ಆಯಿಲ್‌ಮಿಲ್‌ ಕಟ್ಟಡದಲ್ಲಿ ಪರೀಕ್ಷೆ!


Team Udayavani, Aug 5, 2017, 3:06 PM IST

05-DV-1.jpg

ಜಗಳೂರು: ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಕಟ್ಟಡ ಗುರುತಿಸಬೇಕಾಗಿದ್ದ ಇಲ್ಲಿನ ಐಟಿಐ ಕಾಲೇಜು ಪ್ರಾಂಶುಪಾಲರ ದಿವ್ಯ ನಿರ್ಲಕ್ಷ ದಿಂದಾಗಿ ವಿದ್ಯಾರ್ಥಿಗಳು ಶಿಥಿಲಾವಸ್ಥೆಯ ಆಯಿಲ್‌ಮಿಲ್‌ ಕಟ್ಟಡದಲ್ಲಿ ಪರೀಕ್ಷೆ ಬರೆಯುವಂತಾಗಿದೆ. ಇಲ್ಲಿನ ಮಿನಿವಿಧಾನ ಸೌಧದ ಹಿಂಭಾಗದಲ್ಲಿರುವ ಹಳೆಯ ಕಾಲದ ಆಯಿಲ್‌ಮಿಲ್‌ ಕಟ್ಟಡದ ಕೊಠಡಿಗಳಲ್ಲಿ ಆ.3ರಿಂದ ಆರಂಭವಾಗಿರುವ ಅಖೀಲ ಭಾರತ ವೃತ್ತಿ ಪರೀಕ್ಷೆಗಳನ್ನು ವಿವಿಧ ಐಟಿಐ ಕಾಲೇಜಿನ 230 ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಅವ್ಯವಸ್ಥೆ ಮತ್ತು ಅಸುರಕ್ಷತೆಯಿಂದ ಕೂಡಿರುವ ಪರೀಕ್ಷಾ ಕೇಂದ್ರ, ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಸಹಜವಾಗಿ ಹದಗೆಡಿಸಿದೆ.

ಶೈಕ್ಷಣಿಕ ಭವಿಷ್ಯ ನಿರ್ಧರಿಸುವ ಮಹತ್ವದ ಪರೀಕ್ಷೆಯನ್ನು ಉತ್ತಮ ವಾತಾವರಣದಲ್ಲಿ ಬರೆಯಬೇಕಾಗಿದ್ದ ವಿದ್ಯಾರ್ಥಿಗಳು ಹತ್ತಾರು ಸಮಸ್ಯೆಗಳ ಕಿರಿಕಿರಿ ಅನುಭವಿಸುತ್ತಿದ್ದಾರೆ. ಸೂಕ್ತ ಗಾಳಿ ಇಲ್ಲ, ಬೆಳಕಿಲ್ಲ. ಹಲವು ಕೊಠಡಿಗಳಿಗೆ ಬಾಗಿಲು ಹೊರತುಪಡಿಸಿದರೆ ಕಿಟಕಿಗಳೇ ಇಲ್ಲ. ಒಟ್ಟಾರೆ ಮೂಲ ಸೌಲಭ್ಯಗಳಿಲ್ಲದೇ ವಂಚಿತವಾಗಿದೆ. ಆಗಲೂ ಈಗಲೂ ಬಿದ್ದು ಹೋಗುವ ಶಿಥಿಲಾವಸ್ಥೆಯ ಅವೈಜ್ಞಾನಿಕ ಕಟ್ಟಡದಲ್ಲಿ ಪರೀಕ್ಷೆಗಳನ್ನು ನಡೆಸುತ್ತಿರುವುದಕ್ಕೆ
ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಪರೀಕ್ಷೆ ಆರಂಭದಿಂದ ಮುಕ್ತಾಯವರೆಗೂ ಪರೀಕ್ಷಾ ಕೇಂದ್ರದಲ್ಲಿ ಮೊಕ್ಕಂ ಹೂಡಬೇಕಾಗಿದ್ದ ನಿಯೋಜಿತ ಸ್ಥಾನಿಕ ಪರಿವೀಕ್ಷಕರು ಪರೀಕ್ಷೆಯ ಮಧ್ಯೆದಲ್ಲಿ ತಮ್ಮ ಇಲಾಖಾ ಕಚೇರಿಗೆ ಹೋಗಿ ಬರುತ್ತಿರುವುದು ಪರೀಕ್ಷಾ ಕೇಂದ್ರದಲ್ಲಿ ಹೇಳುವರು ಕೇಳುವರು ಇಲ್ಲದಂತಾಗಿದೆ ಎಂಬ ದೂರು ಕೇಳಿಬರುತ್ತಿದೆ. ಪರೀಕ್ಷಾ ಕೇಂದ್ರಕ್ಕೆ ಪೊಲೀಸ್‌ ಸಿಬ್ಬಂದಿ ಕೂಡಾ ಅಲ್ಲಿಲ್ಲ. ಪರೀಕ್ಷಾ ಕೇಂದ್ರಕ್ಕೆ ಯಾರಾದರೂ ಅಪರಿಚಿತರು ಬಂದು ಹೋಗುವುದಕ್ಕೆ ನಿರ್ಬಂಧವಿಲ್ಲ. ಒಟ್ಟಾರೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯ ಗಂಭೀರತೆ ಇಲ್ಲವಾಗಿರುವುದು ದುರಂತವೇ ಸರಿ.

