ಮರಣ ಪ್ರಮಾಣ ಪತ್ರ: ಆಧಾರ್ ಬೇಕೇ ಬೇಕು
Team Udayavani, Aug 5, 2017, 6:40 AM IST
ಹೊಸದಿಲ್ಲಿ: ಪಾನ್, ತೆರಿಗೆ, ಬ್ಯಾಂಕ್ ಸಹಿತ ಎಲ್ಲೆಡೆ ಆಧಾರ್ ಸಂಖ್ಯೆ ಜೋಡಣೆ ಮಾಡುವುದನ್ನು ಕಡ್ಡಾಯವಾಗಿಸಿರುವ ಕೇಂದ್ರ ಸರಕಾರ, ಈಗ ಮರಣ ನೋಂದಣಿಗೂ ಕಡ್ಡಾಯಗೊಳಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಗೃಹ ಸಚಿವಾಲಯ, ವ್ಯಕ್ತಿಯೊಬ್ಬರು ನಿಧನಹೊಂದಿದ ಬಳಿಕ ಮರಣ ಪ್ರಮಾಣ ಪತ್ರ ಪಡೆಯುವ ಸಂದರ್ಭ ಮೃತರ ಗುರುತು ದೃಢಪಡಿಸಲು ಆಧಾರ್ ಸಂಖ್ಯೆ ನೀಡುವುದು ಕಡ್ಡಾಯವಾಗಿದ್ದು, ಅ. 1ರಿಂದ ಈ ಆದೇಶ ಜಾರಿಗೆ ಬರಲಿದೆ. ಮೃತರ ಗುರುತು ಪತ್ತೆಗೆ ಸಂಬಂಧಿಸಿದಂತೆ ನಡೆಯುವ ವಂಚನೆ ತಡೆಯುವುದು ಸರಕಾರದ ಉದ್ದೇಶವಾಗಿದೆ ಎಂದು ಹೇಳಿದೆ. ಜಮ್ಮು- ಕಾಶ್ಮೀರ, ಅಸ್ಸಾಂ ಮತ್ತು ಮೇಘಾಲಯ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲೂ ಈ ಕ್ರಮ ಜಾರಿಯಾಗಲಿದೆ.
ಆಧಾರ್ ಇಲ್ಲದೆ ರಿಟರ್ನ್ಸ್ ಗೆ ಒಪ್ಪಿಗೆ: ಆಧಾರ್ ಸಂಖ್ಯೆಯನ್ನು ನೀಡದೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ವ್ಯಕ್ತಿಯೊಬ್ಬರಿಗೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಆಧಾರ್ ಇಲ್ಲದೆ ಇರುವಂಥ ಅರ್ಜಿದಾರರ ಪಾನ್ ಕಾರ್ಡ್ ಅಮಾನ್ಯವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ನನ್ನಲ್ಲಿ ಆಧಾರ್ ಇಲ್ಲ. ಆಧಾರ್ನ ಮಾನ್ಯತೆ ಕುರಿತು ಸುಪ್ರೀಂನ ತೀರ್ಪು ಬರುವವರೆಗೂ ನಾನು ಆಧಾರ್ ಮಾಡಿಸುವುದಿಲ್ಲ ಎಂದು ಹೇಳಿ ಪ್ರಶಾಂತ್ ಸುಗತನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಒಪ್ಪಿದ ಕೋರ್ಟ್, ಆಧಾರ್ ಸಂಖ್ಯೆ ಇಲ್ಲದೆಯೇ ಐಟಿ ರಿಟರ್ನ್ಸ್ ಸಲ್ಲಿಸಲು ಅವರಿಗೆ ಅವಕಾಶ ಕಲ್ಪಿಸುವಂತೆ ಐಟಿ ಇಲಾಖೆಗೆ ಸೂಚಿಸಿದೆ.
ರೈಲು ಟಿಕೆಟ್ಗೆ ಆಧಾರ್ ಬೇಕಿಲ್ಲ
ರೈಲುಗಳಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸುವಾಗ ಆಧಾರ್ ಸಂಖ್ಯೆ ನೀಡುವುದು ಕಡ್ಡಾಯವಲ್ಲ ಎಂದು ರೈಲ್ವೇ ಖಾತೆ ಸಹಾಯಕ ಸಚಿವ ರಾಜೆನ್ ಗೊಹಾನಿ ಹೇಳಿದ್ದಾರೆ. ‘ರೈಲು ಟಿಕೆಟ್ ಬುಕ್ ಮಾಡುವಾಗ 12 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆ ಕಡ್ಡಾಯವಾಗಿಸುವ ಪ್ರಸ್ತಾವ ಸದ್ಯಕ್ಕಂತೂ ಇಲಾಖೆ ಮುಂದಿಲ್ಲ’ ಎಂದು ರಾಜ್ಯಸಭೆಗೆ ಶುಕ್ರವಾರ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