಕೋರಿ ದ.ಕ. ಜಿಲ್ಲಾಧಿಕಾರಿಗಳಿಗೆ ಗುಂಡೂರಿ ಗ್ರಾಮಸ್ಥರು ಗ್ರಾಮಸಭೆಯಲ್ಲಿ ಲಿಖೀತ ಮನವಿ ಸಲ್ಲಿಸಿದ ವಿದ್ಯಮಾನ ಆರಂಬೋಡಿ ಗ್ರಾಮ ಪಂಚಾಯತ್‌ನ ಗ್ರಾಮಸಭೆಯಲ್ಲಿ ನಡೆಯಿತು. ಆರಂಬೋಡಿ ಗ್ರಾ.ಪಂ.ನ 2017-18ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಆ.1ರಂದು ಗ್ರಾ.ಪಂ. ಅಧ್ಯಕ್ಷ ಪ್ರಭಾಕರ ಎಚ್‌. ಅವರ ಅಧ್ಯಕ್ಷತೆಯಲ್ಲಿ ಗುಂಡೂರಿ ಶ್ರೀ ಸತ್ಯನಾರಾಯಣ ಭಜನ ಮಂದಿರದಲ್ಲಿ ಜರಗಿತು.

ಗುಂಡೂರಿ ಗ್ರಾಮದಲ್ಲಿ ಹಲವು ವರ್ಷಗಳಿಂದಅಕ್ರಮವಾಗಿ ನಡೆಯುತ್ತಿರುವ ಅಕ್ರಮ ಮದ್ಯಮಾರಾಟವನ್ನು ತಡೆಯುವಲ್ಲಿ ಅಬಕಾರಿ ಇಲಾಖೆ ವಿಫ‌ಲವಾಗಿದೆ. ಕಳಪೆ ಗುಣಮಟ್ಟದ ಮದ್ಯದಿಂದ ಆರೋಗ್ಯ ಹದಗೆಡುತ್ತಿದೆ. ಈ ಬಗ್ಗೆ ಬೆಳ್ತಂಗಡಿ ಅಬಕಾರಿ ವೃತ್ತ ನಿರೀಕ್ಷಕರಿಗೆ, ಜಿಲ್ಲಾ ಅಬಕಾರಿ ಇಲಾಖೆಗೆ ಹಾಗೂ ದ.ಕ. ಜಿಲ್ಲಾಧಿಕಾರಿಗಳಿಗೂ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಇದರಿಂದ ಹತಾಶರಾಗಿರುವ ನಾವು ಅಧಿಕೃತ ಸರಕಾರಿ ಮದ್ಯದಂಗಡಿ ನಿರ್ಮಿಸಲು ಗುಂಡೂರಿ ಗ್ರಾಮದಲ್ಲಿ ಅನುಮತಿ ನೀಡಬೇಕೆಂದು ಒತ್ತಾಯಿಸುತ್ತಿದ್ದೇವೆ ಎಂದು ಕೆಲವು ಗ್ರಾಮಸ್ಥರು ಹೇಳಿದರು.

ಪರ – ವಿರೋಧ
ಗುಂಡೂರಿ ಶ್ರೀ ಗುರುಚೈತನ್ಯ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಹೊನ್ನಯ್ಯ ಕಾಟಿಪಳ್ಳ ಅವರ ನೇತೃತ್ವದಲ್ಲಿ ದ.ಕ. ಜಿಲ್ಲಾಧಿಕಾರಿಯವರಿಗೆ ಗ್ರಾ.ಪಂ. ಅಧ್ಯಕ್ಷರ ಮೂಲಕ ಲಿಖೀತ ಮನವಿ ನೀಡಲಾಯಿತು. ಇದಕ್ಕೆ ಗ್ರಾಮಸಭೆಯಲ್ಲಿ ಪರ -ವಿರೋಧ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಂಬರುವ 15 ದಿನಗಳೊಳಗೆ ಅಬಕಾರಿ ಮತ್ತು ಪೊಲೀಸರ ಸಂಪರ್ಕ ಸಭೆಯನ್ನು ಗುಂಡೂರಿಯಲ್ಲಿ ಆಯೋಜಿಸುವುದಾಗಿ ನಿರ್ಣಯ ಕೈಗೊಳ್ಳಲಾಯಿತು.

ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು
ಇತ್ತೀಚೆಗೆ ಕಳವಾದ ಗುಂಡೂರಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ದೇವರ ಬೆಳ್ಳಿಪ್ರತಿಮೆಯ ತನಿಖೆಯನ್ನು ಪೊಲೀಸರು ತೀವ್ರಗತಿಯಲ್ಲಿ ನಡೆಸ ಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ‘ಘಟನೆ ವೇಳೆ ಕೇವಲ ಇಬ್ಬರು ಪೊಲೀಸರು ತನಿಖೆ ನಡೆಸಿದ್ದಾರೆ. ಪೊಲೀಸ್‌ ಉಪ ನಿರೀಕ್ಷಕರು ಸ್ಥಳಕ್ಕೆ ಬಂದು ಸ್ಥಳ ತನಿಖೆ ಮಾಡಿಲ್ಲ ಎಂದು ಭಜನಾ ಮಂಡಳಿ ಕಾರ್ಯದರ್ಶಿ, ಪಂ. ಸದಸ್ಯ ರಮೇಶ್‌ ಪೂಜಾರಿ ಪಡ್ಡಾಯಿಮಜಲು ದೂರಿದರು. ಈ ಬಗ್ಗೆ ಸೂಕ್ತ ತನಿಖೆಗೆ ದ.ಕ. ಪೊಲೀಸ್‌ ವರಿಷ್ಠಾಧಿಕಾರಿಗೆ ಗ್ರಾ.ಪಂ. ವತಿಯಿಂದ ಲಿಖೀತ ಮನವಿ ನೀಡಲು ಗ್ರಾ.ಪಂ. ನಿರ್ಣಯ ಕೈಗೊಂಡಿತು.

