ಚೋಟಾ ರಾಜನ್ ಸಹಚರ,ಮೋಸ್ಟ್ ವಾಂಟೆಡ್ ವಿನೇಶ್ ಶೆಟ್ಟಿ ಅರೆಸ್ಟ್
Team Udayavani, Aug 6, 2017, 8:50 AM IST
ಉಳ್ಳಾಲ: ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಂಡು ವಿಚಾರಣೆಗೆ ಹಾಜರಾಗದೆ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ, ಚೋಟಾ ರಾಜನ್ ಸಹಚರ ವಿನೇಶ್ ಶೆಟ್ಟಿ (44) ಯನ್ನು ಕೊಣಾಜೆ ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಉಡುಪಿ ಯ ಶಿರ್ವ ನಿವಾಸಿಯಾಗಿದ್ದ ವಿನೇಶ್ ಶೆಟ್ಟಿ 2003 ರಲ್ಲಿ ಕಪ್ಪು ಕಲ್ಲು ಕೋರೆ ಮಾಲೀಕ ವೇಣುಗೋಪಾಲ ನಾಯಕ್ ಮತ್ತು ಅವರ ಚಾಲಕ ಸಂತೋಷ್ ಎಂಬವರನ್ನು ಮುಡಿಪು ಇರಾ ಕ್ರಾಸ್ ಸಮೀಪ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇದರಲ್ಲಿ ಜಾಮೀನು ಪಡೆದಿದ್ದ ಆರೋಪಿ ವಿನೇಶ್ 2015 ರವರೆಗೂ ವಿಚಾರಣೆಗೆ ಹಾಜರಾಗುತ್ತಿದ್ದ. ಬಳಿಕ ತಲೆಮರೆಸಿಕೊಂಡಿದ್ದ ವಿನೇಶ್ ವಿರುದ್ದ ವಾರಂಟ್ ಜಾರಿ ಮಾಡಲಾಗಿತ್ತು.
ವಿನೇಶ್ ವಿರುದ್ಧ ಮುಂಬೈ, ದಾವಣೆಗೆರೆ, ಪುಣೆ, ಹೈದರಬಾದ್, ಮಂಗಳೂರಿನಲ್ಲಿ ಕೊಲೆ, ಅಕ್ರಮ ಶಸ್ತ್ರಾಸ್ತ್ರ , ಕೊಲೆ, ಕೊಲೆಯತ್ನ ಸಹಿತ ಹಲವು ಪ್ರಕರಣಗಳು ದಾಖಲಾಗಿವೆ. ನಟೋರಿಯಸ್ ಕ್ರಿಮಿನಲ್ ಆಗಿದ್ದ ವಿನೇಶ್ ಮುಂಬೈನಲ್ಲಿ ಛೋಟಾ ಶಕೀಲ್ ಸಹಚರನಾಗಿ ಕಾರ್ಯನಿರ್ವಹಿಸುತ್ತಿದ್ದ.
ಕೊಣಾಜೆ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಮತ್ತು ಎಸ್. ಐ ಸುಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.
ಮುಂಬೈನಲ್ಲಿ ನಾಲ್ಕು ಕೊಲೆ ಪ್ರಕರಣ, ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣ, ಮಂಗಳೂರಿನಲ್ಲಿ ಎರಡು ಕೊಲೆ, ದಾವಣಗೆರೆ ಡಕಾಯಿತಿ ಪ್ರಕರಣ, ಪುಣೆಯ ಅಹಮದ್ ನಗರದಲ್ಲಿ 3 ಕೋಟಿ ಹವಾಲಾ ಹಣ ಲೂಟಿ ಗೈದ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ.
ಛೋಟಾ ರಾಜನ್ ಸಹಚರನಾಗಿದ್ದ ಈತ ಬಳಿಕ ಹೇಮಂತ್ ಪೂಜಾರಿ ಜತೆಗೆ ಕುಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು