ನ್ಯಾಯಬೆಲೆ ಅಂಗಡಿಗಳಲ್ಲಿ ಪೋಸ್‌ ಯಂತ್ರ:ಉಡುಪಿ-70, ದ.ಕ- 150 ಅಳವಡಿಕೆ


Team Udayavani, Aug 5, 2017, 10:30 AM IST

05-MLR-11.jpg

ಉಡುಪಿ: ನ್ಯಾಯ ಬೆಲೆ ಅಂಗಡಿಗಳಲ್ಲಿ ಪೋಸ್‌ (ಪಾಯಿಂಟ್‌ ಆಫ್ ಸೇಲ್‌= ಪಿಒಎಸ್‌) ಯಂತ್ರ ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಪ್ರಕಾರ ಬಯೋಮೆಟ್ರಿಕ್‌ ಆಧಾರದಲ್ಲಿ ಪಡಿತರವನ್ನು ಗ್ರಾಹಕರಿಗೆ ವಿತರಿಸಬೇಕು. ಆರಂಭದಲ್ಲಿ ಯಂತ್ರ ಅಳವಡಿಸಲು ನ್ಯಾಯಬೆಲೆ ಅಂಗಡಿಯವರು ಹಿಂದೇಟು ಹಾಕುತ್ತಿದ್ದರೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖಾಧಿಕಾರಿಗಳ ಪ್ರಯತ್ನದಿಂದ ಒಂದೊಂದಾಗಿ ಯಂತ್ರವನ್ನು ಅಳವಡಿಸುತ್ತಿವೆ. ಈ ಹಿಂದೆ ಕ್ವಿಂಟಾಲ್‌ಗೆ 70 ರೂ.ಗಳನ್ನು ಅಂಗಡಿಯವರಿಗೆ ಕೊಡುತ್ತಿದ್ದರೆ ಈ ಯಂತ್ರ ಅಳವಡಿಸಿದರೆ ಹೆಚ್ಚುವರಿ ಪ್ರೋತ್ಸಾಹವಾಗಿ 17 ರೂ. ನೀಡಲಾಗುತ್ತಿದೆ. ಒಂದು ವೇಳೆ ಯಂತ್ರವನ್ನು ಅಳವಡಿಸದೆ ಇದ್ದರೆ ಕಾರ್ಡ್‌ ಒಂದಕ್ಕೆ 13 ರೂ. ನೀಡಲಾಗುತ್ತಿದೆ. ಈ ಲೆಕ್ಕಾಚಾರದಲ್ಲಿ ಪೋಸ್‌ ಯಂತ್ರ ಅಳವಡಿಸುವುದೇ ನ್ಯಾಯಬೆಲೆ ಅಂಗಡಿಯವರಿಗೆ ಲಾಭದಾಯಕ. 

ಉಡುಪಿ ಜಿಲ್ಲೆಯ 300 ನ್ಯಾಯಬೆಲೆ ಅಂಗಡಿಗಳಲ್ಲಿ ಸುಮಾರು 70, ದ.ಕ. ಜಿಲ್ಲೆಯ 500 ನ್ಯಾಯಬೆಲೆ ಅಂಗಡಿಗಳಲ್ಲಿ ಸುಮಾರು 150 ಅಂಗಡಿಯವರು ಪೋಸ್‌ ಯಂತ್ರವನ್ನು ಅಳವಡಿಸಿದ್ದಾರೆ. ಇದಕ್ಕೆ ಸಿಸ್ಟಮ್‌, ಇಂಟರ್‌ನೆಟ್‌ ಸಂಪರ್ಕ, ಬಯೋಮೆಟ್ರಿಕ್‌ ಅಳವಡಿಕೆ ಬೇಕು. ಬಯೋಮೆಟ್ರಿಕ್‌ಗಾಗಿ ಆಧಾರ್‌ ಲಿಂಕ್‌ ಮಾಡಿದರೆ ಸಾಕು.
ಉಡುಪಿ ಜಿಲ್ಲೆಯಲ್ಲಿ ಯಾರೂ ನ್ಯಾಯಾಲಯದ ಕಟಕಟೆ ಏರಲಿಲ್ಲ. ಬೇರೆ ಜಿಲ್ಲೆಗಳಲ್ಲಿ ಕೆಲವರು ನ್ಯಾಯಾಲಯದ ಕಟಕಟೆ ಏರಿದ್ದಾರೆನ್ನಲಾಗುತ್ತಿದೆ. ಆದರೆ ಇದೇನಿದ್ದರೂ ಆ ನಿರ್ದಿಷ್ಟ ನ್ಯಾಯಬೆಲೆ ಅಂಗಡಿಗೆ ಮಾತ್ರ ಸೀಮಿತವಾಗಿರುತ್ತದೆ. ಯಂತ್ರ ಅಳವಡಿಸಲು ಸುಮಾರು 15,000 ರೂ. ಖರ್ಚು ತಗಲುವುದಾದರೆ ಕೇವಲ 2-3 ತಿಂಗಳಲ್ಲಿ ಈ ಮೊತ್ತ ವಾಪಸು ಸಿಗುತ್ತದೆ ಎನ್ನುತ್ತಾರೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖಾಧಿಕಾರಿಗಳು.
ಯಂತ್ರ ಅಳವಡಿಸಿದರೆ ಪಡಿತರ ಚೀಟಿಯ ಯಾವನೇ ಒಬ್ಬ ಸದಸ್ಯ ಸ್ವತಃ ಬಂದು ಪಡಿತರವನ್ನು ತೆಗೆದುಕೊಳ್ಳಬೇಕು. ವಯೋವೃದ್ಧರೇನಾದರೂ ಇದ್ದ ಪಕ್ಷದಲ್ಲಿ ಅವರಿಗಾಗಿ ಶೇ. 1 ಕಾರ್ಡ್‌ಗೆ ವಿನಾಯಿತಿ ನೀಡಲಾಗಿದೆ. ಹಿಂದೆ ಆಹಾರ ಧಾನ್ಯಗಳು ಗೋದಾಮಿನಲ್ಲಿ ಉಳಿಯುತ್ತಿರಲಿಲ್ಲ. ಯಂತ್ರ ಅಳವಡಿಸಿದ ಬಳಿಕ 5, 10 ಕ್ವಿಂ. ಧಾನ್ಯಗಳು ಗೋದಾಮಿನಲ್ಲಿ ಉಳಿಯುತ್ತಿವೆ. ಆಹಾರಧಾನ್ಯಗಳು ಅರ್ಹರಿಗೆ ಸಿಗುತ್ತಿವೆ ಎನ್ನುವುದು ಇದರರ್ಥ ಎಂದು ಮೂಲಗಳು ತಿಳಿಸುತ್ತವೆ.

