ಮಹದಾಯಿ: ಬಿಎಸ್‌ವೈ ಬದಲು ಪ್ರಧಾನಿ ಮಧ್ಯಸ್ಥಿಕೆಗೆ ಹಕ್ಕೊತ್ತಾಯ


Team Udayavani, Aug 7, 2017, 11:25 AM IST

hub2.jpg

ಹುಬ್ಬಳ್ಳಿ: ಮಹದಾಯಿ ನೀರು ಹಂಚಿಕೆ ವಿಷಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಗೋವಾ ಸಿಎಂ ಬದಲು ಪ್ರಧಾನಿ ಮೋದಿ ಭೇಟಿ ಮಾಡಿ ಮಧ್ಯಸ್ಥಿಕೆ ವಹಿಸಿ ಪರಿಹರಿಸಲು ಮನವರಿಕೆ ಮಾಡಬೇಕೆಂದು ಮಹದಾಯಿ, ಕಳಸಾ-ಬಂಡೂರಿ ಹೋರಾಟ ಸಮನ್ವಯ ಸಮಿತಿ ಒತ್ತಾಯಿಸಿದೆ. 

ರವಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಮುಖಂಡರಾದ ಮಹೇಶ ಪತ್ತಾರ, ವಿಕಾಸ ಸೊಪ್ಪಿನ, ಮಹದಾಯಿ ನೀರು ಹಂಚಿಕೆ ವಿಷಯವಾಗಿ ಗೋವಾ ಸಿಎಂ ಮನೋಹರ ಪರ್ರಿಕರ್‌ ಅಲ್ಲಿನ ವಿಧಾನಸಭೆಯಲ್ಲಿ ಮಹದಾಯಿ ವಿವಾದಕ್ಕೆ ಪರಿಹಾರವಿಲ್ಲ ಹಾಗೂ ಪಕ್ಷದ ನೆಲೆಯಲ್ಲಿ ಮಾತುಕತೆಗಳ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿ ಹೇಳಿದ್ದಾರೆ.

ಆದರೂ ರಾಜ್ಯದ ರಾಜಕೀಯ ನಾಯಕರು, ಸರಕಾರ ಸುಮ್ಮನಿರುವುದು ಏಕೆ. ಇಂತಹ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಸಂಸದರು, ರೈತ ಮುಖಂಡರೊಂದಿಗೆ ಪರ್ರಿಕರ್‌ ಭೇಟಿ ಮಾಡಿ ಮಾತುಕತೆ ನಡೆಸುವುದರಲ್ಲಿ ಅರ್ಥವಿಲ್ಲ. ಬದಲಿಗೆ ಪ್ರಧಾನಿ ಭೇಟಿ ಮಾಡಿ ರಾಜ್ಯದ ಮಹದಾಯಿ ನೀರಿನ ಹಕ್ಕು, ಅಗತ್ಯತೆ ಕುರಿತು ಮನವರಿಕೆ ಮಾಡಿ, ಮಧ್ಯಸ್ಥಿಕೆ ವಹಿಸುವಂತೆ  ಆಗ್ರಹಿಸುವುದೇ ಸೂಕ್ತ ಎಂದರು.  

ಮಹದಾಯಿ ನೀರು ಹಂಚಿಕೆ ವಿಷಯವಾಗಿ ಈ ಭಾಗದಲ್ಲಿ 2 ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ ಉಭಯ ಸರಕಾರಗಳು ಸ್ಪಂದಿಸುತ್ತಿಲ್ಲ. ಬಿಜೆಪಿ ಸಂಸದರು, ಶಾಸಕರು ಕೂಡ ಪ್ರಧಾನಿ ಬಳಿ ಚಕಾರವೆತ್ತುತ್ತಿಲ್ಲ. ಎಲ್ಲ ಪಕ್ಷದವರು ಇದರಲ್ಲಿ ಮತ ಬ್ಯಾಂಕ್‌ ಮತ್ತು ರಾಜಕಾರಣ ಮಾಡುತ್ತಿದ್ದಾರೆ ಎಂದರು. 

ಪಕ್ಷಗಳಿಗೆ ರಾಜಕೀಯ ಹೊಡೆತ: ರಾಜ್ಯ ಸರಕಾರ ಮಹದಾಯಿ ಯೋಜನೆ ಸರಿಯಾಗಿದೆ ಎಂದು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಅದು ನ್ಯಾಯಾಧೀಕರಣಕ್ಕೆ ನೀಡುತ್ತಿರುವ ಅಂಕಿ-ಸಂಖ್ಯೆಯೂ ಸರಿಯಾಗಿಲ್ಲ. ಆದ್ದರಿಂದ ಸಮಸ್ಯೆಗೆ ತಾರ್ಕಿಕ ಅಂತ್ಯ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮಿತಿಯ 4-5 ಸದಸ್ಯರ ನಿಯೋಗ ವಾರದೊಳಗೆ ಜಲ ಸಂಪನ್ಮೂಲ ಇಲಾಖೆಯ ಹಾಲಿ ಮತ್ತು ಮಾಜಿ ಸಚಿವರು,

-ನೀರಾವರಿ ತಜ್ಞರು, ತಾಂತ್ರಿಕ ತಜ್ಞರು, ಕಾನೂನು ತಜ್ಞರು, ಮಹದಾಯಿ ಯೋಜನೆಯ ಪ್ರಮುಖರು, ರೈತ ಮುಖಂಡರು ಹಾಗೂ ಇದಕ್ಕೆ ಸಂಬಂಧಿಸಿದವರನ್ನು ಭೇಟಿ ಮಾಡಿ ಅವರಿಂದ ಮಾಹಿತಿ ಸಂಗ್ರಹಿಸಿ, ಹೋರಾಟದ ರೂಪರೇಷೆಗಳನ್ನು ಬದಲಿಸಲಾಗುವುದು.

ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಲು ಚಿಂತನೆ ನಡೆಸಲಾಗುವುದು. ಇನ್ನೆರಡು ತಿಂಗಳಲ್ಲಿ ಎಲ್ಲ ಪಕ್ಷದವರಿಗೂ ರಾಜಕೀಯ ಹೊಡೆತ ಕೊಡಲಾಗುವುದು. ಮುಂದಿನ ದಿನಗಳಲ್ಲಿ ಮಹದಾಯಿ ಹೋರಾಟಕ್ಕೆ ಹೊಸ ಸ್ವರೂಪ ನೀಡಲಾಗುವುದು ಎಂದರು.  

ರಾಜ್ಯ ಸರಕಾರವು ಕಳಸಾ- ಬಂಡೂರಿ ತಿರುವು ಯೋಜನೆಯಲ್ಲಿ ಕೆಲವು ತಾಂತ್ರಿಕ ಮಾರ್ಪಾಡು ಮಾಡಬೇಕು. ಅದರಲ್ಲಿನ ನ್ಯೂನತೆಗಳನ್ನು ಸರಿಪಡಿಸಬೇಕು. ಮಹದಾಯಿ ನದಿ ನೀರು ಹರಿವಿಗೆ ಅಡ್ಡಲಾಗಿ ನಿರ್ಮಿಸಲಾದ ತಡೆಗೋಡೆ ತೆರವುಗೊಳಿಸಿದರೆ ರಾಜ್ಯಕ್ಕೆ ನೈಸರ್ಗಿಕವಾಗಿ ಅಂದಾಜು 3.5 ಟಿಎಂಸಿಯಷ್ಟು ನೀರು ಹರಿದು ಬರುತ್ತದೆ ಎಂದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.