ಸ್ಥಳೀಯ ಜನಪ್ರತಿನಿಧಿಗಳ ಶ್ರಮ ಮಹತ್ವದ್ದು : ಖಾದರ್
Team Udayavani, Aug 6, 2017, 6:10 AM IST
ಮಂಜನಾಡಿ: ಜಿಲ್ಲೆಯಲ್ಲಿ ಮಂಜೂರಾಗಿರುವ ಮೌಲನಾ ಆಜಾದ್ ಮಾದರಿ ಶಾಲೆಯಲ್ಲಿ ಮಂಗಳಾಂತಿಯ ಮಾದರಿ ಶಾಲೆಯೂ ಒಂದಾಗಿದ್ದು, ಈ ಶಾಲೆಯನ್ನು ಇಲ್ಲಿ ಪ್ರಾರಂಭಿಸಲು ಸ್ಥಳೀಯ ಜನಪ್ರತಿನಿಧಿಗಳ ಶ್ರಮ ಮಹತ್ವದಾಗಿದ್ದು, ಇದನ್ನು ರಾಜ್ಯದಲ್ಲಿಯೇ ಮಾದರಿ ಶಾಲೆಯನ್ನಾಗಿ ಮಾಡುವ ಗುರಿಯನ್ನು ಹೊಂದಬೇಕು ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು.
ಮಂಜನಾಡಿ ಗ್ರಾಮದ ಮಂಗಳಾಂತಿಯಲ್ಲಿ ಕರ್ನಾಟಕ ಸರಕಾರ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ಆರಂಭಿಸಲಾದ ಮೌಲನಾ ಆಜಾದ್ ಮಾದರಿ ಶಾಲೆ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಒಂದು ಯೋಜನೆಯನ್ನು ಸರಕಾರ ಮಂಜೂರಾತಿ ಮಾಡುವಾಗ ಅದನ್ನು ತಮ್ಮ ಕ್ಷೇತ್ರಕ್ಕೆ ಒದಗಿಸಲು ಹಲವು ಮಂದಿ ಹಲವು ರೀತಿಯಲ್ಲಿ ಪ್ರಯತ್ನ ಪಡುತ್ತಾರೆ. ಮಂಗಳಾಂತಿಯಲ್ಲಿ ಆರಂಭ ಗೊಂಡ ನೂತನ ಶಾಲೆಯ ನಿರ್ಮಾಣದ ಹಿಂದೆ ಇರುವ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್.ಎಸ್. ಕರೀಂ ಅವರ ಶ್ರಮ ಶ್ಲಾಘನೀಯ ಎಂದ ಅವರು ಅಲ್ಪಸಂಖ್ಯಾಕ ಸಮುದಾಯದ ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಸಮುದಾಯ ವಿದ್ಯಾರ್ಥಿಗಳಿಗೆ ಶೇ.75 ಹಾಗೂ ಇತರ ವಿದ್ಯಾರ್ಥಿಗಳಿಗೆ ಶೇ.25 ಮೀಸಲಾತಿ ಇರುವುದರಿಂದ ಸರಕಾರದ ವ್ಯವಸ್ಥೆಗೆ ಅನುಗುಣವಾಗಿ ಈ ಶಾಲೆಯಲ್ಲಿ ಉಚಿತ ಶಿಕ್ಷಣ ಪಡೆಯಲು ಅವಕಾಶ ಇದೆ ಎಂದರು.ಜಿ.ಪಂ. ಮಾಜಿ ಸದಸ್ಯ ಎನ್.ಎಸ್. ಕರೀಂ ಅವರನ್ನು ಗೌರವಿಸಲಾಯಿತು.
“ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ’
ಅಲ್ಪಸಂಖ್ಯಾಕ ಇಲಾಖೆಗೆ ಈ ಹಿಂದಿನ ಸರಕಾರ ಅವಧಿಯಲ್ಲಿ 400 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದ್ದು, ಈಗಿನ ರಾಜ್ಯ ಸರಕಾರ 2,200 ಕೋಟಿ ರೂ. ಮಂಜೂರು ಮಾಡಿದೆ. ಎಲ್ಲ ಮೊತ್ತದ ಸದ್ಬಳಕೆ ಮಾಡಲು ಉತ್ತಮ ಅವಕಾಶವಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಯು.ಟಿ. ಖಾದರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