ಅಭಿವೃದ್ಧಿ ಕಾಮಗಾರಿಗಳಿಗೆ ಮನವಿ 
ಆರಂಬೋಡಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕುಟುಂಬಗಳಿಗೆ ಶವಸಂಸ್ಕಾರ ನಡೆಸಲು ರುದ್ರಭೂಮಿಗೆ ಜಾಗ ಕಾಯ್ದಿರಿಸಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಆರಂಬೋಡಿ ಶಾಖೆ ಸಂಚಾಲಕ ಸುರೇಶ್‌ ಎಚ್‌. ಅವರು ಸಭೆಯಲ್ಲಿ ಲಿಖೀತ ಮನವಿ ನೀಡಿ ಒತ್ತಾಯಿಸಿದರು. ಅಂಗರಕರಿಯ ಪ.ಜಾತಿ ಕಾಲನಿಗೆ ಕಾಂಕ್ರಿಟ್‌ ರಸ್ತೆ, ದಾರಿದೀಪ, ನಿವೇಶನ ವ್ಯವಸ್ಥೆ, ನೀರಪಲ್ಕೆಯಿಂದ ಸೋಲಾರ್‌ ದಾರಿದೀಪದ ವ್ಯವಸ್ಥೆ, ಕೈರೋಡಿ ರಸ್ತೆಗೆ ಕಾಂಕ್ರಿಟ್‌ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತಾಯಿಸಿ ಅವರು ಮನವಿ ಸಲ್ಲಿಸಿದರು.

ಸಂತಾಪ
ಆರಂಬೋಡಿ ಗ್ರಾ.ಪಂ.ನ ತಾತ್ಕಾಲಿಕ ನೀರು ಸರಬರಾಜು ಸಿಬಂದಿ ನಾರಾಯಣ ಹಾಗೂ ವೇಣೂರು ಗ್ರಾ.ಪಂ.ನ ಡಾಟಾ ಎಂಟ್ರಿ ಆಪರೇಟರ್‌ ಪುಷ್ಪಾವತಿ ಅವರ ಅಕಾಲಿಕ ನಿಧನಕ್ಕೆ ಸಭೆಯಲ್ಲಿ ಸಂತಾಪ ಸೂಚಿಸಿ ಮೌನ ಪ್ರಾರ್ಥನೆ ನಡೆಸಲಾಯಿತು. ಸಭೆಯಲ್ಲಿ ಆರಂಬೋಡಿ ಗ್ರಾ.ಪಂ. ಉಪಾಧ್ಯಕ್ಷೆ ಆಶಾ ಎಸ್‌. ಶೆಟ್ಟಿ, ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್‌, ತಾ.ಪಂ. ಸದಸ್ಯ ಓಬಯ್ಯ ಆರಂಬೋಡಿ, ಗುಂಡೂರಿ ಗ್ರಾಮದ ಸದಸ್ಯರಾದ ಹರೀಶ್‌ ಕುಮಾರ್‌, ರಮೇಶ್‌ ಪಡ್ಡಾಯಿಮಜಲು, ಗೋಪಾಲ ಕುಳಾಯಿ ಭವಿತಾ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಪಂ. ಅಭಿವೃದ್ಧಿ ಅಧಿಕಾರಿ ಗಣೇಶ್‌ ಶೆಟ್ಟಿ ಸ್ವಾಗತಿಸಿ ಸಭೆಯನ್ನು ನಿರ್ವಹಿಸಿದರು. ಪಂ. ಕಾರ್ಯದರ್ಶಿ ಸೋಮಶೇಖರ ವರದಿ ಮಂಡಿಸಿ ಪಂಚಾಯತ್‌ ಸದಸ್ಯ ಹರೀಶ್‌ ಕುಮಾರ್‌ ಪೊಕ್ಕಿ ವಂದಿಸಿದರು. ಪಂ. ಸಿಬಂದಿ ಸಹಕರಿಸಿದರು. ಸಭೆಯ ನೋಡಲ್‌ ಅಧಿಕಾರಿಯಾಗಿ ವೇಣೂರು ಪಶು ವೈದ್ಯಾಧಿಕಾರಿ ಡಾ| ವಿನಯ್‌ ಕುಮಾರ್‌ ಸಭೆಯನ್ನು ನಡೆಸಿಕೊಟ್ಟರು.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.