ಪ್ರತಿ ಸಾರಿಯೂ ಇಲ್ಲೇ ಪರೀಕ್ಷೆ..
“ಸೂಕ್ತ ಗಾಳಿ, ಬೆಳಕು, ಇತರೇ ಮೂಲ ಸೌಲಭ್ಯವನ್ನು ಹೊಂದಿರುವ ಕಟ್ಟಡವನ್ನು ಗುರುತಿಸಬೇಕಾದ ಜವಾಬ್ದಾರಿ ಸ್ಥಳೀಯ ಪರೀಕ್ಷಾ ಮಂಡಳಿಯ ಅಧ್ಯಕ್ಷರದು. ಪಟ್ಟಣದಲ್ಲಿ ಸಾಕಷ್ಟು ಸರ್ಕಾರಿ ಅಥವಾ ಖಾಸಗಿ ಶಾಲಾ ಕಟ್ಟಡಗಳಿವೆ. ಅಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಬಹುದಾಗಿತ್ತು. ಆದರೆ ಪ್ರತಿ ಸಾರಿಯೂ ಆಯಿಲ್‌ಮಿಲ್‌ ಕಟ್ಟಡವನ್ನು ಪರೀಕ್ಷಾ ಕೇಂದ್ರಕ್ಕೆ ಆಯ್ಕೆ ಮಾಡಿಕೊಳ್ಳುತ್ತಿರುವ ಇದರ ಹಿಂದಿನ ಮರ್ಮ ಗೊತ್ತಾಗುತ್ತಿಲ್ಲ. ಪ್ರತಿ ಸಾರಿಯೂ ಐಟಿಐ ಪರೀಕ್ಷೆಗಳನ್ನು ಗುಪ್ತವಾಗಿ ನಡೆಸುತ್ತಿದ್ದಾರೆ.
ಮಹಾಲಿಂಗಪ್ಪ, ಎಸ್‌ಎಫ್‌ಐ ಜಿಲ್ಲಾ ಮುಖಂಡ

ಅವ್ಯವಹಾರ ನಡೆದಿಲ್ಲ..
ನಿಯೋಜನೆಯಂತೆ ಪರೀಕ್ಷೆ ಆರಂಭದಿಂದ ಮುಕ್ತಾಯವರೆಗೂ ಪರೀಕ್ಷಾ ಕೇಂದ್ರದಲ್ಲಿ ಸ್ಥಾನಿಕ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸುತ್ತೇನೆ ಯಾವುದೇ ಅವ್ಯವಹಾರ ನಡೆದಿಲ್ಲ. ನಡೆಯಲು ಬಿಡುವುದಿಲ್ಲ.
ಈಶ್ವರಚಂದ್‌, ಕ್ಷೇತ್ರಶಿಕ್ಷಣಾದಿಕಾರಿ

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.