ಬೋರಾಪುರದ ದಿನಗಳು: ಭಗ್ನ ಪ್ರೇಮಿಯ ಪ್ರೇಮ ಪುರಾಣ


Team Udayavani, Aug 4, 2017, 8:36 AM IST

04-SUCHI-4.jpg

“ಡೇಸ್‌ ಆಫ್ ಬೋರಾಪುರ’ – ಟೈಟಲ್‌ ಕೇಳಿದಾಗ ಇದು ಯಾವ ಭಾಷೆಯ ಚಿತ್ರವೆಂದು ನಿಮಗೆ ಕನ್‌ಫ್ಯೂಸ್‌ ಆಗಬಹುದು. ಸಂದೇಹ ಬೇಡ, ಇದು ಪಕ್ಕಾ ಕನ್ನಡದ ಸಿನಿಮಾ. ಬೋರಾಪುರ ಎಂಬ ಹಳ್ಳಿಯಲ್ಲಿ ನಡೆಯುವ ಘಟನೆಗಳನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆ ನಡೆಯಿತು. ಶಿವರಾಜಕುಮಾರ್‌ ಆಡಿಯೋ ರಿಲೀಸ್‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರತಂಡ ಹಾಡುಗಳ ಪ್ರದರ್ಶನ ಕೂಡಾ ಮಾಡಿತು.

ಎನ್‌. ಆದಿತ್ಯ ಈ ಚಿತ್ರದ ನಿರ್ದೇಶಕರು. ಮಧು ಬಸವರಾಜ್‌ ಹಾಗೂ ಅಜಿತ್‌ ಕುಮಾರ್‌ ಈ ಚಿತ್ರದ ನಿರ್ಮಾಪಕರು. ಐಟಿ ಹಿನ್ನೆಲೆಯಿಂದ ಬಂದ ನಿರ್ಮಾಪಕರು ಸಿನಿಮಾವನ್ನು ಮಗುವಂತೆ ಪ್ರೀತಿಸಿ ಚಿತ್ರೀಕರಣ ಮಾಡಿದ್ದಾಗಿ ಹೇಳಿಕೊಂಡರು.  “ಬೋರಾಪುರ’ದಲ್ಲಿ ಏನಿದೆ ಎಂದರೆ ಇಲ್ಲಿ ಲವ್‌ ಇದೆ, ಸೆಂಟಿಮೆಂಟ್‌ ಇದೆ ಹಾಗೂ ದಿನನಿತ್ಯದ ಜೀವನ ಶೈಲಿಯನ್ನು ಇಲ್ಲಿ ಹೇಳಲಾಗಿದೆ. 

ಚಿತ್ರದಲ್ಲಿ ಪ್ರಶಾಂತ್‌, ಸೂರ್ಯ, ಸಿದ್ಧಾರ್ಥ, ಪ್ರಕೃತಿ, ಅಮಿತಾ, ಅನಿತಾ ಭಟ್‌ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ದಿನೇಶ್‌ ಮಂಗಳೂರು, ರಘು ಪಾಂಡೇಶ್ವರ್‌ ಕೂಡಾ ನಟಿಸಿದ್ದಾರೆ. ನಾಯಕ ಪ್ರಶಾಂತ್‌ ಇಲ್ಲಿ  ಭಗ್ನಪ್ರೇಮಿಯಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಸಿನಿಮಾದಲ್ಲಿ ಅವರು ನಾಯಕಿಯನ್ನು ಸ್ಪರ್ಶಿಸುವುದಿಲ್ಲವಂತೆ. ಆ ತರಹದ ಒಂದು ಪಾತ್ರ ವಿಭಿನ್ನ ಪಾತ್ರ ಅವರಿಗೆ ಸಿಕ್ಕಿದೆಯಂತೆ. ಚಿತ್ರದ ಸಂಭಾಷಣೆಯನ್ನು ಅರ್ಥಮಾಡಿಕೊಂಡರೆ ಮಾತ್ರ ಇಡೀ ಸಿನಿಮಾ ಅರ್ಥವಾಗುತ್ತದೆಯಂತೆ. ಚಿತ್ರದಲ್ಲಿ ಅಮಿತಾ ಕೂಡಾ ನಟಿಸಿದ್ದು, ಅವರಿಲ್ಲಿ ಭಾಗ್ಯ ಎಂಬ ಪಾತ್ರ ಮಾಡಿದ್ದಾರಂತೆ. ಇಲ್ಲಿ ತುಂಬಾ ಮೆಚುರ್‌ ಪಾತ್ರ ಸಿಕ್ಕಿದೆ ಎಂಬುದು ಅಮಿತಾ ಅವರ ಮಾತು. ಚಿತ್ರದಲ್ಲಿ ಪ್ರಕೃತಿ ಎನ್ನುವವರು ಕೂಡಾ ನಟಿಸಿದ್ದು, ನಟನೆಗೆ ಅವಕಾಶವಿರುವ ಪಾತ್ರ ಸಿಕ್ಕಿದೆಯಂತೆ. ಚಿತ್ರದಲ್ಲಿ ಅನಿತಾ ಭಟ್‌ ಕೂಡಾ ನಟಿಸಿದ್ದು, ಈ ಹಿಂದೆ ಮಾಡದಂತಹ ಒಂದು ವಿಭಿನ್ನ ಪಾತ್ರ ಅವರಿಗೆ ಸಿಕ್ಕಿದೆಯಂತೆ. ಚಿತ್ರದಲ್ಲಿ ತೆಲುಗು ನಟ ಶಫಿ ಕೂಡಾ ನಟಿಸಿದ್ದಾರೆ. ಇಡೀ ಸಿನಿಮಾ ತುಂಬಾ ನೈಜತೆಯಿಂದ ಕೂಡಿದೆ ಎಂಬುದು ಶಫಿ ಮಾತು.  

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.