ಪಡಿತರ ವ್ಯವಹಾರವೇ ನಷ್ಟ
“ಯಾವುದೇ ನ್ಯಾಯಬೆಲೆ ಅಂಗಡಿಗಳು ಪಡಿತರ ವಿತರಣೆಯಿಂದ ಲಾಭ ಹೊಂದಿಲ್ಲ. ಸಹಕಾರಿ ಸಂಘಗಳು ಬ್ಯಾಂಕಿಂಗ್‌ ವ್ಯವಹಾರದಿಂದ ಮಾತ್ರ ಬದುಕಿ ಉಳಿದಿವೆ. ಪಡಿತರ ವ್ಯವಹಾರದಿಂದ ಪ್ರತಿವರ್ಷ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ಸೇವಾ ಮನೋಭಾವದಿಂದ ಮಾತ್ರ ಮಾಡಬೇಕು. ಬಹುತೇಕ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಸರಕಾರದ ಧಾನ್ಯಗಳ ಜತೆ ಚಹಾ, ಕಾಫಿ ಹುಡಿ, ಹಲ್ಲುಜ್ಜುವ ಪೇಸ್ಟ್‌, ಎಣ್ಣೆ ಇತ್ಯಾದಿಗಳನ್ನು ಇಟ್ಟುಕೊಳ್ಳುತ್ತೇವೆ. ಸರಕಾರದಿಂದ ಸಿಗುವ ಧಾನ್ಯವನ್ನು ಕೊಂಡೊಯ್ಯುತ್ತಾರೆ ವಿನಾ ಯಾರೂ ಇತರ ಸಾಮಾನುಗಳನ್ನು ಕೊಂಡೊಯ್ಯುವುದಿಲ್ಲ. ಸಿಬಂದಿಯೂ ಇದಕ್ಕಾಗಿ ಗ್ರಾಹಕರನ್ನು ಒತ್ತಾಯಿಸುವುದಿಲ್ಲ. ಇಷ್ಟೆಲ್ಲ ಸಮಸ್ಯೆಗಳಿರುವಾಗ ಪೋಸ್‌ ಯಂತ್ರ ಅಳವಡಿಸಲು ಹೇಳುತ್ತಿದ್ದಾರೆ. ಕಂಪ್ಯೂಟರ್‌ ಸೇರಿದಂತೆ ಪೋಸ್‌ ಯಂತ್ರ ಅಳವಡಿಸಲು 50,000 ರೂ. ಬೇಕು. ಸರಕಾರವೇ ಅಳವಡಿಸಿ ಕೊಟ್ಟರೆ ನಾವು ನಿರ್ವಹಿಸಬಹುದು ಎಂದು ಹೇಳಿದ್ದೇವೆ’ ಎನ್ನುತ್ತಾರೆ ಸಹಕಾರಿ ಸಂಘವೊಂದರ ಅಧ್ಯಕ್ಷರು.

ಧಾನ್ಯಗಳಲ್ಲಿ ತೂಕನಷ್ಟ?
ನ್ಯಾಯಬೆಲೆ ಅಂಗಡಿಯವರು ಧಾನ್ಯಗಳಲ್ಲಿ ತೂಕ ನಷ್ಟವಾಗುತ್ತಿದೆ ಎಂದು ಹೇಳುತ್ತಾರೆ. ಅಕ್ಕಿ ಬರುವುದು ಛತ್ತೀಸ್‌ಗಢದಿಂದ. ರೈಲಿನಿಂದ ಆಹಾರ ಸಾಮಗ್ರಿ ಬರುತ್ತದೆ. ಭಾರತೀಯ ಆಹಾರ ನಿಗಮ, ಆಹಾರ ಇಲಾಖೆ, ಜಿಲ್ಲಾ ಕೇಂದ್ರಗಳು ಹೀಗೆ ಎರಡು ಮೂರು ಬಾರಿ ಲೋಡ್‌ ಅನ್‌ಲೋಡ್‌ ಆಗುತ್ತದೆ. ಹೀಗಾಗಿ ತೂಕದಲ್ಲಿ ನಷ್ಟ ಬರುವುದನ್ನು ಇಲಾಖೆಯವರೂ ಒಪ್ಪಿಕೊಳ್ಳುತ್ತಾರೆ. ಆದರೆ ಸಹಕಾರಿ ಸಂಘಗಳು ಬ್ಯಾಂಕಿಂಗ್‌ ವ್ಯವಹಾರಕ್ಕೆ ಮೊದಲು ಊರಿನಲ್ಲಿ ತಳವೂರಿದ್ದು ಪಡಿತರ ವ್ಯವಸ್ಥೆಯಿಂದ ಎನ್ನುವುದನ್ನೂ ಬೆಟ್ಟುಮಾಡುತ್ತಾರೆ.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.