ಹಿಟ್ಲರ್ ಸಂಸ್ಕೃತಿನಾ ಇದು ? ಕೇಂದ್ರ ಸರ್ಕಾರಕ್ಕೆ ಪಾಠ ಕಲಿಸ್ತೇವೆ!
Team Udayavani, Aug 5, 2017, 11:06 AM IST
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ಕೇಂದ್ರದ ವಿರುದ್ದ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಗುಡುಗಿದ್ದಾರೆ.
ಸುದ್ದಿಗಾರರು ಗುಜರಾತ್ನಲ್ಲಿ ರಾಹುಲ್ ಗಾಂಧಿ ಅವರ ಕಾರಿನತ್ತ ಕಲ್ಲು ತೂರಿರುವ ಬಗ್ಗೆ ಕೇಳಿದಾಗ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ‘ರಾಹುಲ್ ಅವರು ಗುಜರಾತ್ಗೆ ಕೋಮು ಗಲಭೆ ಮಾಡಿಸಲು ಹೋಗಿದ್ದರಾ? ಅವರು ಪ್ರವಾಹ ಸಂತ್ರಸ್ತ್ರರನ್ನು ಭೇಟಿಯಾಗಿ ಸಾಂತ್ವನ ಹೇಳಲು ಹೋಗಿದ್ದರು. ಅದಕ್ಕೂ ಅವಕಾಶ ನೀಡುವುದಿಲ್ಲ ಅಂತಾದರೆ ಇದೇನು ಹಿಟ್ಲರ್ ಸಂಸ್ಕೃತಿಯಾ? ಸರ್ವಾಧಿಕಾರಿ ವ್ಯವಸ್ಥೆಯಾ ? ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ. ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದರು.
ಡಿ.ಕೆ.ಶಿವಕುಮಾರ್ ಅವರ ಮೇಲಿನ ಐಟಿ ದಾಳಿ ಕುರಿತಾಗಿ ಪ್ರಶ್ನಿಸಿದಾಗ ‘ನೋಡಿ ಕಾನೂನು ರೀತಿ ಏನು ಹೋರಾಟ ಮಾಡಬೇಕೋ ಅದನ್ನು ಮಾಡುತ್ತೇವೆ. ಶಿವಕುಮಾರ್ ಅವರಿಗೇನು ಕಾನೂನು ಗೊತ್ತಿಲ್ವಾ? ‘ಎಂದರು.
‘ಯಾರ ಮೇಲೆ ಬೇಕಾದರೂ ದಾಳಿ ಮಾಡಬಹುದು, ಆದರೆ ಒಬ್ಬ ಕ್ಯಾಬಿನೆಟ್ ಸಚಿವನ ಮನೆ ಮೇಲೆ ಸಿಆರ್ಪಿಎಫ್ ಪಡೆಗಳನ್ನು ಬಳಸಿ ದಾಳಿ ಮಾಡಬೇಕಿತ್ತಾ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟು ಹೋಗಿದೆಯಾ? ಇಲ್ಲಿ ಪೊಲೀಸರು ಭದ್ರತೆ ನೀಡುವುದಿಲ್ಲವೆ’ ಎಂದು ಕಿಡಿಕಾರಿದರು.
‘ದಾಳಿ ಮಾಡಲಿ ಬಿಜೆಪಿಯವರ ಮೇಲೂ ಮಾಡಲಿ. ಯಡಿಯೂರಪ್ಪನ ಮೇಲೆ ಆರೋಪ ಇಲ್ಲವೆ? ಅನಂತ್ ಕುಮಾರ್ ವಿರುದ್ಧ ಇಲ್ಲವೆ? ಸದಾನಂದ ಗೌಡರ ವಿರುದ್ಧ ಇಲ್ಲವೆ , ಈಶ್ವರಪ್ಪ ನಿವಾಸದಲ್ಲಿ ನೋಟು ಎಣಿಸುವ ಯಂತ್ರ ಸಿಕ್ಕಿರಲಿಲ್ಲವೆ? ಅವರೆಲ್ಲರ ಮನೆಗಳ ಮೇಲೂ ದಾಳಿ ನಡೆಸಲಿ’ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